Don't Miss!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- News Chardham Yatra Guidelines 2024: ಚಾರ್ಧಾಮ್ ಯಾತ್ರೆಗೆ ಹೋಗುವಾಗ ಈ ವಸ್ತುಗಳನ್ನು ಬ್ಯಾಗ್ ಅಲ್ಲಿ ಇಟ್ಟುಕೊಳ್ಳಿ....
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಾ ವಿರುದ್ಧ ಹೇಳಿಕೆ ನೀಡುವಂತೆ ಸುಶಾಂತ್ ಕುಟುಂಬ ಒತ್ತಡ ಹೇರುತ್ತಿದೆ: ಸುಶಾಂತ್ ಗೆಳೆಯನ ಆರೋಪ
ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸುಶಾಂತ್ ಸಿಂಗ್ ತಂದೆ ಕೆಕೆ ಸಿಂಗ್ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಿಸಿದ ಬಳಿಕ ಪ್ರಕರಣ ಮತ್ತಷ್ಟು ಬೆಳವಣಿಗೆ ಪಡೆದುಕೊಂಡಿದೆ.
ಸುಶಾಂತ್ ಕುಟುಂಬದವರು ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸುಶಾಂತ್ ಮನೆಯಲ್ಲಿದ್ದ ಲ್ಯಾಪ್ ಟಾಪ್, ಚಿನ್ನ, ಹಣ ಮತ್ತು ಸುಶಾಂತ್ ಮೆಡಿಕಲ್ ಪಾತ್ರಗಳನ್ನುದ ದೋಚಿಕೊಂಡು ಹೋಗಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಸುಶಾಂತ್ ಸಿಂಗ್ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಅನ್ನು ರಿಯಾ ಬಳಸುತ್ತಿದ್ದರು ಎನ್ನುವ ಆರೋಪ ರಿಯಾ ಮೇಲಿದೆ. ಈ ನಡುವೆ ಸುಶಾಂತ್ ಗೆಳೆಯ ಸಿದ್ಧಾರ್ಥ್, ಸುಶಾಂತ್ ಕುಟುಂಬದ ವಿರುದ್ಧ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಮುಂದೆ ಓದಿ..
ಸುಶಾಂತ್ ಸಿಂಗ್ ಜೀವಕ್ಕೆ ಅಪಾಯವಿದೆ ಎಂದು ಮೊದಲೇ ಕೊಟ್ಟಿದ್ದರು ದೂರು!
ಮುಂಬೈ ಪೊಲೀಸರಿಗೆ ಸುಶಾಂತ್ ಗೆಳೆಯನ ಇಮೇಲ್
ಸುಶಾಂತ್ ಸಿಂಗ್ ಮತ್ತು ರಿಯಾ ಚಕ್ರವರ್ತಿ ಇಬ್ಬರ ಗೆಳೆಯ ಸಿದ್ದಾರ್ಥ್ ಸುಶಾಂತ್ ಕುಟುಂಬದ ವಿರುದ್ಧ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಮುಂಬೈ ಪೊಲೀಸರಿಗೆ ಇಮೇಲ್ ಮಾಡಿರುವ ಸಿದ್ಧಾರ್ಥ್, ರಿಯಾ ಚಕ್ರವರ್ತಿ ವಿರುದ್ಧ ಹೇಳಿಕೆ ನೀಡುವಂತೆ ಸುಶಾಂತ್ ಕುಟುಂಬದವರು ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಸುಶಾಂತ್ ಗೆಳೆಯನ ಹೇಳಿಕೆ
"ಸುಶಾಂತ್ ಕುಟುಂಬದಿಂದ 3 ಫೋನ್ ಕರೆಗಳು ಬಂದಿವೆ. ಅವರು ನನಗೆ ರಿಯಾ ಚಕ್ರವರ್ತಿ, ಸುಶಾಂತ್ ಹಣವನ್ನು ಖರ್ಚು ಮಾಡಿರುವ ಬಗ್ಗೆ ಹೇಳಿಕೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಸುಶಾಂತ್ ಅವರ ಕುಟುಂಬ ಸದಸ್ಯರು, ಸಹೋದರಿ ಮೀತು ಸಿಂಗ್, ಸಂಬಂಧಿ ಒಪಿ ಸಿಂಗ್ ನನ್ನ ಜೊತೆ ಜುಲೈ 22ರಂದು ಕಾನ್ಫರೆನ್ಸ್ ಕರೆಯಲ್ಲಿ ಮಾತನಾಡಿದ್ದಾರೆ. ಒಂದು ಅಪರಿಚಿತ ಫೋನ್ ನಂಬರ್ ಕೂಡ ಇತ್ತು. ಮತ್ತೆ 27ರಂದು ಇದೇ ರೀತಿಯ ಕರೆ ಮಾಡಿದ್ದರು. ರಿಯಾ ವಿರುದ್ಧ ಹೇಳಿಕೆ ನೀಡಿ ಎಂದು ಕೇಳಿಕೊಂಡರು. ನನಗೆ ತಿಳಿದಿಲ್ಲದ ವಿಷಯಗಳ ಕುರಿತು ಹೇಳಿಕೆ ನೀಡುವಂತೆ ಹೇಳುತ್ತಿದ್ದಾರೆ" ಎಂದು ಸುಶಾಂತ್ ಕುಟುಂಬದವರ ವಿರುದ್ಧ ಆರೋಪ ಮಾಡಿದ್ದಾರೆ.
ನನ್ನ ಮೇಲೆ ಸುಶಾಂತ್ ಕುಟುಂಬದ ಒತ್ತಡವಿದೆ
ರಿಯಾ ವಿರುದ್ಧ ಬಿಹಾರ್ ಪೊಲೀಸರಿಗೆ ಹೇಳಿಕೆ ನೀಡುವಂತೆ ಹೇಳಿದ್ದಾರೆ. ವಾಟ್ಸಾಪ್ ಗೆ ಅಪರಿಚಿತ ಫೋನ್ ಕರೆ ಬಂತು ಆದರೆ 40 ಸೆಕೆಂಡ್ ಗಳಲ್ಲಿ ಕಟ್ ಆಯಿತು. ಯಾವುದೆ ಹೇಳಿಕೆ ದಾಖಲಾಗಿಲ್ಲ. ಎಂದು ಸುಶಾಂತ್ ಗೆಳೆಯ ಸಿದ್ಧಾರ್ಥ್ ಪೊಲೀಸರಿಗೆ ಇಮೇಲ್ ಮಾಡಿದ್ದಾರೆ. ರಿಯಾ ವಿರುದ್ಧ ಹೇಳಿಕೆಗಳನ್ನು ಹೇಳುವಂತೆ ಮತ್ತು ದಾಖಲಿಸುವಂತೆ ಒತ್ತಡವಿದೆ ಎಂದು ಹೇಳಿದ್ದಾರೆ.
ವಿಚಾರಣೆ ವರ್ಗಾವಣೆಗೆ ಮನವಿ
ಬಿಹಾರದಲ್ಲಿ ದಾಖಲಾದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ರಿಯಾ ಸುಪ್ರಿಂ ಕೋರ್ಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬಿಹಾರದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ತನಿಖೆಯನ್ನು ಮುಂಬೈಗೆ ವರ್ಗಾಯಿಸಿಕೊಳ್ಳಲು ರಿಯಾ ಪ್ರಯತ್ನ ಪಡುತ್ತಿದ್ದಾರೆ.