Don't Miss!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Automobiles ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶ್ ರಾಜ್ ಬ್ಯಾನರ್ ಮೇಲೆ ಅಜಯ್ ದೇವಗನ್ ಗರಮ್!
ಸಿಂಗಲ್ ಸ್ಕ್ರೀನ್ ಹೊಂದಿರುವ ಸಾಕಷ್ಟು ಥಿಯೇಟರುಗಳನ್ನು ಯಶ್ ರಾಜ್ ಫಿಲಂ ಬ್ಯಾನರ್, ತಮ್ಮ ಬಿಡುಗಡೆಗೆ ಸಿದ್ಧವಾಗಿರುವ ಶಾರುಖ್ ಖಾನ್ ನಾಯಕತ್ವದ 'ಜಬ್ ತಕ್ ಹೇ ಜಾನ್' ಚಿತ್ರಕ್ಕೆ ಬುಕ್ ಮಾಡಿಕೊಂಡಿದೆ. ಇದು ತಮಗಾಗಿರುವ ಅನ್ಯಾಯ ಎಂದು ಅಜಯ್ ದೇವಗನ್ 'ಕಾಂಪಿಟಿಶನ್ ಕಮಿಷನ್'ಗೆ ಮನವಿ ಸಲ್ಲಿಸಿದ್ದರು. ಆದರೆ ಅವರ ಮನವಿ ತರಸ್ಕೃತವಾಗಿದೆ. ಆದರೂ ಬಿಡದ ಅಜಯ್, 'ಕಾಂಪಿಟಿಶನ್ ಅಪ್ಪೆಲ್ಲೇಟ್ ಟ್ರಿಬ್ಯುನಲ್' ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ತಮಗೆ ಆಗಿರುವ ಅನ್ಯಾಯಕ್ಕೆ ಪರಿಹಾರ ಸಿಗುವುದೆಂಬ ಆಶಾಭಾವನೆಯಲ್ಲಿರುವ ಅಜಯ್, ಈ ಕುರಿತು ಮಾತನಾಡಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಜಯ್, "ಯಶ್ ರಾಜ್ ಪಿಲಂ ಬ್ಯಾನರ್ ನವರು ಒಳ್ಳೆಯತನದ ಬಗ್ಗೆ ಮಾತನಾಡುತ್ತಾರೆ. ಹೊಂದಾಣಿಕೆ ಹಾಗೂ ಮಾನವೀಯತೆ ಬಗ್ಗೆ ಗಂಟೆಗಟ್ಟಲೆ ಭಾಷಣ ಮಾಡುತ್ತಾರೆ. ಆದರೆ ಮಾಡುವುದು ಮಾತ್ರ ಅನ್ಯಾಯ. ನನ್ನ ಚಿತ್ರದ ಬಿಡುಗಡೆ ವೇಳೆಗೆ ಅವರು ಈ ರೀತಿಯಲ್ಲಿ ಅನ್ಯಾಯ ಮಾಡಿದ್ದಾರೆ.
ನಾನೇನೂ ಅವರ ಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಹೇಳುತ್ತಿಲ್ಲ. ಅಥವಾ ನನಗೆ ಪರಿಹಾರ ಕೊಡಿ ಎಂದೂ ಕೇಳುತ್ತಿಲ್ಲ. ಬದಲಿಗೆ, ಹೆಚ್ಚುಕಡಿಮೆ ಎಲ್ಲಾ ಸಿಂಗಲ್ ಸ್ಕ್ರೀನ್ ಚಿತ್ರಮಂದಿರವನ್ನು ಅವರೇ ಆಕ್ರಮಿಸಿಕೊಂಡುಬಿಟ್ಟರೆ ನಾವು ನಮ್ಮ ಚಿತ್ರವನ್ನು ಪ್ರದರ್ಶನ ಮಾಡುವುದೆಲ್ಲಿ? ಒಳ್ಳೆಯತನದ ಬಗ್ಗೆ ಕೇವಲ ಮಾತನಾಡಿದರೆ ಸಾಲದು, ಅದನ್ನು ಕಾರ್ಯರೂಪಕ್ಕೂ ತರಬೇಕು ಅಲ್ಲವೇ?" ಎಂದು ಹೇಳಿ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ ಅಜಯ್. ಮುಂದೇನಾಗುತ್ತೋ..! (ಏಜೆನ್ಸೀಸ್)