Don't Miss!
- News EPFO: ಪಿಎಫ್ ನಿಯಮದಲ್ಲಿ ಭಾರೀ ಬದಲಾವಣೆ, 1 ಲಕ್ಷದವರೆಗೂ ಹಣ ಬಿಡಿಸಿಕೊಳ್ಳಬಹುದು!
- Automobiles ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
The Kashmir Files: ಮತ್ತೊಂದು ನೈಜ ಕಥೆಗೆ ಕೈ ಹಾಕಿದ 'ದಿ ಕಾಶ್ಮೀರ್ ಫೈಲ್ಸ್' ನಿರ್ಮಾಪಕ, ಇದು ಬಲು ರೋಚಕ!
'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಎಲ್ಲೆಡೆ ಚರ್ಚೆಗೆ ಕಾರಣವಾದ ಸಿನಿಮಾ. ಮಾರ್ಚ್ 11ರಂದು ಯಾವುದೆ ಪ್ರಚಾರ ಇಲ್ಲದೆ, ಸೈಲೆಂಟ್ ಆಗಿ ತೆರೆಕಂಡ ಸಿನಿಮಾ ಈ 'ದಿ ಕಾಶ್ಮೀರ್ ಫೈಲ್ಸ್' . ರಿಲೀಸ್ ಆಗಿ ಒಂದೆರೆಡು ದಿನ ಈ ಸಿನಿಮಾದ ಬಗ್ಗೆ ಹೆಚ್ಚಾಗಿ ಯಾರು ತಲೆಕೆಡಿಸಿಕೊಂಡಿರಲಿಲ್ಲಾ. ನಂತರದ ದಿನಗಳಲ್ಲಿ ಈ ಸಿನಿಮಾವನ್ನು ಜನ ಮುಗಿಬಿದ್ದು ನೋಡಿದ್ದಾರೆ. 1990ರಲ್ಲಿ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ನರಮೇಧದ ಕುರಿತು ಈ ಸಿನಿಮಾದಲ್ಲಿ ಸೆರೆ ಹಿಡಿಯಲಾಗಿದೆ.
ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆಯ ಬಗ್ಗೆ ಈ ಸಿನಿಮಾದಲ್ಲಲಿ ತೋರಿಸುವ ಪ್ರಯತ್ನ ಮಾಡಿದ್ದರು. 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಕಲೆಕ್ಷನ್ ಕೂಡ ಜೋರಾಗಿ ಸೌಂಡ್ ಮಾಡಿತ್ತು. 'ದಿ ಕಾಶ್ಮೀರಿ ಫೈಲ್ಸ್' ಬಾಲಿವುಡ್ ಬಾಕ್ಸಾಫೀಸ್ನಲ್ಲಿ ಹಿಟ್ ಲಿಸ್ಟ್ ಸೇರಿದೆ. ಸದ್ಯ ಈ ಚಿತ್ರದ ನಿರ್ಮಾಪಕರು ಇದೀಗ ಮತ್ತೊಂದು ನೈಜ ಕಥೆಯನ್ನು ಕೈಗೆತ್ತಿಕೊಂಡಿದ್ದಾರೆ.
Aryan Khan Case: ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದ ಪ್ರಮುಖ ಸಾಕ್ಷಿ ಪ್ರಭಾಕರ್ ನಿಧನ
'ದಿ ಕಾಶ್ಮೀರ್ ಫೈಲ್ಸ್' ಸಿನಿಮಾವನ್ನು ನಿರ್ಮಾಣ ಮಾಡಿದ್ದ ಅಭಿಷೇಕ್ ಅಗರ್ವಾಲ್ ಈ ಚಿತ್ರಕ್ಕೂ ಬಂಡವಾಳ ಹೂಡುತ್ತಿದ್ದಾರೆ. ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಿಲಿದೆ. ಅಷ್ಟಕ್ಕೂ ಇದು ಕೂಡ ನೈಜ ಘಟನೆ ಆಧಾರಿತ ಸಿನಿಮಾವಾಗಿದೆ. ಸಾಕಷ್ಟು ವಿಶೇಷತೆಗಳಿಂದ ಈ ಸಿನಿಮಾ ಕೂಡಿದ್ದು, ಪ್ಯಾನ್ ಇಂಡಿಯಾ ಕಲ್ಪನೆಯಲ್ಲಿ ಈ ಚಿತ್ರ ತಯಾರಾಗಲಿದೆ.
ತೆಲುಗಿನ ಮಾಸ್ ಮಹಾರಾಜ ರವಿತೇಜ ಈ ಸಿನಿಮಾದಲ್ಲಿ ನಾಯಕ ನಟರಾಗಿ ಕಾಣಿಸಿಕೊಳ್ಳಲಿದ್ದು, ವಂಶಿ ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಟೈಗರ್ ನಾಗೇಶ್ವರ್ ರಾವ್ ಅವರ ಜೀವನ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲು ಚಿತ್ರತಂಡ ಸಜ್ಜಾಗಿದೆ. ಹಾಗಿದ್ರೆ ಈ ಟೈಗರ್ ನಾಗೇಶ್ವರ್ರಾವ್ ಯಾರು ? ಟೈಗರ್ ನಾಗೇಶ್ವರ್ರಾವ್ ಒಬ್ಬ ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳ. 1970 ರಲ್ಲಿ ನಡೆದ ನೈಜ ಕಥೆಯೇ ಈ ಸಿನಿಮಾದ ಜೀವಾಳ. ಟೈಗರ್ ನಾಗೇಶ್ವರ್ರಾವ್ ಹೇಗೆಲ್ಲಾ ಕುಖ್ಯಾತಿ ಪಡೆದಿದ್ದ, ಅವನ ಜೀವನ ಮುಂದೇನಾಯ್ತು? ಅನ್ನುವ ಬಗ್ಗೆ ಚಿತ್ರದಲ್ಲಿ ತೋರಿಸಲಾಗಿದೆ.
ಈ ಸಿನಿಮಾಗಾಗಿ ರವಿತೇಜ ತನ್ನ ಸಂಪೂರ್ಣ ಗೆಟಪ್ ಅನ್ನೆ ಬದಲಾಯಿಸಿಕೊಳ್ಳಲಿದ್ದಾರೆ. ವಿಭಿನ್ನ ಲಿಕ್ ನಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ ರವಿತೇಜ. ರವಿತೇಜ ಗೆ ಈ ಸಿನಿಮಾದಲ್ಲಿ ಬಾಲಿವುಡ್ ನಟಿ ಕೃತಿ ಸನೂನ್ ಸಹೋದರಿ ನೂಪುರ್ ಸನೂನ್ ರವಿತೇಜಾಗೆ ಜೋಡಿಯಾಗಿ ಅಭಿನಿಸಲಿದ್ದಾರೆ. ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, 70ರ ದಶಕದ ಮೈ ಜುಂ ಎನ್ನಿಸುವ ಕಥಾ ವಸ್ತುವನ್ನು ಹೊತ್ತು ಈ ಸಿನಿಮಾ ಬರಲು ಸಜ್ಜಾಗಿದೆ. ಈಗಾಗಲೇ ಪೋಸ್ಟರ್ ಕೂಡ ರಿಲೀಸ್ ಆಗಿದ್ದು, ಚಿತ್ರದ ಬಗ್ಗೆ ಈಗಲೇ ಜನರಲ್ಲಿ ಕುತೂಹಲ ಮೂಡಿದೆ.