ಅಶೋಕ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಹಿರಿಯ ನಟ. ತಮ್ಮ ಕಲಾತ್ಮಕ ಪಾತ್ರಗಳಿಗೆ ಹೆಸರಾಗಿರುವ ಇವರು ಹಲವು ಸಮಾಜಪರ ಹೋರಾಟಗಳಲ್ಲಿ ಭಾಗವಹಿಸಿದ್ದಾರೆ.
ಲಕ್ಷ್ಮಿ ನರಸಿಂಹಯ್ಯ ಮತ್ತು ಪುಟ್ಟಮ್ಮ ದಂಪತಿಗಳ ಪುತ್ರನಾಗಿ ಬೆಂಗಳೂರಿನ ಆನೇಕಲ್ನಲ್ಲಿ ಜಿನಿಸಿದ ಅಶೋಕ್ರಿಗೆ ಬಾಲ್ಯದಿಂದಲೂ ನಟನೆ ಬಗೆ ಆಸಕ್ತಿಯಿತ್ತು. ಪದವಿ ಮುಗಿದ ನಂತರ ಮದ್ರಾಸ್ ಇನ್ಸ್ಟಿಟ್ಯೂಟ್ ಗೆ ಸೇರಿದ ಇವರು ನಟನಾ ತರಬೇತಿ ಪಡೆದರು.
`ಹೆಣ್ಣು ಸಂಸಾರದ ಕಣ್ಣು' ಚಿತ್ರದಿಂದ ನಟನೆ ಆರಂಭಿಸಿದ ಇವರು ನಂತರ ಸನಾದಿ ಅಪ್ಪಣ್ಣ,ರಂಗನಾಯಕಿ,ಚೆಲ್ಲಿದ ರಕ್ತ ಮುಂತಾದ ಚಿತ್ರಗಳಲ್ಲಿ ನಟಿಸಿ ಸೈ ಎನಸಿಕೊಂಡರು.
ಕರ್ನಾಟಕ ಚಲನಚಿತ್ರ ಕಲಾವಿದ ಮತ್ತು ಕಾರ್ಮಿಕ ವರ್ಗದ ನಾಯಕರಾಗಿಯೂ ಪ್ರಸ್ತುತರಾಗಿದ್ದಾರೆ