ಸಪ್ತಮಿ ಗೌಡ
Born on 08 Jun 1996 (Age 27) bangalore
ಸಪ್ತಮಿ ಗೌಡ ಜೀವನಚರಿತ್ರೆ
ಸಪ್ತಮಿ ಗೌಡ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಯುವ ನಟಿ. ಬೆಂಗಳೂರಿನವರಾದ ಸಪ್ತಮಿ ಗೌಡ ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ ಉಮೇಶ್ ಸುಪುತ್ರಿ. ಇವರು 2020ರಲ್ಲಿ ತೆರೆಕಂಡ ಧನಂಜಯ್ ಅಭಿನಯದ ಪಾಪ್ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.
ನಂತರ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದಲ್ಲಿ ನಟಿಸಿದರು. ಈ ಸಿನಿಮಾ ಬ್ಲಾಕ್ಬಸ್ಟರ್ ಆಗುವುದರ ಜೊತೆಗೆ ಸಪ್ತಮಿ ಗೌಡಗೆ ಡಿಮ್ಯಾಂಡ್ ಹೆಚ್ಚಾಯಿತು. ಸದ್ಯ ಇವರು ಯುವರಾಜ್ಕುಮಾರ್ ಅಭಿನಯದ 'ಯುವ' ಹಾಗೂ ಅಭಿಷೇಕ್ ಅಂಬರೀಶ್ ಅಭಿನಯದ 'ಕಾಳಿ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ.