Don't Miss!
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿಂಗ್ ಪ್ರಕರಣ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
Recommended Video
ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ.
ಬಿಹಾರ ಪೊಲೀಸರು ಸಲ್ಲಿಸಿದ್ದ ಎಫ್ ಐ ಆರ್ ಕಾನೂನು ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಂಬೈ ಪೊಲೀಸರು ತನಿಖೆಗೆ ಸಹರಿಕಬೇಕು, ತನಿಖೆಯ ದಾಖಲೆಗಳನ್ನುಸಿಬಿಐಗೆ ಹಸ್ತಾಂತರಿಸಬೇಕೆಂದು ಸುಪ್ರೀಂ ಕೊರ್ಟ್ ಆದೇಶಿಸಿದೆ.
ಸಿಬಿಐ ತನಿಖೆಗೆ ಮುಂಬೈ ಪೊಲೀಸರ ವಿರೋಧವಿತ್ತು. ಸುಪ್ರೀಂ ಕೋರ್ಟ್ ತೀರ್ಪಿನಿಂದ ರಿಯಾ ಮತ್ತು ಮುಂಬೈ ಪೊಲೀಸರಿಗೆ ಹಿನ್ನಡೆಯಾಗಿದೆ. ಈ ಮಹತ್ವದ ತೀರ್ಪು ಸುಶಾಂತ್ ಕುಟುಂಬಕ್ಕೆ ಸಿಕ್ಕ ಮೊದಲ ಜಯವಾಗಿದೆ.
ಸುಶಾಂತ್ ಸಾವಿನ ಪ್ರಕರಣದ ತನಿಖೆ ವಿಚಾರದಲ್ಲಿ ಮುಂಬೈ ಪೊಲೀಸರು ಮತ್ತು ಬಿಹಾರ ಪೊಲೀಸರ ನಡುವೆ ಹಗ್ಗಜಗ್ಗಾಟ ನಡೆಯುತ್ತಿತ್ತು. ಬಿಹಾರ ಪೊಲೀಸರು ಸುಪ್ರೀಂ ಕೋರ್ಟಿ ಗೆ ಸಲ್ಲಿಸಿದ ಅರ್ಜಿಯಲ್ಲಿ ಮಹಾರಾಷ್ಟ್ರ ಪೊಲೀಸರು ರಾಜಕೀಯ ಒತ್ತಡದಿಂದ ಎಫ್ ಐ ಆರ್ ದಾಖಲಿಸಿಲ್ಲ. ಬಿಹಾರ ಪೊಲೀಸರಿಗೆ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದರು.
34 ವರ್ಷದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ಬಾಂದ್ರಾ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಮೇಲ್ನೋಟಕ್ಕೆ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮುಂಬೈ ಪೊಲೀಸರು ಹೇಳಿದ್ದರು. ಸುಶಾಂತ್ ಸಾವಿನ ಪ್ರಕರಣವನ್ನು ವಿವಿದ ಆಂಗಲ್ ಗಳಲ್ಲಿ ತನಿಖೆ ನಡೆಸುತ್ತಿದ್ದರು. ಇದೀಗ ಸುಶಾಂತ್ ಸಿಂಗ್ ಪ್ರಕರಣ ಸಿಬಿಐ ಅಂಗಳದಲ್ಲಿದೆ.