Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
1000 ಎಕರೆ ಜಾಗದಲ್ಲಿ ನಿರ್ಮಾಣವಾಗಲಿದೆ ಅತಿ ದೊಡ್ಡ ಫಿಲಂ ಸಿಟಿ
ಉತ್ತರ ಪ್ರದೇಶದಲ್ಲಿ ಅತಿ ದೊಡ್ಡ ಫಿಲಂ ಸಿಟಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮ್ಮತಿ ನೀಡಿದ್ದು, ಗೌತಮ ಬುದ್ದ ನಗರದಲ್ಲಿ ಈ ಫಿಲಂ ಸಿಟಿ ತಲೆ ಎತ್ತಲಿದೆ.
ಯಮುನಾ ಪ್ರಾಧಿಕಾರ ಫಿಲಂ ಸಿಟಿ ನಿರ್ಮಿಸುವ ಜವಾಬ್ದಾರಿ ವಹಿಸಿಕೊಂಡಿದ್ದು, ಸಿಎಂ ಮುಂದೆ ಯೋಜನೆಯನ್ನು ವಿವರಿಸಿದ್ದಾರೆ. ಯೋಗಿ ಆದಿತ್ಯನಾಥ್ ಸಹ ಯಮುನಾ ಪ್ರಾಧಿಕಾರದ ಯೋಜನೆ ಕಂಡ ಸಂತಸ ವ್ಯಕ್ತಪಡಿಸಿದ್ದಾರೆ.
ಫಿಲಂ ಸಿಟಿ ನಿರ್ಮಾಣದ ಹೊಣೆಗಾರಿಕೆ ಹೊರಲು ಸಿದ್ಧ ಎಂದ ಶಿವಣ್ಣ
ಫಿಲಂ ಸಿಟಿ ನಿರ್ಮಾಣದ ಕುರಿತು ಮಂಗಳವಾರ ಬಾಲಿವುಡ್ ಇಂಡಸ್ಟ್ರಿಯ ಖ್ಯಾತನಾಮರ ಜೊತೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚರ್ಚಿಸಿದ ಯೋಗಿ ಆದಿತ್ಯನಾಥ್ ''1000 ಎಕರೆ ಜಾಗದಲ್ಲಿ ಅತಿ ದೊಡ್ಡ ಫಿಲಂ ಸಿಟಿ ನಿರ್ಮಿಸುವುದಾಗಿ'' ತಿಳಿಸಿದರು.
ಉತ್ತರ ಪ್ರದೇಶವೂ ಸಾಂಸ್ಕೃತಿಕವಾಗಿ, ಐತಿಹಾಸಿಕವಾಗಿ ಹಾಗೂ ಪುರಾಣದಲ್ಲಿ ಮಹತ್ವದ ಸ್ಥಾನ ಪಡೆದಿದೆ. ಅಯೋಧ್ಯೆ, ಮಥುರಾ, ಕಾಶಿ ಹಾಗೂ ಮಹಾಭಾರತದಲ್ಲಿ ಬರುವ ಹಸ್ತಿನಾಪುರ ಸಹ ಇಲ್ಲಿಯೇ ಇದೆ. ಭಾರತದ ಏಳು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಇಂತಹ ರಾಜ್ಯದಲ್ಲಿ ಫಿಲಂ ಸಿಟಿ ನಿರ್ಮಾಣವೂ ವಿಶೇಷವಾಗಿರಲಿದೆ ಎಂದಿದ್ದಾರೆ.
Recommended Video
ಇಂದು ನಡೆದ ವಿಡಿಯೋ ಕಾನ್ಫೆರೆನ್ಸ್ ಸಭೆಯಲ್ಲಿ ಬಾಲಿವುಡ್ ನಟ ಪರೇಶ್ ರಾವಲ್, ಅನುಪಮ್ ಖೇರ್, ರವೀನಾ ಟಂಡನ್, ಗಾಯಕರಾದ ಅನುಪ್ ಜಲೋಟಾ, ಉದಿತ್ ನಾರಾಯಣ್ ಮತ್ತು ಕೈಲಾಶ್ ಖೇರ್, ಗೀತರಚನೆಕಾರ ಮನೋಜ್ ಮುಂಟಶೀರ್, ಚಲನಚಿತ್ರ ನಿರ್ಮಾಪಕರು ಸುಭಾಷ್ ಘೈ, ಡೇವಿಡ್ ಧವನ್, ಸತೀಶ್ ಕೌಶಿಕ್, ಪ್ರಿಯದರ್ಶನ್ ಪಾಲ್ಗೊಂಡಿದ್ದರು.