Don't Miss!
- News ಬೆಂಗಳೂರಿನ ಜನತೆಗೆ ಬಾಂಬು..ಮತಾಂಧರಿಗೆ ಕೊಂಬು: ಚೊಂಬು ಜಾಹೀರಾತಿಗೆ ಆರ್.ಅಶೋಕ್ ಗುಡುಗು
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ವೇಳೆ ಕಳ್ಳತನ ಮಾಡಿ ಸಿಕ್ಕಿಬಿದ್ದ ನಟಿಯರು ಅರೆಸ್ಟ್
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಆರೇ ವ್ಯಾಪ್ತಿಯ ಪೊಲೀಸರು ಇಬ್ಬರು ಟಿವಿ ನಟಿಯರನ್ನು ಬಂಧಿಸಿರುವ ಘಟನೆ ಶುಕ್ರವಾರ (ಜೂನ್ 18) ನಡೆದಿದೆ.
ಕೊರೊನಾ ವೈರಸ್ ಹಿನ್ನೆಲೆ ಲಾಕ್ಡೌನ್ ಮಾಡಿದ ಸಂದರ್ಭದಲ್ಲಿ ಚಿತ್ರೀಕರಣ ಸಂಪೂರ್ಣವಾಗಿ ನಿಲ್ಲಿಸಲಾಗಿತ್ತು. ಕೆಲಸವನ್ನು ನಂಬಿಕೊಂಡಿದ್ದ ಈ ನಟಿಯರು ಹಣದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆ ಕಳ್ಳತನಕ್ಕೆ ಮುಂದಾದರು ಎಂದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿದೆ.
ಮೇ 18 ರಂದು ಸ್ನೇಹಿತರೊಬ್ಬರ ನಡೆಸುತ್ತಿದ್ದ ಪಿಜಿಗೆ ಇಬ್ಬರು ನಟಿಯರು ಸ್ಥಳಾಂತರವಾಗಿದ್ದರು. ಅವರು ಬಂದ ಬಳಿಕ ನೆರೆ ರೂಮಿನಲ್ಲಿದ್ದ ಮಹಿಳೆಯೊಬ್ಬರ ಲಾಕರ್ನಲ್ಲಿ 3.28 ಲಕ್ಷ ಹಣ ಕಾಣೆಯಾಗಿದೆ.
ಹಣ ಕಳೆದುಕೊಂಡ ಮಹಿಳೆ ಆರೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿಯರಾದ ಸುರಭಿ ಸುರೇಂದ್ರ ಲಾಲ್ ಶ್ರೀವಾಸ್ತವ (25) ಮತ್ತು ಮೊಸಿನಾ ಮುಖ್ತಾರ್ ಶೇಖ್ (19) ಕದ್ದಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದರು.
ಮಹಿಳೆಯ ದೂರಿನ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರಿಗೆ ಈ ಇಬ್ಬರು ನಟಿಯರು ಹಣದೊಂದಿಗೆ ಸುತ್ತಾಡುವುದು ಗಮನಕ್ಕೆ ಬಂದಿದೆ. ನಂತರ ವಶಕ್ಕೆ ಪಡೆದು ಸಿಸಿಟಿವಿ ದೃಶ್ಯಗಳ ಸಮೇತ ತೋರಿಸಿದಾದ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.
ಅಂದ್ಹಾಗೆ, ಸಾವದಾನ್ ಇಂಡಿಯಾ ಮತ್ತು ಕ್ರೈಂ ಪೆಟ್ರೊಲ್ ಎಂಬ ಟಿವಿ ಕಾರ್ಯಕ್ರಮಗಳಲ್ಲಿ ಈ ಇಬ್ಬರು ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ. ಇದಲ್ಲದೇ ಕೆಲವು ವೆಬ್ ಸಿರೀಸ್ಗಳಲ್ಲಿ ನಟಿಸಿದ್ದಾರೆ.
Recommended Video
ಕದ್ದ ಹಣದಲ್ಲಿ ಸುರಭಿ ಮತ್ತು ಮೊಸಿನಾ ಬಳಿ 50 ಸಾವಿರ ರೂಪಾಯಿ ಸಿಕ್ಕಿದೆ, ಹಣವನ್ನು ನಟಿಯರಿಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಜೂನ್ 23ರವರೆಗೂ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.