Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತನುಶ್ರೀ ದತ್ತಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ವಿವೇಕ್ ಅಗ್ನಿಹೋತ್ರಿ
ಕಳೆದ ಒಂದು ವಾರದಿಂದ ಬಾಲಿವುಡ್ ನಲ್ಲಿ ನಟಿ ತನುಶ್ರೀ ದತ್ತಾ ಬಿಗ್ ಬ್ರೇಕಿಂಗ್ ನ್ಯೂಸ್ ಮಾಡುತ್ತಿದ್ದಾರೆ. ವರ್ಷಗಳ ಹಿಂದೆ ನಡೆದ ಘಟನೆಯನ್ನು ಸಂದರ್ಶನವೊಂದರಲ್ಲಿ ಮೆಲುಕು ಹಾಕುತ್ತಾ ನಟ ನಾನಾ ಪಾಟೇಕರ್ ವಿರುದ್ಧ ತನುಶ್ರೀ ದತ್ತಾ ಲೈಂಗಿಕ ಕಿರುಕುಳದ ಆರೋಪವನ್ನ ಮಾಡಿದರು.
ಬಳಿಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ವಿರುದ್ಧವೂ ತನುಶ್ರೀ ದತ್ತಾ ಬಾಂಬ್ ಸಿಡಿಸಿದರು. 'ಚಾಕಲೇಟ್: ಡೀಪ್ ಡಾರ್ಕ್ ಸೀಕ್ರೆಟ್ಸ್' ಎಂಬ ಸಿನಿಮಾದಲ್ಲಿ ತನುಶ್ರೀ ದತ್ತಾಗೆ ವಿವೇಕ್ ಅಗ್ನಿಹೋತ್ರಿ ''ಬಟ್ಟೆ ಬಿಚ್ಚಿ ಕ್ಯೂ ಕೊಡು'' ಅಂತ ಹೇಳಿದ ಸಂಗತಿಯನ್ನೂ ಬಯಲು ಮಾಡಿದರು.
ತನುಶ್ರೀ ದತ್ತಾ ಧೈರ್ಯಕ್ಕೆ ಮೆಚ್ಚಿ ಹಲವು ನಟ-ನಟಿಯರು ಆಕೆಯ ಪರ ದನಿಯೆತ್ತಿದರು. ದಿನೇ ದಿನೇ ಈ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ, ನಾನಾ ಪಾಟೇಕರ್ ಹಾಗೂ ವಿವೇಕ್ ಅಗ್ನಿಹೋತ್ರಿ ಕಾನೂನಿನ ಮೊರೆ ಹೋಗಿದ್ದಾರೆ. ಮುಂದೆ ಓದಿರಿ...
ತನುಶ್ರೀ ದತ್ತಾ ವಿರುದ್ಧ ಕೇಸ್ ಹಾಕಿದ ನಾನಾ ಪಾಟೇಕರ್
ನಟಿ ತನುಶ್ರೀ ದತ್ತಾ ವಿರುದ್ಧ ನಾನಾ ಪಾಟೇಕರ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಮಾಡಿರುವ ತನುಶ್ರೀ ದತ್ತಾಗೆ ಇಂದು ನಾನಾ ಪಾಟೇಕರ್ ಲೀಗಲ್ ನೋಟೀಸ್ ಕಳುಹಿಸಿದ್ದಾರೆ.
ನಾನಾ ಪಾಟೇಕರ್ ಬಗ್ಗೆ ಲೈಂಗಿಕ ಕಿರುಕುಳದ ಬಾಂಬ್ ಸಿಡಿಸಿದ ತನುಶ್ರೀ ದತ್ತಾ.!
ಮಾನನಷ್ಟ ಮೊಕದ್ದಮೆ ದಾಖಲಿಸಿದ ವಿವೇಕ್ ಅಗ್ನಿಹೋತ್ರಿ
ನಟಿ ತನುಶ್ರೀ ದತ್ತಾ ವಿರುದ್ಧ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಅಲ್ಲದೇ, ತನುಶ್ರೀ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಎಂದು ವಿವೇಕ್ ಅಗ್ನಿಹೋತ್ರಿ ಪರವಾಗಿ ವಕೀಲರು ಸ್ಪಷ್ಟ ಪಡಿಸಿದ್ದಾರೆ.
ತನುಶ್ರೀ ದತ್ತಾಗೆ 'ಬಟ್ಟೆ ಬಿಚ್ಚು' ಅಂತ ಹೇಳಿದ್ನಂತೆ ಬಾಲಿವುಡ್ ನಿರ್ದೇಶಕ.!
ವಿವೇಕ್ ಅಗ್ನಿಹೋತ್ರಿ ವಿರುದ್ಧ ತನುಶ್ರೀ ದತ್ತಾ ಹೇಳಿದ್ದೇನು.?
''ಇರ್ಫಾನ್ ಖಾನ್ ಗೆ ನಾನು ಕ್ಯೂ ಕೊಡಬೇಕು ಅಂತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಸೂಚಿಸಿದರು. ಅಷ್ಟಕ್ಕೂ, ಅದು ನನ್ನ ಶಾಟ್ ಆಗಿರಲಿಲ್ಲ. ಇರ್ಫಾನ್ ಖಾನ್ ಅವರ ಕ್ಲೋಸಪ್ ಶಾಟ್ ಆಗಿತ್ತು. ಅವರು ಏನನ್ನೋ ನೋಡಿಕೊಂಡು ಎಕ್ಸ್ ಪ್ರೆಶನ್ ಕೊಡಬೇಕಿತ್ತು. ಆಗ ನಿರ್ದೇಶಕ ನನ್ನನ್ನ ಕರೆದು - ''ಹೋಗಿ ಬಟ್ಟೆ ಬಿಚ್ಚಿ ಡ್ಯಾನ್ಸ್ ಮಾಡು, ಅವರಿಗೆ ಕ್ಯೂ ಕೊಡು'' ಅಂದ್ರು'' ಎಂದು ಸಂದರ್ಶನದಲ್ಲಿ ತನುಶ್ರೀ ದತ್ತಾ ಹೇಳಿದ್ದರು.
ತನುಶ್ರೀ ದತ್ತಾ ಆರೋಪಕ್ಕೆ ನಾನಾ ಪಾಟೇಕರ್ ಕೊಟ್ಟ ಸ್ಪಷ್ಟನೆ ಏನು.?
ನಾನಾ ಪಾಟೇಕರ್ ವಿರುದ್ಧ ತನುಶ್ರೀ ದತ್ತಾ ಮಾಡಿದ ಆರೋಪ ಏನು.?
''ಹಾರ್ನ್ ಓಕೆ ಪ್ಲೀಸ್' ಚಿತ್ರದ ಸ್ಪೆಷಲ್ ಹಾಡಿಗೆ ಡ್ಯಾನ್ಸ್ ಮಾಡುವಾಗ ನನ್ನೊಂದಿಗೆ ನಾನಾ ಪಾಟೇಕರ್ ಅಸಭ್ಯವಾಗಿ ವರ್ತಿಸಿದ್ದರು. ಮಹಿಳೆಯರ ಜೊತೆಗೆ ನಾನಾ ಪಾಟೇಕರ್ ಹೇಗೆ ವರ್ತಿಸುತ್ತಾರೆ ಅಂತ ಇಂಡಸ್ಟ್ರಿಯಲ್ಲಿ ಇರುವವರಿಗೆ ಗೊತ್ತಿದೆ. ಆದ್ರೆ, ಅದರ ಬಗ್ಗೆ ಯಾರೂ ಮಾತನಾಡುವುದಿಲ್ಲ. ಮಹಿಳೆಯರಿಗೆ ನಾನಾ ಪಾಟೇಕರ್ ಗೌರವ ಕೊಡಲ್ಲ. ಕೆಲ ನಟಿಯರ ಮೇಲೆ ನಾನಾ ಪಾಟೇಕರ್ ಕೈ ಮಾಡಿದ್ದಾರೆ... ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಯಾರೂ ಕೂಡ ವರದಿ ಮಾಡಿಲ್ಲ'' ಎಂದು ಸಂದರ್ಶನವೊಂದರಲ್ಲಿ ತನುಶ್ರೀ ದತ್ತಾ ಬೇಸರ ವ್ಯಕ್ತಪಡಿಸಿದ್ದರು. ಇದೇ ಈಗ ಬಾಲಿವುಡ್ ನಲ್ಲಿ ದೊಡ್ಡ ವಿವಾದ ಆಗಿದೆ.