Don't Miss!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ವೈರಸ್ ಭೀತಿ: ತಲೈವಿ ಚಿತ್ರಕ್ಕೆ ಮತ್ತೆ ನಿರಾಸೆ
ಕೊರೊನಾ ವೈರಸ್ ಎರಡನೇ ಅಲೆಯಿಂದ ಮತ್ತೊಂದು ಚಿತ್ರ ಸಂಕಷ್ಟಕ್ಕೆ ಸಿಲುಕಿದೆ. ಭಾರತೀಯ ಚಿತ್ರ ಪ್ರಪಂಚದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ತಲೈವಿ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದೆ.
ಈ ಮೊದಲು ನಿರ್ಧರಿಸಿದಂತೆ ಏಪ್ರಿಲ್ 23 ರಂದು ತಲೈವಿ ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ತೆರೆಗೆ ಬರಬೇಕಿತ್ತು. ಅದಕ್ಕೆ ಬೇಕಾದ ತಯಾರಿ ಸಹ ನಡೆದಿತ್ತು. ಆದರೆ ದೇಶದಲ್ಲಿ ಕೋವಿಡ್ ಪ್ರಕರಣ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಂಡ ಪರಿಣಾಮ ಬಿಡುಗಡೆಯಿಂದ ಹಿಂದೆ ಸರಿದಿದೆ.
'ತಲೈವಿ'ಗಾಗಿ 20 ಕೆಜಿ ತೂಕ ಹೆಚ್ಚಿಸಿಕೊಂಡಿದ್ದ ಕಂಗನಾ: ಗಮನ ಸೆಳೆಯುತ್ತಿದೆ ಹೊಸ ಲುಕ್
ಈ ಕುರಿತು ಚಿತ್ರತಂಡ ಅಧಿಕೃತವಾಗಿ ಪ್ರಕಟಣೆ ಬಿಡುಗಡೆ ಮಾಡಿದೆ. ''ನಮ್ಮ ಚಿತ್ರಕ್ಕೆ ಸಿಕ್ಕಿರುವ ಪ್ರೀತಿಗೆ ಧನ್ಯವಾದ. ಏಕಕಾಲದಲ್ಲಿ ಎಲ್ಲಾ ಭಾಷೆಯಲ್ಲಿ ಸಿನಿಮಾ ರಿಲೀಸ್ ಮಾಡಬೇಕಿದೆ. ಆದರೆ ದೇಶದ ಕೆಲವು ಭಾಗಗಳಲ್ಲಿ ಕೊರನಾ ಕೇಸ್ ಹೆಚ್ಚಾಗುತ್ತಿರುವ ಕಾರಣ ಸದ್ಯಕ್ಕೆ ತಲೈವಿ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಮುಂದಿನ ದಿನಾಂಕವನ್ನು ತಿಳಿಸುತ್ತೇವೆ'' ಎಂದು ಹೇಳಿದೆ.
ಕೊರೊನಾ ಕಾಟಕ್ಕೆ ತಲೈವಿ ಮಾತ್ರವಲ್ಲ, ಇದಕ್ಕೂ ಮುಂಚೆ ಬಿಡುಗಡೆಯಾಗಬೇಕಿದ್ದ ಹಲವು ಚಿತ್ರಗಳು ಮುಂದಕ್ಕೆ ಹೋಗಿದೆ. ಏಪ್ರಿಲ್ 30ಕ್ಕೆ 'ಸೂರ್ಯವಂಶಿ' ಬರಬೇಕಿತ್ತು. ಅಕ್ಷಯ್ ಕುಮಾರ್ ಸಿನಿಮಾ ಮುಂದೂಡಿಕೆ ಮಾಡಿಕೊಂಡಿದೆ.
ಸೈಫ್ ಅಲಿ ಖಾನ್, ರಾಣಿ ಮುಖರ್ಜಿ ನಟನೆಯ 'ಬಂಟಿ ಔಟ್ ಬಬ್ಲಿ', ವಿಕ್ಕಿ ಕೌಶಲ್ ನಟನೆಯ 'ಸರ್ದಾರ್ ಉದ್ಧಮ್ ಸಿಂಗ್' ಚಿತ್ರವೂ ರಿಲೀಸ್ ಮುಂದಕ್ಕೆ ಹಾಕಿಕೊಂಡಿದೆ.
Recommended Video
ಇನ್ನುಳಿದಂತೆ ಎಎಲ್ ವಿಜಯ್ ನಿರ್ದೇಶನದ ತಲೈವಿ ಸಿನಿಮಾದಲ್ಲಿ ಅರವಿಂದ್ ಸ್ವಾಮಿ ಎಂಜಿಆರ್ ಪಾತ್ರದಲ್ಲಿ, ಪ್ರಕಾಶ್ ರಾಜ್ ಕರುಣಾನಿಧಿ ಪಾತ್ರದಲ್ಲಿ ನಟಿಸಿದ್ದಾರೆ.