Don't Miss!
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ವೇಳೆ ಕಳ್ಳತನ ಮಾಡಿ ಸಿಕ್ಕಿಬಿದ್ದ ನಟಿಯರು ಅರೆಸ್ಟ್
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಆರೇ ವ್ಯಾಪ್ತಿಯ ಪೊಲೀಸರು ಇಬ್ಬರು ಟಿವಿ ನಟಿಯರನ್ನು ಬಂಧಿಸಿರುವ ಘಟನೆ ಶುಕ್ರವಾರ (ಜೂನ್ 18) ನಡೆದಿದೆ.
ಕೊರೊನಾ ವೈರಸ್ ಹಿನ್ನೆಲೆ ಲಾಕ್ಡೌನ್ ಮಾಡಿದ ಸಂದರ್ಭದಲ್ಲಿ ಚಿತ್ರೀಕರಣ ಸಂಪೂರ್ಣವಾಗಿ ನಿಲ್ಲಿಸಲಾಗಿತ್ತು. ಕೆಲಸವನ್ನು ನಂಬಿಕೊಂಡಿದ್ದ ಈ ನಟಿಯರು ಹಣದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆ ಕಳ್ಳತನಕ್ಕೆ ಮುಂದಾದರು ಎಂದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿದೆ.
ಮೇ 18 ರಂದು ಸ್ನೇಹಿತರೊಬ್ಬರ ನಡೆಸುತ್ತಿದ್ದ ಪಿಜಿಗೆ ಇಬ್ಬರು ನಟಿಯರು ಸ್ಥಳಾಂತರವಾಗಿದ್ದರು. ಅವರು ಬಂದ ಬಳಿಕ ನೆರೆ ರೂಮಿನಲ್ಲಿದ್ದ ಮಹಿಳೆಯೊಬ್ಬರ ಲಾಕರ್ನಲ್ಲಿ 3.28 ಲಕ್ಷ ಹಣ ಕಾಣೆಯಾಗಿದೆ.
ಹಣ ಕಳೆದುಕೊಂಡ ಮಹಿಳೆ ಆರೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿಯರಾದ ಸುರಭಿ ಸುರೇಂದ್ರ ಲಾಲ್ ಶ್ರೀವಾಸ್ತವ (25) ಮತ್ತು ಮೊಸಿನಾ ಮುಖ್ತಾರ್ ಶೇಖ್ (19) ಕದ್ದಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದರು.
ಮಹಿಳೆಯ ದೂರಿನ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರಿಗೆ ಈ ಇಬ್ಬರು ನಟಿಯರು ಹಣದೊಂದಿಗೆ ಸುತ್ತಾಡುವುದು ಗಮನಕ್ಕೆ ಬಂದಿದೆ. ನಂತರ ವಶಕ್ಕೆ ಪಡೆದು ಸಿಸಿಟಿವಿ ದೃಶ್ಯಗಳ ಸಮೇತ ತೋರಿಸಿದಾದ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ.
ಅಂದ್ಹಾಗೆ, ಸಾವದಾನ್ ಇಂಡಿಯಾ ಮತ್ತು ಕ್ರೈಂ ಪೆಟ್ರೊಲ್ ಎಂಬ ಟಿವಿ ಕಾರ್ಯಕ್ರಮಗಳಲ್ಲಿ ಈ ಇಬ್ಬರು ಕೆಲಸ ಮಾಡಿದ್ದರು ಎಂದು ತಿಳಿದು ಬಂದಿದೆ. ಇದಲ್ಲದೇ ಕೆಲವು ವೆಬ್ ಸಿರೀಸ್ಗಳಲ್ಲಿ ನಟಿಸಿದ್ದಾರೆ.
Recommended Video
ಕದ್ದ ಹಣದಲ್ಲಿ ಸುರಭಿ ಮತ್ತು ಮೊಸಿನಾ ಬಳಿ 50 ಸಾವಿರ ರೂಪಾಯಿ ಸಿಕ್ಕಿದೆ, ಹಣವನ್ನು ನಟಿಯರಿಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಜೂನ್ 23ರವರೆಗೂ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.