'ಪದ್ಮಾವತ್' ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ ಕೋರ್ಟ್
ದೀಪಿಕಾ ಪಡುಕೋಣೆ ಅಭಿನಯದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ರಾಷ್ಟ್ರಾದ್ಯಂತ ವಿವಾದಕ್ಕೆ ಒಳಗಾಗಿರುವ 'ಪದ್ಮಾವತ್' ಚಿತ್ರ ಬಿಡುಗಡೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
'ಪದ್ಮಾವತ್' ಚಿತ್ರ ಬಿಡುಗಡೆಗೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಲಾಗಿದ್ದ ಎರಡು ಅರ್ಜಿಗಳನ್ನ ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಆ ಮೂಲಕ 'ಪದ್ಮಾವತ್' ಬಿಡುಗಡೆಗೆ ಇದ್ದ ತೊಡಕು ದೂರವಾಗಿದೆ.
'ಪದ್ಮಾವತ್' ಚಿತ್ರ ಬಿಡುಗಡೆಗೆ ವಿರೋಧಿಸಿ ರಜಪೂತ ಕರಣಿ ಸೇನೆ ಸದಸ್ಯರು ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ 'ಪದ್ಮಾವತ್' ಚಿತ್ರ ಬಿಡುಗಡೆ ಆದರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂದು ರಾಜಸ್ಥಾನ ಹಾಗೂ ಮಧ್ಯಪ್ರದೇಶ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 'ಪದ್ಮಾವತ್' ಚಿತ್ರ ಬಿಡುಗಡೆಗೆ ತಡೆ ಕೋರಿ ಎರಡು ರಾಜ್ಯಗಳ ಪರವಾಗಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ತಿರಸ್ಕರಿಸಿದೆ.

''ಸಿನಿಮಾ ನೋಡಲು ಇಷ್ಟವಿಲ್ಲದವರು, ಅದನ್ನ ವೀಕ್ಷಿಸಬೇಡಿ. ಆದರೆ, ಚಿತ್ರದ ಪ್ರದರ್ಶನವನ್ನ ಬ್ಯಾನ್ ಮಾಡಲು ಸಾಧ್ಯವಿಲ್ಲ'' ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೂ, 'ಪದ್ಮಾವತ್' ಬಿಡುಗಡೆ ವಿರೋಧಿಸಿ ಪ್ರತಿಭಟನೆ ಕಮ್ಮಿ ಆಗಿಲ್ಲ.
ಅಂದ್ಹಾಗೆ, ಸೆನ್ಸಾರ್ ಪ್ರಕ್ರಿಯೆ ಮುಗಿಸಿರುವ 'ಪದ್ಮಾವತ್' ಸಿನಿಮಾ ಜನವರಿ 25 ರಂದು ಬಿಡುಗಡೆ ಆಗಲಿದೆ. ಅಂದೇ ಭಾರತ್ ಬಂದ್ ಮಾಡಲು ಕರಣಿ ಸೇನೆ ಸದಸ್ಯರು ಮುಂದಾಗಿದ್ದಾರೆ.


Click it and Unblock the Notifications











