X
ಗುರುಪ್ರಸಾದ್
Actor/Director/Cinematographer

ಗುರುಪ್ರಸಾದ್ ಜೀವನ ಚರಿತ್ರೆ

ಗುರುಪ್ರಸಾದ್ ಕನ್ನಡ ಚಿತ್ರರಂಗದ ಪ್ರಮುಖ ನಿರ್ದೇಶಕ, ನಿರ್ಮಾಪಕ, ನಟ ಮತ್ತು ಸಾಹಿತಿ. ತಮ್ಮ ನವಿರಾದ ಮತ್ತು ಸೂಕ್ಷ್ಮ ವ್ಯಂಗ್ಯಗಳ ಮೂಲಕ ಸಾಮಾಜಿಕ ಸಂದೇಶ ನೀಡುವ ಚಿತ್ರಗಳ ನಿರ್ದೇಶನದಲ್ಲಿ ಸಿದ್ಧಹಸ್ತರು. ಇವರು 1972ರಲ್ಲಿ ಕನಕಪುರದಲ್ಲಿ ಜನಿಸಿದರು. 


ವೃತ್ತಿಜೀವನ

ಗುರುಪ್ರಸಾದ್ 2006ರಲ್ಲಿ ತೆರೆಕಂಡ `ಮಠ' ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿಪಯಣ ಆರಂಭಿಸಿದರು. ಇದು ನವರಸ ನಾಯಕ ಜಗ್ಗೇಶ್‌ರ ನೂರನೇ ಚಿತ್ರ. 2009ರಲ್ಲಿ ಇದೇ ಜೋಡಿ `ಎದ್ದೇಳು ಮಂಜುನಾಥ' ಚಿತ್ರದ ಮೂಲಕ ಮತ್ತೊಂದು ಸಮಾಜಿಕ ಚಿತ್ರ ನೀಡಿತು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತು. ನಂತರ ಡೈರೆಕ್ಟರ್ ಸ್ಪೇಷಲ್, ಎರಡನೇ ಸಲ ಚಿತ್ರಗಳನ್ನು ನಿರ್ದೇಶಿಸಿದರು.


ನಿರ್ದೇಶಕ ಮಾತ್ರವಲ್ಲದೇ ನಟನಾಗಿ ಮಠ, ಎದ್ದೇಳು ಮಂಜುನಾಥ, ಮೈಲಾರಿ, ಹುಡುಗರು, ಅನಂತು v/s ನುಸ್ರತ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ. ಕಿಚ್ಚ ಸುದೀಪ್ ನಿರೂಪಣೆಯ ಕನ್ನಡ ಬಿಗ್‌ಬಾಸ್ ಅವತರಣಿಕೆಯಲ್ಲಿ ಭಾಗವಹಿಸಿದ್ದ ಇವರು, ಹಲವು ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ್ದಾರೆ.


ನಿಧನ; ಗುರುಪ್ರಸಾದ್ ಅವರು 2024ರ ನವೆಂಬರ್ 3ರಂದು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಹೆವೆನ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 

 





 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+