Don't Miss!
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹಳ ದಿನದಿಂದ ತಲೆಮರೆಸಿಕೊಂಡಿದ್ದ ಸುಶಾಂತ್ ಸಿಂಗ್ ಸ್ನೇಹಿತ ಅರೆಸ್ಟ್
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಕೇಸ್ಗೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯ ಬಂಧನವಾಗಿದೆ. ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ ಸುಶಾಂತ್ ಸಿಂಗ್ ಸ್ನೇಹಿತ ಕುನಾಲ್ ಜಾನಿಯನ್ನು ಎನ್ಸಿಬಿ ಅಧಿಕಾರಿಗಳು ಮುಂಬೈನ್ ಖಾರ್ ಪ್ರದೇಶದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
''ಡ್ರಗ್ಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿವಂಗತ ನಟ ಸುಶಾಂತ್ ಸಿಂಗ್ ಗೆಳಯ ಕುನಾಲ್ ಜಾನಿಯನ್ನು ಮುಂಬೈ ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ'' ಎಂದು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
ಸುಶಾಂತ್ ಸಿಂಗ್ ಫ್ಲ್ಯಾಟ್ ಸ್ನೇಹಿತ ಸಿದ್ಧಾರ್ಥ್ ಬಂಧಿಸಿದ ಎನ್ಸಿಬಿ
ಕುನಾಲ್ ಜಾನಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಎನ್ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಇಂಡಿಯಾ ಟುಡೇಗೆ ಪ್ರತಿಕ್ರಿಯಿಸಿದ್ದು, "ಡ್ರಗ್ ಪೆಡ್ಲರ್ಗಳೊಂದಿಗಿನ ಸಂಪರ್ಕ ಮತ್ತು ಕಳೆದ ವರ್ಷ ಎನ್ಸಿಬಿ ಭೇದಿಸಿದ ಡ್ರಗ್ ಸಿಂಡಿಕೇಟ್ ಬಗ್ಗೆ ಕುನಾಲ್ ಜಾನಿಯನ್ನು ತನಿಖೆ ನಡೆಸಲಾಗುತ್ತಿದೆ'' ಎಂದು ಮಾಹಿತಿ ನೀಡಿದ್ದಾರೆ.
ಕುನಾಲ್ ಜಾನಿ ಮಾದಕ ದ್ರವ್ಯ ಮಾರಾಟ ಮತ್ತು ಗ್ರಾಹಕರಿಗೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಸಿದ್ಧಾರ್ಥ್ ಪಿತಾನಿಗೆ ಜಾಮೀನು ತಿರಸ್ಕಾರ
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಮತ್ತೊಬ್ಬ ಸ್ನೇಹಿತ ಹಾಗೂ ಫ್ಲ್ಯಾಟ್ಮೆಟ್ ಸಿದ್ಧಾರ್ಥ್ ಪಿಥಾನಿಯನ್ನು ಎನ್ಸಿಬಿ ಪೊಲೀಸರು ಬಂಧಿಸಿದ್ದರು. ಸಿದ್ಧಾರ್ಥ್ ಪರ ವಕೀಲರು ಜಾಮೀನಿಗಾಗಿ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಆದರೆ, ಕೋರ್ಟ್ ಜಾಮೀನು ನೀಡಲು ನಿರಾಕರಿಸಿತ್ತು. ಮೇ 26 ರಂದು ಹೈದರಾಬಾದ್ನಲ್ಲಿ ಮುಂಬೈ ಮೂಲದ ಎನ್ಸಿಬಿ ಪೊಲೀಸರು ಸಿದ್ದಾರ್ಥ್ರನ್ನು ಬಂಧಿಸಿದ್ದರು. ಸುಶಾಂತ್ ಸಿಂಗ್ ಸಾವಿಗೂ ಮುನ್ನ ಫ್ಲ್ಯಾಟ್ನಲ್ಲಿ ನಾಲ್ಕು ಜನರು ಇದ್ದರು ಎಂಬ ಮಾಹಿತಿ ಇದೆ. ಅದರಲ್ಲಿ ಸಿದ್ಧಾರ್ಥ್ ಪಿಥಾನಿ ಸಹ ಒಬ್ಬರು.
ಸುಶಾಂತ್ ಸಿಂಗ್ ಆತ್ಮಹತ್ಯೆ?
ಜೂನ್ 14, 2020ರಲ್ಲಿ ಮುಂಬೈನ ಫ್ಲ್ಯಾಟ್ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಶವ ಪತ್ತೆಯಾಗಿತ್ತು. ಅನುಮಾನಸ್ಪಾದ ಸಾವು ಎಂಬ ಕಾರಣಕ್ಕೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಸ್ನೇಹಿತರು, ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದರು. ಬಳಿಕ, ಈ ಕೇಸ್ ಸಿಬಿಐಗೆ ವರ್ಗಾವಣೆ ಆಯಿತು. ಇದೇ ಪ್ರಕರಣದಲ್ಲಿ ಎನ್ಸಿಬಿ ಅಧಿಕಾರಿಗಳು ಸಹ ತನಿಖೆ ನಡೆಸಿದ್ದು, ಹಲವು ಸೆಲೆಬ್ರಿಟಿಗಳು ಹಾಗೂ ಅವರ ಜೊತೆ ಸಂಪರ್ಕದಲ್ಲಿದ್ದ ಆಪ್ತರನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಕೇಸ್ನಲ್ಲಿ ಸುಶಾಂತ್ ಸಿಂಗ್ ಗೆಳತಿ, ನಟಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಶೋವಿಕ್ ಮತ್ತು ಸ್ಯಾಮುಯೆಲ್ ಮಿರಾಂಡಾ ಮತ್ತು ದೀಪೇಶ್ ಸಾವಂತ್ ಸೇರಿದಂತೆ ಹಲವರನ್ನು ಎನ್ಸಿಬಿ ಬಂಧಿಸಿತ್ತು. ನಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದರು.