Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುಶಾಂತ್ ಸಿಂಗ್ ಅಭಿಮಾನಿಗಳಿಂದ 'ಬಾಯ್ಕಟ್ ರಾಧೇ' ಅಭಿಯಾನ
ಸಲ್ಮಾನ್ ಖಾನ್ ಅಭಿನಯದ ರಾಧೇ ಸಿನಿಮಾ ಈದ್ ಹಬ್ಬದ ಪ್ರಯುಕ್ತ ಒಟಿಟಿಯಲ್ಲಿ ತೆರೆಕಂಡಿದೆ. ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿರೋಧವೇ ಹೆಚ್ಚಿದೆ.
ಈ ನಡುವೆ ಸುಶಾಂತ್ ಸಿಂಗ್ ಅಭಿಮಾನಿಗಳ ಆಕ್ರೋಶಕ್ಕೂ ರಾಧೇ ಸಿನಿಮಾ ಗುರಿಯಾಗಿದೆ. ಸುಶಾಂತ್ ಸಿಂಗ್ ಇಲ್ಲದೇ ಬಾಲಿವುಡ್ ಇಲ್ಲ, ಸೋ 'ಬಾಯ್ಕಟ್ ರಾಧೇ' ಎಂದು ಕೆಲವರು ಸಲ್ಲು ಚಿತ್ರ ವಿರೋಧಿಸಿದ್ದಾರೆ.
'ರಾಧೇ ಅತ್ಯಂತ ಕೆಟ್ಟ ಸಿನಿಮಾ, ಪ್ರಭುದೇವ ಹಾಳು ಮಾಡಿದ್ದಾರೆ' ಎಂದ ನಟಿ
ಸುಶಾಂತ್ ಸಿಂಗ್ ಫಾಲೋವರ್ಸ್ ಟ್ವಿಟ್ಟರ್ನಲ್ಲಿ Boycottradhe, BoycottBollywood ಎಂಬ ಹ್ಯಾಷ್ಟ್ಯಾಗ್ಗಳನ್ನು ಟ್ರೆಂಡಿಂಗ್ ಮಾಡಿದ್ದಾರೆ. ಬಿಟೌನ್ ಪ್ರಭಾವಿಗಳಿಂದ ಸುಶಾಂತ್ ಸಾಯಬೇಕಾಯಿತು. ಆ ಪ್ರಭಾವಿಗಳಲ್ಲಿ ಸಲ್ಮಾನ್ ಖಾನ್ ಸಹ ಇದ್ದಾರೆ ಎಂದು ಟೀಕಿಸುತ್ತಿದ್ದಾರೆ.
2020 ಜೂನ್ 14 ರಂದು ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಈ ಪ್ರಕರಣವನ್ನು ಸಿಬಿಐ ತನಿಖೆ ಮಾಡ್ತಿದ್ದು, ಅಂತಿಮ ವರದಿ ಸಲ್ಲಿಸಿಲ್ಲ. ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಸುಶಾಂತ್ ಶವ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದ್ದರೂ ಸುಶಾಂತ್ ಕುಟುಂಬ ಹಾಗೂ ಇನ್ನು ಕೆಲವರು ಇದು ಕೊಲೆ ಎಂದು ಆರೋಪಿಸಿದರು. ಈ ಹಿನ್ನೆಲೆ ಸಿಬಿಐಗೆ ಈ ಕೇಸ್ ವರ್ಗಾಯಿಸಲಾಗಿದೆ.
'ರಾಧೇ' ಚಿತ್ರವನ್ನು ಪ್ರಭುದೇ ನಿರ್ದೇಶನ ಮಾಡಿದ್ದು, ದಿಶಾ ಪಟಾನಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ರಣದೀಪ್ ಹೂಡಾ, ಜಾಕಿ ಶ್ರಾಫ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.