ದಿವ್ಯಾ ಉರುಡುಗ
ದಿವ್ಯಾ ಉರುಡುಗ ಜೀವನಚರಿತ್ರೆ
ದಿವ್ಯಾ ಉರುಡುಗ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಯುವ ಪ್ರತಿಭಾನ್ವಿತ ನಟಿ. ಕಿರುತೆರೆಯಲ್ಲಿ ಕೆಲವು ಸೀರಿಯಲ್ಗಳ ಮೂಲಕ ಮನೆಮಾತಾಗಿರುವ ದಿವ್ಯಾ `ಹುಲಿರಾಯ' ಚಿತ್ರದಿಂದ ಚಂದನವನದಲ್ಲಿ ಸಿನಿಪಯಣ ಆರಂಭಿಸಿದರು.
ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾದ ದಿವ್ಯಾ, ಶಾಲಾ ದಿನಗಳಲ್ಲಿ ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳುತ್ತಿದ್ದರು. ಶಿಕ್ಷಣಕ್ಕಾಗಿ ಮಂಗಳೂರಿನಲ್ಲಿದ್ದಾಗ ಇವರಿಗೆ ಕಿರುತೆರೆಯಲ್ಲಿ ನಟಿಸಿಲು ಆಫರ್ ಬಂತು. ಕಿರುತೆರೆಯಲ್ಲಿ `ಚಿಟ್ಟೆ ಹೆಜ್ಜೆ',``ಅಂಬಾರಿ',`ಖುಷಿ', `ಓಂ ಶಕ್ತಿ ಓಂ ಶಾಂತಿ' ಸೀರಿಯಲ್ಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾದರು. ಉದಯ ಟಿವಿಯಲ್ಲಿ ಪ್ರಸಾರವಾದ `ಸೂಪರ್ ಕಬ್ಬಡ್ಡಿ' ರಿಯಾಲಿಟಿ ಶೋನಲ್ಲಿ ಕೂಡ ಭಾಗಿಯಾಗಿದ್ದರು.
2017ರಲ್ಲಿ ತೆರೆಕಂಡ ಅರವಿಂದ್ ಕೌಶಿಕ್ ನಿರ್ದೇಶನದ `ಹುಲಿರಾಯ' ಚಿತ್ರದಿಂದ ಸಿನಿಪಯಣ ಆರಂಭಿಸಿದ ದಿವ್ಯಾ, ಈ ಚಿತ್ರದ ನಟನೆಗಾಗಿ ಸೈಮಾಗೆ ನಾಮ ನಿರ್ದೇಶನಗೊಂಡಿದ್ದರು. ರಾಜಕೀಯ ಆಧಾರಿತ `ಧ್ವಜ' ಮತ್ತು `ಫೇಸ್ 2 ಪೇಸ್' ಎಂಬ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
ಬಿಗ್ ಬಾಸ್
ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಭಾಗವಹಿಸಿದ್ದ ದಿವ್ಯಾ ಉರುಡುಗ, ಮತ್ತೆ ಬಿಗ್ ಬಾಸ್ ಕನ್ನಡ ಸೀಸನ್ 9ಕ್ಕೆ ಪ್ರವೇಶ ಮಾಡಿದ್ದರು. ಅದರಲ್ಲಿ 5ನೇ ಸ್ಥಾನ ಪಡೆದಿದ್ದರು.