ದಿನಕರ್ ತೂಗುದೀಪ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕ ಮತ್ತು ನಿರ್ಮಾಪಕ. ಇವರು ಖ್ಯಾತ ಖಳನಟ ತೂಗುದೀಪ ಶ್ರೀನಿವಾಸರವರ ಕಿರಿಯ ಪುತ್ರ.
ಹಿರಿಯ ಸಹೋದರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಸೇರಿ `ತೂಗುದೀಪ ಪ್ರೊಡಕ್ಷನ್ಸ್ ಮತ್ತು ಡಿಸ್ಟ್ರಿಬ್ಯೂಷನ್ ಸಂಸ್ಥೆ ನಡೆಸುತ್ತಿದ್ದಾರೆ.
`ಜೊತೆ ಜೊತೆಯಲಿ' ಚಿತ್ರದಿಂದ ನಿರ್ದೇಶಕರಾಗಿ ಸಿನಿಪಯಣ ಆರಂಭಿಸಿದ ಇವರು `ನವಗ್ರಹ',`ಸಾರಥಿ',`ಒಂದೂರಲ್ಲಿ ಒಬ್ಬ ರಾಜ' ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
ನಿರ್ಮಾಪಕರಾಗಿ `ಬುಲ್- ಬುಲ್' ಮತ್ತು ಮದುವೆಯ ಮಮತೆಯ ಕರೆಯೋಲೆ ಚಿತ್ರಗಳನ್ನು ನಿರ್ಮಿಸಿದ್ದಾರೆ.