Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಡಿಯೋ: ಕಣ್ಣೀರು ಹಾಕಿದ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ
ಸುಶಾಂತ್ ಸಿಂಗ್ ತಂದೆ ಕೆಕೆ ಸಿಂಗ್, ಸುಶಾಂತ್ ಪ್ರೇಯಸಿ ರಿಯಾ ವಿರುದ್ಧ ದೂರು ನೀಡಿದ ನಂತರ ಮೊದಲ ಬಾರಿ ರಿಯಾ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದ್ದಾರೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ತಂದೆಯವರು ರಿಯಾ ಚಕ್ರವರ್ತಿ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಬಿಹಾರದ ಪಾಟ್ನಾದಲ್ಲಿ ದೂರು ದಾಖಲಿಸಿದ್ದಾರೆ. ರಿಯಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ, ಮೋಸ, ಕಳ್ಳತನ ಪ್ರಕರಣಗಳನ್ನು ದಾಖಲಿಸಲಾಗಿದೆ.
ಸುಶಾಂತ್ ಸಿಂಗ್ ತಂದೆ ಹೇಳಿರುವುದೆಲ್ಲ ಸುಳ್ಳು ಎಂದ ರಿಯಾ ಚಕ್ರವರ್ತಿ
ದೂರು ದಾಖಲಾದ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿರುವ ರಿಯಾ, ತಾವು ಮಾತನಾಡಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ಟಿವಿ ಮಾಧ್ಯಮಗಳು ಕೆಟ್ಟದಾಗಿ ಬಿಂಬಿಸುತ್ತಿವೆ: ರಿಯಾ
ವಿಡಿಯೋ ಪ್ರಕಟಿಸಿರುವ ರಿಯಾ, ತಮ್ಮ ವಿರುದ್ಧ ಟಿವಿ ಮಾಧ್ಯಮಗಳಲ್ಲಿ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಸುಳ್ಳುಗಳನ್ನು ಹೇಳಲಾಗುತ್ತಿದೆ ಎಂದಿರುವ ರಿಯಾ, ತಾವು ತಪ್ಪು ಮಾಡಿಲ್ಲವೆಂದು ಹೇಳಿದ್ದಾರೆ.
ದೇವರ ಮೇಲೆ ಹಾಗೂ ನ್ಯಾಯಾಂಗದ ಮೇಲೆ ನಂಬಿಕೆ ಇದೆ
ನನಗೆ ದೇವರ ಮೇಲೆ ಹಾಗೂ ಭಾರತದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಪೂರ್ಣ ನಂಬಿಕೆ ಇದೆ. ನನ್ನ ವಿರುದ್ಧ ಟಿವಿ ಮಾಧ್ಯಗಳಲ್ಲಿ ಮಾಡಲಾಗುತ್ತಿರುವ ಆರೋಪಗಳಿಗೆ ನಾನು ಪ್ರತಿಕ್ರಿಯಿಸದಂತೆ ನನ್ನ ವಕೀಲರು ಹೇಳಿದ್ದಾರೆ ಎಂದು ರಿಯಾ ಹೇಳಿದ್ದಾರೆ.
ರಿಯಾ ವಿರುದ್ಧ ಹೇಳಿಕೆ ನೀಡುವಂತೆ ಸುಶಾಂತ್ ಕುಟುಂಬ ಒತ್ತಡ ಹೇರುತ್ತಿದೆ: ಸುಶಾಂತ್ ಗೆಳೆಯನ ಆರೋಪಸತ್ಯಮೇವ ಜಯತೆ ಎಂದ ರಿಯಾ
ಪ್ರಕರಣ ಸದ್ಯಕ್ಕೆ ನ್ಯಾಯಾಲಯದಲ್ಲಿರುವ ಕಾರಣ ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ ಸತ್ಯವೇ ಜಯಿಸಲಿದೆ (ಸತ್ಯಮೇವ ಜಯತೆ) ಎಂದಿರುವ ರಿಯಾ, ಸತ್ಯ ಹೊರಗೆ ಬರಲೇ ಬೇಕು ಎಂದು ಹೇಳಿದ್ದಾರೆ. ಈ ವಿಡಿಯೋ ಭಾರಿ ವೈರಲ್ ಆಗಿದೆ.
ಸುಶಾಂತ್ ಸಾಯುವ ಕೆಲವು ದಿನಗಳ ಮುಂಚೆ ಬ್ರೇಕ್ಅಪ್
ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ರಿಯಾ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸುಶಾಂತ್ ಖಾತೆಯಲ್ಲಿದ್ದ ಭಾರಿ ಮೊತ್ತದ ಹಣವನ್ನು ರಿಯಾ ಬಳಸಿಕೊಂಡಿದ್ದರು ಎನ್ನಲಾಗಿದೆ. ಸುಶಾಂತ್ ಸಾಯುವುದಕ್ಕೆ ಕೆಲವು ದಿನಗಳ ಮುಂಚೆ ಆತನೊಂದಿಗೆ ಸಂಬಂಧ ಮುರಿದುಕೊಂಡಿದ್ದಾಗಿಯೂ ರಿಯಾ ಹೇಳಿದ್ದಾರೆ.
ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆಯಿಂದ ದೂರ ಆಗಿದ್ದೇಕೆ ಸುಶಾಂತ್: ಇಬ್ಬರ ಬ್ರೇಕ್ ಅಪ್ ಬಗ್ಗೆ ಇಲ್ಲಿದೆ ಮಾಹಿತಿ