ಬ್ಯಾಂಕ್ ಜನಾರ್ಧನ್
Born on 1948 (Age 76) ಬೆಂಗಳೂರು
ಬ್ಯಾಂಕ್ ಜನಾರ್ಧನ್ ಜೀವನಚರಿತ್ರೆ
ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಇವರು 1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಜನಾರ್ಧನ್ ತಮ್ಮವಿದ್ಯಾಭ್ಯಾಸವನ್ನೆಲ್ಲಾ ಮುಗಿಸಿದ್ದು ಕೂಡ ಬೆಂಗಳೂರಿನಲ್ಲಿಯೇ. 1991ರಿಂದ ಚಂದನವನದಲ್ಲಿ ಸಕ್ರಿಯವಾಗಿರುವ ಇವರು, ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.
ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಸೇರಿದಂತೆ ಹಲವು ಸಿನಿಮಾಗಳಲ್ಲಿ ಗಮನ ಸೆಳೆದಿರುವ ಇವರು, ಪಾಪಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲೂ ನಟಿಸಿದ್ದಾರೆ.
ಹೃದಯಾಘಾತ: ಬ್ಯಾಂಕ್ ಜಾರ್ಧನ್ ಅವರಿಗೆ 2023ರ ಸೆಪ್ಟಂಬರ್ 26ರಂದು ಹೃದಯಘಾತವಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.