Don't Miss!
- Sports
Hockey World Cup 2023: ಜಪಾನ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು; 9ನೇ ಸ್ಥಾನ ಖಚಿತ?
- Technology
ಅತಿ ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್ವಾಚ್ ಪರಿಚಯಿಸಿದ ಫೈರ್ಬೋಲ್ಟ್ !
- News
ಬೆಂಗಳೂರು: ಖಾದಿ ಗ್ರಾಮೋದ್ಯೋಗ ಸಂಸ್ಥೆಗೆ ಆರ್ಥಿಕ ಬಲ ತುಂಬಲಿದ್ದೇವೆ: ಸಿಎಂ ಬೊಮ್ಮಾಯಿ
- Lifestyle
ನಿಮ್ಮ ಗಂಡ 'ಅಮ್ಮನ ಮಗ'ವಾಗಿರುವುದರಿಂದ ತುಂಬಾನೇ ಸಮಸ್ಯೆ ಆಗುತ್ತಿದೆಯೇ?
- Finance
ಆಧಾರ್ ಕಾರ್ಡ್ ಸುರಕ್ಷತೆಗಾಗಿ ಯುಐಡಿಎಐ ನೂತನ ನಿಯಮ ತಿಳಿಯಿರಿ!
- Automobiles
ಕೈಗೆಟುಕುವ ಬೆಲೆಯಲ್ಲಿ ಮತ್ತೊಂದು ಎಸ್ಯುವಿ ಬಿಡುಗಡೆಗೊಳಿಸಲು ಸಜ್ಜಾದ ಮಾರುತಿ ಸುಜುಕಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
The Kashmir Files: ಮತ್ತೊಂದು ನೈಜ ಕಥೆಗೆ ಕೈ ಹಾಕಿದ 'ದಿ ಕಾಶ್ಮೀರ್ ಫೈಲ್ಸ್' ನಿರ್ಮಾಪಕ, ಇದು ಬಲು ರೋಚಕ!
'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಎಲ್ಲೆಡೆ ಚರ್ಚೆಗೆ ಕಾರಣವಾದ ಸಿನಿಮಾ. ಮಾರ್ಚ್ 11ರಂದು ಯಾವುದೆ ಪ್ರಚಾರ ಇಲ್ಲದೆ, ಸೈಲೆಂಟ್ ಆಗಿ ತೆರೆಕಂಡ ಸಿನಿಮಾ ಈ 'ದಿ ಕಾಶ್ಮೀರ್ ಫೈಲ್ಸ್' . ರಿಲೀಸ್ ಆಗಿ ಒಂದೆರೆಡು ದಿನ ಈ ಸಿನಿಮಾದ ಬಗ್ಗೆ ಹೆಚ್ಚಾಗಿ ಯಾರು ತಲೆಕೆಡಿಸಿಕೊಂಡಿರಲಿಲ್ಲಾ. ನಂತರದ ದಿನಗಳಲ್ಲಿ ಈ ಸಿನಿಮಾವನ್ನು ಜನ ಮುಗಿಬಿದ್ದು ನೋಡಿದ್ದಾರೆ. 1990ರಲ್ಲಿ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಈ ಸಿನಿಮಾದಲ್ಲಿ ಸೆರೆ ಹಿಡಿಯಲಾಗಿದೆ.
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆಯ ಬಗ್ಗೆ ಈ ಸಿನಿಮಾದಲ್ಲಲಿ ತೋರಿಸುವ ಪ್ರಯತ್ನ ಮಾಡಿದ್ದರು. 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಕಲೆಕ್ಷನ್ ಕೂಡ ಜೋರಾಗಿ ಸೌಂಡ್ ಮಾಡಿತ್ತು. 'ದಿ ಕಾಶ್ಮೀರಿ ಫೈಲ್ಸ್' ಬಾಲಿವುಡ್ ಬಾಕ್ಸಾಫೀಸ್ನಲ್ಲಿ ಹಿಟ್ ಲಿಸ್ಟ್ ಸೇರಿದೆ. ಸದ್ಯ ಈ ಚಿತ್ರದ ನಿರ್ಮಾಪಕರು ಇದೀಗ ಮತ್ತೊಂದು ನೈಜ ಕಥೆಯನ್ನು ಕೈಗೆತ್ತಿಕೊಂಡಿದ್ದಾರೆ.
Aryan
Khan
Case:
ಆರ್ಯನ್
ಖಾನ್
ಡ್ರಗ್ಸ್
ಪ್ರಕರಣದ
ಪ್ರಮುಖ
ಸಾಕ್ಷಿ
ಪ್ರಭಾಕರ್
ನಿಧನ
'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ನಿರ್ಮಾಣ ಮಾಡಿದ್ದ ಅಭಿಷೇಕ್ ಅಗರ್ವಾಲ್ ಈ ಚಿತ್ರಕ್ಕೂ ಬಂಡವಾಳ ಹೂಡುತ್ತಿದ್ದಾರೆ. ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿಲಿದೆ. ಅಷ್ಟಕ್ಕೂ ಇದು ಕೂಡ ನೈಜ ಘಟನೆ ಆಧಾರಿತ ಸಿನಿಮಾವಾಗಿದೆ. ಸಾಕಷ್ಟು ವಿಶೇಷತೆಗಳಿಂದ ಈ ಸಿನಿಮಾ ಕೂಡಿದ್ದು, ಪ್ಯಾನ್ ಇಂಡಿಯಾ ಕಲ್ಪನೆಯಲ್ಲಿ ಈ ಚಿತ್ರ ತಯಾರಾಗಲಿದೆ.
ತೆಲುಗಿನ ಮಾಸ್ ಮಹಾರಾಜ ರವಿತೇಜ ಈ ಸಿನಿಮಾದಲ್ಲಿ ನಾಯಕ ನಟರಾಗಿ ಕಾಣಿಸಿಕೊಳ್ಳಲಿದ್ದು, ವಂಶಿ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಟೈಗರ್ ನಾಗೇಶ್ವರ್ ರಾವ್ ಅವರ ಜೀವನ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲು ಚಿತ್ರತಂಡ ಸಜ್ಜಾಗಿದೆ. ಹಾಗಿದ್ರೆ ಈ ಟೈಗರ್ ನಾಗೇಶ್ವರ್ರಾವ್ ಯಾರು ? ಟೈಗರ್ ನಾಗೇಶ್ವರ್ರಾವ್ ಒಬ್ಬ ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳ. 1970 ರಲ್ಲಿ ನಡೆದ ನೈಜ ಕಥೆಯೇ ಈ ಸಿನಿಮಾದ ಜೀವಾಳ. ಟೈಗರ್ ನಾಗೇಶ್ವರ್ರಾವ್ ಹೇಗೆಲ್ಲಾ ಕುಖ್ಯಾತಿ ಪಡೆದಿದ್ದ, ಅವನ ಜೀವನ ಮುಂದೇನಾಯ್ತು? ಅನ್ನುವ ಬಗ್ಗೆ ಚಿತ್ರದಲ್ಲಿ ತೋರಿಸಲಾಗಿದೆ.
ಈ ಸಿನಿಮಾಗಾಗಿ ರವಿತೇಜ ತನ್ನ ಸಂಪೂರ್ಣ ಗೆಟಪ್ ಅನ್ನೆ ಬದಲಾಯಿಸಿಕೊಳ್ಳಲಿದ್ದಾರೆ. ವಿಭಿನ್ನ ಲಿಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ ರವಿತೇಜ. ರವಿತೇಜ ಗೆ ಈ ಸಿನಿಮಾದಲ್ಲಿ ಬಾಲಿವುಡ್ ನಟಿ ಕೃತಿ ಸನೂನ್ ಸಹೋದರಿ ನೂಪುರ್ ಸನೂನ್ ರವಿತೇಜಾಗೆ ಜೋಡಿಯಾಗಿ ಅಭಿನಿಸಲಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, 70ರ ದಶಕದ ಮೈ ಜುಂ ಎನ್ನಿಸುವ ಕಥಾ ವಸ್ತುವನ್ನು ಹೊತ್ತು ಈ ಸಿನಿಮಾ ಬರಲು ಸಜ್ಜಾಗಿದೆ. ಈಗಾಗಲೇ ಪೋಸ್ಟರ್ ಕೂಡ ರಿಲೀಸ್ ಆಗಿದ್ದು, ಚಿತ್ರದ ಬಗ್ಗೆ ಈಗಲೇ ಜನರಲ್ಲಿ ಕುತೂಹಲ ಮೂಡಿದೆ.