Don't Miss!
- News Love Jihad: ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೊಲೀಸ್ ಗೆ ಶೇಕ್ ಹ್ಯಾಂಡ್ ಮಾಡಿ ಟ್ರೋಲಿಗರಿಗೆ ಆಹಾರವಾದ ಬಾಲಿವುಡ್ ನಟ
ಕೊರೊನಾ ವೈರಸ್ ಹಾವಳಿ ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಅದರಲ್ಲೂ ಶೇಕ್ ಹ್ಯಾಂಡ್ ಮಾಡುವುದನ್ನು ನಿಲ್ಲಿಸಿ, ನಮಸ್ತೆ ಮಾಡಿ ಸ್ವಾಗತಿಬೇಕು, ಹಗ್ ಮಾಡಬಾರದು ಎಂದೆಲ್ಲ ಹೇಳಲಾಗುತ್ತಿದೆ. ಆದರೆ ಅದೆಷ್ಟೊ ಜನ ಈ ಎಲ್ಲಾ ನಿಯಮಗಳನ್ನು ಪಾಲಿಸುವುದೇ ಇಲ್ಲ.
ಕೊರೊನಾ ಲಾಕ್ ಡೌನ್ ನಲ್ಲಿ ಬಾಲಿವುಡ್ ನಟ ವರುಣ್ ಧವನ್ ಮುಂಬೈ ಪೊಲೀಸ್ ಗೆ ಶೇಕ್ ಹ್ಯಾಂಡ್ ನೀಡಿ ಟ್ರೋಲಿಗರಿಗೆ ಆಹಾರವಾಗಿದ್ದಾರೆ. ಹೌದು ಇತ್ತೀಚಿಗೆ ನಟ ವರುಣ್ ಧವನ್ ಒಂದು ಫೋಟೋ ಹಂಚಿಕೊಂಡಿದ್ದಾರೆ. 24 ಗಂಟೆ ಕೆಲಸ ಮಾಡುತ್ತಿರುವ ಪೊಲೀಸರಿಗೆ ಮತ್ತು ವೈದ್ಯರಿಗೆ ಧನ್ಯವಾದ ತಿಳಿಸಿ ಮುಂಬೈ ಪೊಲೀಸ್ ಗೆ ಶೇಕ್ ಹ್ಯಾಂಡ್ ಮಾಡುವ ಫೋಟೋ ಶೇರ್ ಮಾಡಿದ್ದರು.
ಬಾಲಿವುಡ್ ನಟ ವರುಣ್ ಧವನ್ ಹತ್ತಿರದ ಸಂಬಂಧಿಗೆ ಕೊರೊನಾ ಪಾಸಿಟಿವ್
ಈ ಫೋಟೋ ಹಂಚಿಕೊಳ್ಳುತ್ತಿದ್ದಂತೆ ನೆಟ್ಟಿಗರು ಟ್ರೋಲ್ ಮಾಡಲು ಶುರು ಮಾಡಿಕೊಂಡಿದ್ದಾರೆ. ವರುಣ್ ಹೀಗೆ ಶೇರ್ ಮಾಡುತ್ತಿದ್ದಾರೆ, ಇಲ್ಲಿ ಸಾಮಾಜಿಕ ಅಂತರವೆಲ್ಲಿದೆ? ಮಾಸ್ಕ್ ಮತ್ತು ಗ್ಲೌಸ್ ಎಲ್ಲಿ? ಎಂದು ಪ್ರಶ್ನಿಸುತ್ತಿದ್ದಾರೆ. ನೆಟ್ಟಿಗರು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ವರುಣ್ ಮತ್ತೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.
"ಈಡಿಯಟ್ ಇದು ಹಳೆಯ ಫೋಟೋ. ಎರಡು ತಿಂಗಳು ಹಿಂದೆ ಕ್ಲಿಕ್ ಮಾಡಿರುವ ಫೋಟೋ" ಎಂದು ಟ್ವೀಟ್ ಮಾಡಿದ್ದಾರೆ.
Idiot this is old picture clicked 2 months back love u https://t.co/K9XXKlESnm
— Varun Dhawan (@Varun_dvn) April 13, 2020
ಕೊರೊನಾ ವಿರುದ್ಧ ಹೋರಾಟಕ್ಕೆ ಬಾಲಿವುಡ್ ಮಂದಿ ಸಾಕಷ್ಟು ದೇಣಿಗೆ ನೀಡಿದ್ದಾರೆ. ನಟ ವರುಣ್ ಧವನ್ ಸಹ ಪಿಎಂ ಪರಿಹಾರ ನಿಧಿಗೆ ಹಣ ನೀಡಿದ್ದಾರೆ. ಜೊತೆಗೆ ಮಹಾರಾಷ್ಟ್ರ ಸಿಎಂ ಪರಿಹಾರ ನಿಧಿಗೂ ದೇಣಿಗೆ ನೀಡಿದ್ದಾರೆ. ಪಿ ಎಂ ಪರಿಹಾರ ನಿಧಿಗೆ 30 ಲಕ್ಷ ಮತ್ತು ಸಿಎಂ ಪರಿಹಾರ ನಿಧಿಗೆ 25 ಲಕ್ಷ ನೀಡಿದ್ದಾರೆ.