Don't Miss!
- Sports
BGT 2023: ನೆಟ್ಸ್ನಲ್ಲಿ ಬೌಲಿಂಗ್ ಮಾಡಲು ಜಮ್ಮು-ಕಾಶ್ಮೀರದ ಸ್ಪಿನ್ನರ್ಗೆ ಆಹ್ವಾನ ನೀಡಿದ ಆಸ್ಟ್ರೇಲಿಯಾ
- Automobiles
ಹೊಸ ಇನೋವಾ ಹೈಕ್ರಾಸ್ ಬಲದೊಂದಿಗೆ ಮಾರಾಟದಲ್ಲಿ ದಾಖಲೆ ಮಟ್ಟದ ಬೆಳವಣಿಗೆ ಸಾಧಿಸಿದ ಟೊಯೊಟಾ
- News
Union Budget 2023; ಅಮೃತ ಕಾಲಕ್ಕೆ ಎಲ್ಲಾ ಸೌಕರ್ಯ ಒದಗಿಸುವ ಬಜೆಟ್, ಜೋಶಿ
- Technology
ಚೀನಾದಲ್ಲಿ ಸೌಂಡ್ ಮಾಡಿದ್ದ ಈ ಡಿವೈಸ್ ಇದೀಗ ಜಾಗತಿಕ ಮಾರುಕಟ್ಟೆಗೆ ಎಂಟ್ರಿ!
- Finance
Union Budget 2023: ಹೊಸ ತೆರಿಗೆ ಪದ್ಧತಿಯಡಿಯಲ್ಲಿ ತೆರಿಗೆ ಲೆಕ್ಕಾಚಾರ ಹೇಗೆ?
- Lifestyle
ಬಜೆಟ್ 2023: ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಕೊಡುಗೆ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಜಾತಿ ನಿಂದನೆ ಆರೋಪ: ನಟಿ ಯುವಿಕಾ ಚೌಧರಿ ವಿರುದ್ಧ ಎಫ್ಐಆರ್
ಬಾಲಿವುಡ್ ನಟಿ ಯುವಿಕಾ ಚೌಧರಿ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಾಗಿದೆ. ಸಮುದಾಯವೊಂದನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಲಿತ ಹಕ್ಕುಗಳ ಹೋರಾಟಗಾರರು ದೂರು ನೀಡಿದ್ದು, ಹರಿಯಾಣ ಪೊಲೀಸರು ನಟಿ ವಿರುದ್ಧ ಎಫ್ ಐ ಆರ್ ದಾಖಲಿಸಿರುವುದಾಗಿ ವರದಿಯಾಗಿದೆ.
ವಿಡಿಯೋದಲ್ಲಿ ನಟಿ ಪರಿಶಿಷ್ಟ ಜಾತಿ ಸಮುದಾಯದ ಬಗ್ಗೆ ಕೆಲವು ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ದಲಿತ ಹಕ್ಕುಗಳ ಹೋರಾಟಗಾರ ರಜತ್ ಕಲ್ಸನ್ ದೂರಿನಲ್ಲಿ ಆರೋಪಿಸಿದ್ದಾರೆ.
ಗಣೇಶ್ಗೆ
ನಾಯಕಿಯಾಗಿದ್ದ
ನಟಿ
ಯುವಿಕಾ
ಚೌಧರಿ
ಬಂಧನಕ್ಕೆ
ಒತ್ತಾಯ
ಈ ಹಿನ್ನೆಲೆ ಶುಕ್ರವಾರ ಸಂಜೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ನಟಿ ಯುವಿಕಾ ಚೌಧರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಜೀ ನ್ಯೂಸ್ ವರದಿ ಮಾಡಿದೆ. ಘಟನೆಯ ವಿವರ ಮುಂದೆ ಓದಿ...

ವಿಡಿಯೋದಲ್ಲಿ ಸಮುದಾಯದ ಬಗ್ಗೆ ಅವಹೇಳನ
ಮೇ 25 ರಂದು ನಟಿ ಯುವಿಕಾ ಚೌಧರಿ ವಿಡಿಯೋವೊಂದನ್ನು ಶೇರ್ ಮಾಡಿದ್ದರು. ಪತಿ ಪ್ರಿನ್ಸ್ ನರುಲಾ ಮನೆಯಲ್ಲಿ ಹೇರ್ ಸ್ಟೈಲ್ ಮಾಡಿಸಿಕೊಳ್ಳುತ್ತಿದ್ದ ವಿಡಿಯೋದಲ್ಲಿ ಮಾತನಾಡುವ ಸಂದರ್ಭದಲ್ಲಿ ಸಮುದಾಯವೊಂದರ ಬಗ್ಗೆ ಉಲ್ಲೇಖಿಸಿದ್ದರು. ಈ ಪದ ಬಳಕೆ ಮಾಡಿದ್ದಕ್ಕೆ ತೀವ್ರ ಆಕ್ಷೇಪಾ ಎದುರಾಯಿತು. ಯುವಿಕಾ ಜಾತಿ ನಿಂದನೆ ಮಾಡಿದ್ದಾರೆ. ಬಂಧಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಎದುರಾಯಿತು.

ಕ್ಷಮೆ ಕೇಳಿದ ಯುವಿಕಾ
ವಿಡಿಯೋ ಕುರಿತು ಹಾಗೂ ಯುವಿಕಾ ಬಳಸಿದ ಪದದ ಕುರಿತು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಎಚ್ಚೆತ್ತುಕೊಂಡ ನಟಿ ಕೂಡಲೇ ವಿಡಿಯೋ ಡಿಲೀಟ್ ಮಾಡಿದರು. ಬಳಿಕ ಕ್ಷಮೆಯಾಚಿಸಿದರು. 'ನಾನು ಉದ್ದೇಶಪೂರ್ವಕವಾಗಿ ಅಥವಾ ಯಾವುದೇ ಸಮುದಾಯದವರಿಗೆ ಬೇಸರ ತರಿಸಬೇಕೆಂದು ವಿಡಿಯೋ ಮಾಡಲಿಲ್ಲ. ನಾನು ಬಳಸಿದ ಪದದ ಅರ್ಥವೂ ನನಗೆ ಗೊತ್ತಿರಲಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮಿಸಿಬಿಡಿ' ಎಂದು ಸ್ಪಷ್ಟನೆ ನೀಡಿದ್ದರು.

ಯುವಿಕಾ ಪತಿಯೂ ಕ್ಷಮೆಯಾಚಿಸಿದರು
ಯುವಿಕಾ ಪತಿ ಪ್ರಿನ್ಸ್ ನರುಲಾ ಸಹ ಈ ಬಗ್ಗೆ ಕ್ಷಮೆ ಕೇಳಿದ್ದು, 'ಯುವಿಕಾ ಸೇರಿದಂತೆ ನಮಗೆ ಯಾರಿಗೂ ಆ ಪದದ ಅರ್ಥ ಗೊತ್ತಿರಲಿಲ್ಲ. ವಿಡಿಯೋ ಚಿತ್ರೀಕರಣ ಮಾಡಿದಾಗ ನಾನೂ ಅಲ್ಲಿಯೇ ಇದ್ದೆ. ಇದು ಬೇಕೆಂದು ಮಾಡಿದ ತಪ್ಪಲ್ಲ. ಒಮ್ಮೆ ನಮಗೆ ಆ ಪದದ ಅರ್ಥ ಗೊತ್ತಾದ ಬಳಿಕ ನಾವು ಮಾಡಿದ ತಪ್ಪು ಎಷ್ಟು ದೊಡ್ಡದೆಂದು ಅರಿವಾಯಿತು. ದಯವಿಟ್ಟು ನಮ್ಮನ್ನು ಕ್ಷಮಿಸಿ' ಎಂದು ಕೇಳಿಕೊಂಡಿದ್ದರು.
ಚಿತ್ರಗಳು:
ಧಾಂ
ಧೂಂ
ಆಗಿ
ನಡೆಯಿತು
ಪ್ರಿನ್ಸ್
ನರುಲಾ-ಯುವಿಕಾ
ಚೌಧರಿ
ಮದುವೆ
Recommended Video

ಕನ್ನಡದಲ್ಲಿ ನಟಿಸಿರುವ ಯುವಿಕಾ
ಯುವಿಕಾ ಚೌಧರಿ ಕನ್ನಡದಲ್ಲೂ ಸಿನಿಮಾ ಮಾಡಿದ್ದಾರೆ. 2009ರಲ್ಲಿ ತೆರೆಗೆ ಬಂದಿದ್ದ 'ಮಳೆಯಲಿ ಜೊತೆಯಲಿ' ಚಿತ್ರದಲ್ಲಿ ಗಣೇಶ್ಗೆ ನಾಯಕಿಯಾಗಿ ಅಭಿನಯಿಸಿದ್ದರು. ಹಿಂದಿಯ ಓಂ ಶಾಂತಿ ಓಂ, ಸಮ್ಮರ್ 2007 ಸೇರಿದಂತೆ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ 9ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದರು.