Don't Miss!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿಂಗ್ ಅಭಿಮಾನಿಗಳಿಂದ 'ಬಾಯ್ಕಟ್ ರಾಧೇ' ಅಭಿಯಾನ
ಸಲ್ಮಾನ್ ಖಾನ್ ಅಭಿನಯದ ರಾಧೇ ಸಿನಿಮಾ ಈದ್ ಹಬ್ಬದ ಪ್ರಯುಕ್ತ ಒಟಿಟಿಯಲ್ಲಿ ತೆರೆಕಂಡಿದೆ. ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿರೋಧವೇ ಹೆಚ್ಚಿದೆ.
ಈ ನಡುವೆ ಸುಶಾಂತ್ ಸಿಂಗ್ ಅಭಿಮಾನಿಗಳ ಆಕ್ರೋಶಕ್ಕೂ ರಾಧೇ ಸಿನಿಮಾ ಗುರಿಯಾಗಿದೆ. ಸುಶಾಂತ್ ಸಿಂಗ್ ಇಲ್ಲದೇ ಬಾಲಿವುಡ್ ಇಲ್ಲ, ಸೋ 'ಬಾಯ್ಕಟ್ ರಾಧೇ' ಎಂದು ಕೆಲವರು ಸಲ್ಲು ಚಿತ್ರ ವಿರೋಧಿಸಿದ್ದಾರೆ.
'ರಾಧೇ ಅತ್ಯಂತ ಕೆಟ್ಟ ಸಿನಿಮಾ, ಪ್ರಭುದೇವ ಹಾಳು ಮಾಡಿದ್ದಾರೆ' ಎಂದ ನಟಿ
ಸುಶಾಂತ್ ಸಿಂಗ್ ಫಾಲೋವರ್ಸ್ ಟ್ವಿಟ್ಟರ್ನಲ್ಲಿ Boycottradhe, BoycottBollywood ಎಂಬ ಹ್ಯಾಷ್ಟ್ಯಾಗ್ಗಳನ್ನು ಟ್ರೆಂಡಿಂಗ್ ಮಾಡಿದ್ದಾರೆ. ಬಿಟೌನ್ ಪ್ರಭಾವಿಗಳಿಂದ ಸುಶಾಂತ್ ಸಾಯಬೇಕಾಯಿತು. ಆ ಪ್ರಭಾವಿಗಳಲ್ಲಿ ಸಲ್ಮಾನ್ ಖಾನ್ ಸಹ ಇದ್ದಾರೆ ಎಂದು ಟೀಕಿಸುತ್ತಿದ್ದಾರೆ.
2020 ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡ್ತಿದ್ದು, ಅಂತಿಮ ವರದಿ ಸಲ್ಲಿಸಿಲ್ಲ. ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಸುಶಾಂತ್ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದ್ದರೂ ಸುಶಾಂತ್ ಕುಟುಂಬ ಹಾಗೂ ಇನ್ನು ಕೆಲವರು ಇದು ಕೊಲೆ ಎಂದು ಆರೋಪಿಸಿದರು. ಈ ಹಿನ್ನೆಲೆ ಸಿಬಿಐಗೆ ಈ ಕೇಸ್ ವರ್ಗಾಯಿಸಲಾಗಿದೆ.
'ರಾಧೇ' ಚಿತ್ರವನ್ನು ಪ್ರಭುದೇ ನಿರ್ದೇಶನ ಮಾಡಿದ್ದು, ದಿಶಾ ಪಟಾನಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರಣದೀಪ್ ಹೂಡಾ, ಜಾಕಿ ಶ್ರಾಫ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.