Don't Miss!
- News Women voters: ರಾಜ್ಯದ 17 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳೆಯರದ್ದೇ ಪಾರುಪತ್ಯ!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಿವುಡ್ ನಟ ಅಮರೀಶ್ ಪುರಿ ತಂಗಿ ಮನೆಗೆ ಕನ್ನ ಹಾಕಿದ ಮೈಸೂರಿನ ಖತರ್ನಾಕ್ ಕಳ್ಳಿ
ಮೈಸೂರು, ಜುಲೈ 31 : ಬಾಲಿವುಡ್ ನ ಖ್ಯಾತ ನಟ ಅಮರೀಶ್ ಪುರಿ ಅವರ ತಂಗಿಯ ಮನೆಯಲ್ಲಿ 30 ಲಕ್ಷ ರೂ. ಮೌಲ್ಯದ ವಜ್ರಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಹೆಚ್.ಡಿ. ಕೋಟೆ ಮೂಲದ ಮಹಿಳೆಯನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ತಾನು ಕೆಲಸ ಮಾಡಿಕೊಂಡಿದ್ದ ಮನೆಯಲ್ಲೇ ಲಕ್ಷಾಂತರ ರೂ. ಮೌಲ್ಯದ ವಜ್ರ ಹಾಗೂ ಚಿನ್ನದ ಆಭರಣಗಳನ್ನು ದೋಚಿಕೊಂಡು ಬಂದಿದ್ದ ಹೆಚ್.ಡಿ.ಕೋಟೆ ತಾಲೂಕಿನ ಹಾದನೂರು ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ತುಳಸಿ(30)ಯನ್ನ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಳಿಕ ವಿಚಾರಣೆಗೊಳಪಡಿಸಿ, ಗಿರವಿ ಇಟ್ಟಿದ್ದ 29.75 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡು, ನ್ಯಾಯಾಧೀಶರ ಅನುಮತಿ ಪಡೆದು ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಯಿತು.
ಹೆಚ್.ಡಿ.ಕೋಟೆ ಪಟ್ಟಣದ ವ್ಯಕ್ತಿಯೊಬ್ಬರೊಂದಿಗೆ ವಿವಾಹವಾಗಿದ್ದ ತುಳಸಿ, ಕೆಲ ವರ್ಷಗಳ ನಂತರ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ನಡುವೆ ಕೆಲಸಕ್ಕಾಗಿ ಮಂಗಳೂರು ಮೂಲದ ಏಜೆಂಟ್ ನ ಸಂಪರ್ಕಿಸಿದ್ದಳು. 2 ತಿಂಗಳ ಹಿಂದೆ ಆತ, ತುಳಸಿಯನ್ನು ಮುಂಬೈಗೆ ಕರೆದೊಯ್ದು, ಅಮರೀಶ್ ಪುರಿ ತಂಗಿ ಮನೆಯಲ್ಲಿ ಕೆಲಸಕ್ಕೆ ಸೇರಿಸಿದ್ದ.
ಇದ್ದಕ್ಕಿದ್ದಂತೆ ಈಕೆ ಮನೆಯ ಮಾಲೀಕರಿಗೂ ತಿಳಿಸದೆ ಕೆಲಸ ಬಿಟ್ಟಿದ್ದಳು. ಇದರಿಂದ ಅನುಮಾನಗೊಂಡ ಮನೆ ಮಾಲೀಕರು ಪರಿಶೀಲಿಸಿದಾಗ ಸುಮಾರು 30.75 ಲಕ್ಷ ಮೌಲ್ಯದ ಚಿನ್ನಾಭರಣಗಳು ಕಳುವಾಗಿದ್ದವು. ನಂತರ ಪೊಲೀಸ್ ಠಾಣೆಗೆ ದೂರು ನೀಡಿ, ಮನೆಗೆಲಸದಾಕೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ದೂರು ದಾಖಲಿಸಿಕೊಂಡು ಪ್ರಕರಣದ ಜಾಡು ಹಿಡಿದ ಪೊಲೀಸರು ತುಳಸಿಯನ್ನ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.