Don't Miss!
- News ಮತದಾನಕ್ಕೆ ಕೌಂಟ್ಡೌನ್: ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಸಿದ್ಧತೆ ಹೇಗಿದೆ?-ಮಾಹಿತಿ
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Automobiles ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- Lifestyle ತಾವರೆಯ ಬೀಜವನ್ನು ಹಾಲಿನ ಜೊತೆ ಸೇವಿಸಿದರೆ ಇಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರಳ ಜನರ ಪರಿಹಾರಕ್ಕೆ ಸುಶಾಂತ್ ನೀಡಿದ ಹಣ ಎಷ್ಟು?
ಕೇರಳ ಜನತೆ ನೆರವಿಗೆ ಸಾಮಾನ್ಯ ಜನರ ಜೊತೆಗೆ ದೊಡ್ಡ ದೊಡ್ಡ ನಟರು ಸಹ ಕೈ ಜೋಡಿಸುತ್ತಿದ್ದಾರೆ. ಇದೀಗ ಬಾಲಿವುಡ್ ಚಿತ್ರರಂಗದ ಮತ್ತೊಬ್ಬ ನಟ ಸುಶಾಂತ್ ಸಿಂಗ್ ರಜಪೂತ್ ಕಷ್ಟದಲ್ಲಿ ಇರುವ ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಕೇರಳ ಜನರ ಸಹಾಯಕ್ಕಾಗಿ 1 ಕೋಟಿ ರೂಪಾಯಿಯನ್ನು ನೀಡಿದ್ದಾರೆ. ಈ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಜಮಾ ಮಾಡಿದ್ದಾರೆ. ಈ ವಿಷಯವನ್ನು ತನ್ನ ಇನ್ಟಾಗ್ರಾಮ್ ಖಾತೆಯ ಮೂಲಕ ತಿಳಿಸಿರುವ ಅವರು ಹಣ ಜಮಾ ಮಾಡಿದ ವಿವರದ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ.
A post shared by Sushant Singh Rajput (@sushantsinghrajput) on
ಕೊಡಗಿನ ಮಕ್ಕಳಿಗೆ ಹೃದಯಪೂರ್ವಕವಾಗಿ ನೆರವಾದ ಕನ್ನಡ ಸಿನಿತಾರೆಯರು
ವಿಶೇಷ ಅಂದರೆ, ಈ ಹಣವನ್ನು ಸುಶಾಂತ್ ತಮ್ಮ ಅಭಿಮಾನಿಗಳ ಪರವಾಗಿ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಬಾಲಿವುಡ್ ನಟಿಯರಾದ ಸನ್ನಿ ಲಿಯೋನ್ ಹಾಗೂ ಪೂನಂ ಪಾಂಡೆ ಕೂಡ ಸಂತ್ರಸ್ಥರಿಗೆ ನೆರವು ನೀಡಿದ್ದರು.
ಕೇರಳ ಜನತೆಯ ನೆರವಿಗೆ ಬಂದ ನಟಿ ಪೂನಂ ಪಾಂಡೆ
'ಧೋನಿ ದಿ ಅನ್ ಟೋಲ್ಡ್ ಸ್ಟೋರಿ' ಸಿನಿಮಾ ಮೂಲಕ ದೇಶಾದ್ಯಂತ ಜನಪ್ರಿಯತೆ ಪಡೆದ ನಟ ಸುಶಾಂತ್ ಸಿಂಗ್ ರಜಪೂತ್ ಈಗ ನಾಲ್ಕು ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ.