Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ನಟ ಅಮರೀಶ್ ಪುರಿ ತಂಗಿ ಮನೆಗೆ ಕನ್ನ ಹಾಕಿದ ಮೈಸೂರಿನ ಖತರ್ನಾಕ್ ಕಳ್ಳಿ
ಮೈಸೂರು, ಜುಲೈ 31 : ಬಾಲಿವುಡ್ ನ ಖ್ಯಾತ ನಟ ಅಮರೀಶ್ ಪುರಿ ಅವರ ತಂಗಿಯ ಮನೆಯಲ್ಲಿ 30 ಲಕ್ಷ ರೂ. ಮೌಲ್ಯದ ವಜ್ರಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಹೆಚ್.ಡಿ. ಕೋಟೆ ಮೂಲದ ಮಹಿಳೆಯನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ತಾನು ಕೆಲಸ ಮಾಡಿಕೊಂಡಿದ್ದ ಮನೆಯಲ್ಲೇ ಲಕ್ಷಾಂತರ ರೂ. ಮೌಲ್ಯದ ವಜ್ರ ಹಾಗೂ ಚಿನ್ನದ ಆಭರಣಗಳನ್ನು ದೋಚಿಕೊಂಡು ಬಂದಿದ್ದ ಹೆಚ್.ಡಿ.ಕೋಟೆ ತಾಲೂಕಿನ ಹಾದನೂರು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ತುಳಸಿ(30)ಯನ್ನ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಳಿಕ ವಿಚಾರಣೆಗೊಳಪಡಿಸಿ, ಗಿರವಿ ಇಟ್ಟಿದ್ದ 29.75 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡು, ನ್ಯಾಯಾಧೀಶರ ಅನುಮತಿ ಪಡೆದು ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಯಿತು.
ಹೆಚ್.ಡಿ.ಕೋಟೆ ಪಟ್ಟಣದ ವ್ಯಕ್ತಿಯೊಬ್ಬರೊಂದಿಗೆ ವಿವಾಹವಾಗಿದ್ದ ತುಳಸಿ, ಕೆಲ ವರ್ಷಗಳ ನಂತರ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ನಡುವೆ ಕೆಲಸಕ್ಕಾಗಿ ಮಂಗಳೂರು ಮೂಲದ ಏಜೆಂಟ್ ನ ಸಂಪರ್ಕಿಸಿದ್ದಳು. 2 ತಿಂಗಳ ಹಿಂದೆ ಆತ, ತುಳಸಿಯನ್ನು ಮುಂಬೈಗೆ ಕರೆದೊಯ್ದು, ಅಮರೀಶ್ ಪುರಿ ತಂಗಿ ಮನೆಯಲ್ಲಿ ಕೆಲಸಕ್ಕೆ ಸೇರಿಸಿದ್ದ.
ಇದ್ದಕ್ಕಿದ್ದಂತೆ ಈಕೆ ಮನೆಯ ಮಾಲೀಕರಿಗೂ ತಿಳಿಸದೆ ಕೆಲಸ ಬಿಟ್ಟಿದ್ದಳು. ಇದರಿಂದ ಅನುಮಾನಗೊಂಡ ಮನೆ ಮಾಲೀಕರು ಪರಿಶೀಲಿಸಿದಾಗ ಸುಮಾರು 30.75 ಲಕ್ಷ ಮೌಲ್ಯದ ಚಿನ್ನಾಭರಣಗಳು ಕಳುವಾಗಿದ್ದವು. ನಂತರ ಪೊಲೀಸ್ ಠಾಣೆಗೆ ದೂರು ನೀಡಿ, ಮನೆಗೆಲಸದಾಕೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ದೂರು ದಾಖಲಿಸಿಕೊಂಡು ಪ್ರಕರಣದ ಜಾಡು ಹಿಡಿದ ಪೊಲೀಸರು ತುಳಸಿಯನ್ನ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.