Don't Miss!
- News India weather: ಈ ಭಾಗಗಳಲ್ಲಿ ಮುಂದಿನ ಐದು ದಿನ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಮಟ್ಟದಲ್ಲಿ ಹೆಸರು ತಂದುಕೊಟ್ಟ 'ಸಂಸ್ಕಾರ' ಚಿತ್ರಕ್ಕೆ 50 ವರ್ಷ
ಭಾರತದ ವಿವಿಧ ಭಾಷೆಗಳಲ್ಲಿ ಸಿನಿಮಾ ನಿರ್ಮಾಣದ ಪ್ರಯತ್ನಗಳು ಶುರುವಾದ ಸಂದರ್ಭದಲ್ಲಿ ಕನ್ನಡದಲ್ಲಿಯೂ ಸಿನಿಮಾ ಮಾಡುವ ಹೋರಾಟಗಳು ನಡೆದಿದ್ದವು. ಪೌರಾಣಿಕ, ಸಾಮಾಜಿಕ ವಸ್ತುಗಳನ್ನು ಒಳಗೊಂಡ ಸಿನಿಮಾಗಳನ್ನು ಮಾಡುತ್ತಿದ್ದ ಕನ್ನಡ ಚಿತ್ರರಂಗ ಕಾದಂಬರಿ ಆಧಾರಿತ ಚಿತ್ರಗಳತ್ತ ಹೊರಳಿತ್ತು. ಆದರೆ ಅವೆಲ್ಲವೂ ಕಮರ್ಷಿಯಲ್ ಗುಣವನ್ನು ಹೊಂದಿದ್ದವು.
Recommended Video
ಚಿತ್ರರಂಗ ಕಲಾತ್ಮಕ ಚಿತ್ರಗಳ ಪರಂಪರೆಯನ್ನು ಹುಟ್ಟುಹಾಕಿದ್ದು 70ರ ದಶಕದಲ್ಲಿ. ಕನ್ನಡದಲ್ಲಿ ಆ ಸಂದರ್ಭದಲ್ಲಿ ಸೃಷ್ಟಿಯಾದ ಚಿತ್ರಗಳು ಪರಭಾಷೆಯ ಚಿತ್ರರಂಗಗಳಲ್ಲಿಯೂ ಅಚ್ಚರಿ ಮೂಡಿಸಿದ್ದವು. ಕಲಾತ್ಮಕ ಹಾಗೂ ಗುಣಮಟ್ಟದ ಚಿತ್ರಗಳು ಕನ್ನಡ ಚಿತ್ರರಂಗದ ಪರಂಪರೆಯ ದಿಕ್ಕನ್ನು ಬದಲಿಸಿತ್ತು. ಅದರಲ್ಲಿ ನಮ್ಮ ಚಿತ್ರರಂಗಕ್ಕೆ ಖ್ಯಾತಿ ತಂದುಕೊಟ್ಟಿದ್ದು 'ಸಂಸ್ಕಾರ' ಚಿತ್ರ.
ಕನ್ನಡದಲ್ಲಿ ಹೊಸ ಅಲೆ ಎಬ್ಬಿಸಿದ ಅಪರೂಪದ ಚಿತ್ರ ಸಂಸ್ಕಾರ
ಸುವರ್ಣ ಸಂಭ್ರಮ
ಕನ್ನಡಕ್ಕೆ ಮೊದಲ 'ಸ್ವರ್ಣ ಕಮಲ' ಪ್ರಶಸ್ತಿ ತಂದುಕೊಟ್ಟ ಚಿತ್ರ ಸಂಸ್ಕಾರ. ಈ ಚಿತ್ರ ಬಿಡುಗಡೆಯಾಗಿದ್ದು 1970ರ ಮೇ 13ರಂದು. ಅಂದರೆ ಸರಿಯಾಗಿ 50 ವರ್ಷಗಳ ಹಿಂದೆ. ಕನ್ನಡ ಚಿತ್ರರಂಗದ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬೆಳಗಿದ ಚಿತ್ರಕ್ಕೆ ಇಂದು ಸುವರ್ಣ ಸಂಭ್ರಮ. ಕೇವಲ 90 ಸಾವಿರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಚಿತ್ರ ಬಾಕ್ಸ್ ಆಫೀಸ್ನಲ್ಲಿಯೂ ಭರ್ಜರಿ ಲಾಭ ಗಳಿಸಿತ್ತು.
ಸಂಸ್ಕಾರ ಕಾದಂಬರಿ
ಯು.ಆರ್. ಅನಂತಮೂರ್ತಿ ಕಾದಂಬರಿ 'ಸಂಸ್ಕಾರ' ಆಧಾರಿತ ಅದೇ ಹೆಸರಿನ ಚಿತ್ರವನ್ನು ಪಟ್ಟಾಭಿರಾಮ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿದ್ದರು. ಗಿರೀಶ್ ಕಾರ್ನಾಡ್, ಸ್ನೇಹಲತಾ ರೆಡ್ಡಿ, ಪಿ. ಲಂಕೇಶ್, ಜಯರಾಮ್, ಬಿ.ಎಸ್. ರಾಮರಾವ್, ಲಕ್ಷ್ಮಣರಾವ್ ಮುಂತಾದವರು ನಟಿಸಿದ್ದರು.
ಸ್ವರ್ಣ ಕಮಲ ಗೆದ್ದ 'ಸಂಸ್ಕಾರ' ಚಿತ್ರದ ಮೇಕಿಂಗ್
ಸೆನ್ಸಾರ್ ಬೋರ್ಡ್ ನಿಷೇಧ
ಒಂದು ಜಾತಿಯ ಭಾವನೆಗಳನ್ನು ಕೆರಳಿಸುವಂತಹ ಹಾಗೂ ಇತರೆ ವಿವಾದಾತ್ಮಕ ಸಂಗತಿಗಳು ಚಿತ್ರದಲ್ಲಿವೆ ಎಂಬ ಆಕ್ಷೇಪ ವ್ಯಕ್ತಪಡಿಸಿ ಮದ್ರಾಸ್ ಸೆನ್ಸಾರ್ ಬೋರ್ಡ್, ಚಿತ್ರದ ಮೇಲೆ ನಿಷೇಧ ಹೇರಿತು. ಕೊನೆಗೆ ಸಚಿವಾಲಯದ ಮೊರೆ ಹೋಗಿ ನಿಷೇಧ ಹಿಂದಕ್ಕೆ ಪಡೆದುಕೊಳ್ಳಲಾಗಿತ್ತು. ಹೀಗೆ ಸರ್ಕಾರಿ ಸಂಸ್ಥೆಯಿಂದ ನಿಷೇಧಕ್ಕೆ ಒಳಗಾಗಿದ್ದ ಸಿನಿಮಾವೊಂದು ಸರ್ಕಾರದಿಂದಲೇ ಪ್ರಶಸ್ತಿಗಳನ್ನು ಪಡೆದುಕೊಂಡಿತು.
ಹಲವು ಪ್ರಶಸ್ತಿಗಳು
1970-71ರ ಅತ್ಯುತ್ತಮ ಚಿತ್ರವೆಂದು ಸ್ವರ್ಣ ಕಮಲ ರಾಷ್ಟ್ರಪ್ರಶಸ್ತಿ, ನಿರ್ದೇಶಕ ಪಟ್ಟಾಭಿರಾಮ ರೆಡ್ಡಿ ಅವರಿಗೆ ರಜತ ಕಮಲ ಪ್ರಶಸ್ತಿ, ಅಷ್ಟೇ ಅಲ್ಲದೆ ಎರಡನೆಯ ಅತ್ಯುತ್ತಮ ಚಿತ್ರ, ಅತ್ಯುತ್ತಮ ಕಥೆ, ಅತ್ಯುತ್ತಮ ಛಾಯಾಗ್ರಹಣ ಮತ್ತು ಅತ್ಯುತ್ತಮ ಪೋಷಕ ನಟ ಎಂಬ ನಾಲ್ಕು ರಾಜ್ಯ ಪ್ರಶಸ್ತಿಗಳು ಕೂಡ ಒಲಿದವು. 1972ರ ಲೊಕಾನೋ ಚಿತ್ರೋತ್ಸವದಲ್ಲಿಯೂ ಪ್ರಶಸ್ತಿ ಪಡೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿತು.