Don't Miss!
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- News Samsung: ಮಾರುಕಟ್ಟೆ ಗ್ರ್ಯಾಂಡ್ ಎಂಟ್ರಿ ನೀಡಿದೆ ನ್ಯೂ ಫೋನ್
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಲ್ಮಾನ್ ಕೃಷ್ಣಮೃಗ ಬೇಟೆಯಾಡಲು ಪ್ರಚೋದನೆ ನೀಡಿದ್ದೇ ಈ ನಟಿಯಂತೆ.!
Recommended Video
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಐದು ವರ್ಷ ಜೈಲು ಶಿಕ್ಷೆಯಾಗಿದೆ. ಆದ್ರೆ, ಆ ದಿನ ಸಲ್ಲು ಜೊತೆಯಲ್ಲಿದ್ದ ನಾಲ್ಕು ಜನ ಕಲಾವಿರದನ್ನ ಸಾಕ್ಷ್ಯಾಧಾರದ ಕೊರತೆಯಿಂದ ನಿರ್ದೋಷಿಗಳೆಂದು ಜೋಧ್ ಪುರ ನ್ಯಾಯಾಲಯ ತೀರ್ಮಾನಿಸಿದೆ.
ಸುಮಾರು 20 ವರ್ಷಗಳ ಹಿಂದಿನ ಈ ಪ್ರಕರಣದಲ್ಲಿ ಸಲ್ಲುಗೆ ಮಾತ್ರ ಶಿಕ್ಷೆಯಾಗಿರುವುದು ಕೆಲ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಂದು ರಾತ್ರಿ ಕೃಷ್ಣಮೃಗದ ಮೇಲೆ ಸಲ್ಲು ಗುಂಡು ಹಾರಿಸಿದ್ದರು ಎಂಬುದು ಪ್ರತ್ಯಕ್ಷದರ್ಶಿಯ ಹೇಳಿಕೆ ಸಲ್ಲುಗೆ ಈ ಶಿಕ್ಷೆ ನೀಡುವಂತೆ ಮಾಡಿದೆ.
ಆದ್ರೆ, ಈ ಪ್ರಕರಣದಲ್ಲಿ ಹೊಸ ಟ್ವಿಸ್ಟ್ ಏನಪ್ಪಾ ಅಂದ್ರೆ, ಅಂದು ಬಂದೂಕಿನ ಪ್ರಚೋದಕವನ್ನು ಎಳೆಯಲು ನಟಿ ಟಬು ಪ್ರಚೋದಿಸಿದರು. ಅದರ ಪರಿಣಾಮವೇ ಸಲ್ಲು ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗ್ತಿದೆ. ಸರ್ಪ್ರೈಸ್ ಅಂದ್ರೆ, ಈ ಪ್ರಕರಣದಲ್ಲಿ ಸಲ್ಮಾನ್ ಖಾನ್ ಗೆ ಪ್ರಚೋದನೆ ನೀಡಿದ ನಟಿ ಟಬು ಮೊದಲನೇಯದಾಗಿ ನಿರ್ದೋಷಿಯಾಗಿದ್ದಾರೆ.
ಸಲ್ಮಾನ್ ಗೆ ಮಾತ್ರ ದೋಷಿ ಪಟ್ಟ ಯಾಕೆ, ಉಳಿದವರು ಖುಲಾಸೆಯಾಗಿದ್ದು ಹೇಗೆ?
ಸೆಪ್ಟೆಂಬರ್ 26, 1998 ರಲ್ಲಿ 'ಹಮ್ ಸಾಥ್ ಸಾಥ್ ಹೇ' ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ಸಮಯದಲ್ಲಿ, ಜೋಧ್ ಪುರ ಬಳಿಯ ಮಥಾನಿಯಾದಲ್ಲಿರುವ ಭವಾದ್ ನಲ್ಲಿ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದ ಆರೋಪ ಸಲ್ಮಾನ್ ಖಾನ್ ವಿರುದ್ಧ ಕೇಳಿ ಬಂತು. ಕಂಕಾನಿ ಗ್ರಾಮದಲ್ಲಿ ಎರಡು ಕೃಷ್ಣ ಮೃಗಗಳನ್ನು ಬೇಟೆಯಾಡಿದ ಸಂದರ್ಭದಲ್ಲಿ ಸಲ್ಮಾನ್ ಖಾನ್ ಜೊತೆಗೆ ಜಿಪ್ಸಿಯಲ್ಲಿ ಸೋನಾಲಿ ಬೇಂದ್ರೆ, ಸೈಫ್ ಅಲಿ ಖಾನ್, ಟಬು ಹಾಗೂ ನೀಲಂ ಕೂಡ ಇದ್ದರು.
ಏನಿದು ಕೃಷ್ಣಮೃಗ ಬೇಟೆ ಪ್ರಕರಣ? ನೀವು ತಿಳಿದುಕೊಳ್ಳಬೇಕಾದ ಸಂಗತಿಗಳು
ರಾತ್ರಿ ಬಂದೂಕು ಸದ್ದು ಕೇಳಿಬಂದ ಕೂಡಲೆ ನಿದ್ರೆಯಿಂದ ಎಚ್ಚೆತ್ತ ಗ್ರಾಮಸ್ಥರು, ಓಡಿಬಂದು ನೋಡಿದಾಗ ಕೃಷ್ಣಮೃಗಗಳು ಸತ್ತು ಬಿದ್ದಿದ್ದವು. ಸಲ್ಮಾನ್ ಖಾನ್ ಕೈಯಲ್ಲಿ ಬಂದೂಕು ಇದ್ದದ್ದನ್ನ ಕೆಲವರು ಗಮನಿಸಿದರು. ತಕ್ಷಣ ಅಲ್ಲಿಂದ ತಪ್ಪಿಸಿಕೊಳ್ಳಲು ಸಲ್ಮಾನ್ ಹಾಗೂ ಸ್ನೇಹಿತರು ಪ್ರಯತ್ನ ಪಟ್ಟಾಗ ಜಿಪ್ಸಿಯನ್ನ ಗ್ರಾಮಸ್ಥರು ಅಟ್ಟಿಸಿಕೊಂಡು ಹೋದರು. ಬಳಿಕ ಬಿಷ್ಣೋಯಿ ಸಮುದಾಯ ಹಾಗೂ ಅರಣ್ಯ ಕಾವಲುಗಾರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.