Don't Miss!
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Automobiles Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಾವಣಗೆರೆಯಲ್ಲಿ ಡಾ.ರಾಜ್ ಕನ್ನಡ ಕಹಳೆ: ಅಜ್ಜಿ ನೋಡಲು ವಾಪಸ್ ಬಂದಿದ್ದ ಅಣ್ಣಾವ್ರು!
ಕನ್ನಡ ನಾಡು, ನುಡಿ, ಕರ್ನಾಟಕ ಏಕೀಕರಣ, ಗೋಕಾಕ್ ಚಳವಳಿ ಸೇರಿದಂತೆ ಹಲವು ಕನ್ನಡಪರ ಹೋರಾಟಗಳಲ್ಲಿ ದಾವಣಗೆರೆ ಹೆಸರು ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಯಾವುದೇ ಕನ್ನಡ ವಿರೋಧಿ ಕೃತ್ಯ ಕಂಡು ಬಂದಾಗ ಪ್ರತಿಭಟನೆಗಳು ನಡೆಯುತ್ತವೆ. ಹಿಂದಿ ಭಾಷೆ ಹೇರಿಕೆ, ಕನ್ನಡ ನಾಮಫಲಕ ಅಳವಡಿಕೆ, ಕನ್ನಡ ಭಾಷೆ ಏಳಿಗೆ, ಸಂಸ್ಕೃತಿ ವಿಚಾರ ಬಂದಾಗ ಬೆಂಬಲ ಘೋಷಿಸುತ್ತದೆ ಈ ಬೆಣ್ಣೆನಗರಿ.
ಗೋಕಾಕ್ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಬಂಕಾಪುರದ ಚನ್ನಬಸಪ್ಪರ ಹೆಸರು ಮುಂಚೂಣಿಯಲ್ಲಿರುತ್ತದೆ. ಮಾತ್ರವಲ್ಲ, ಇಂದಿಗೂ ಕನ್ನಡತನ ಉಳಿಸಿಕೊಂಡಿರುವ ಅಪ್ಪಟ ಕನ್ನಡ ಹೋರಾಟಗಾರ ಅಂದರೆ ಬಂಕಾಪುರದ ಚನ್ನಬಸಪ್ಪ. ಇವರು ಗೋಕಾಕ್ ಚಳುವಳಿ, ಅಣ್ಣಾವ್ರ ಭಾಗವಹಿಸಿದ ಸಿಕ್ಕ ಬೆಂಬಲ, ಹೋರಾಟದ ದಿನಗಳನ್ನು ಈಗಲೂ ನೆನಪಿಸಿಕೊಳ್ಳುತ್ತಾರೆ.
ಜೋಶ್ 'ಕನ್ನಡ ರಾಜ್ಯೋತ್ಸವ'ದಲ್ಲಿ ಭಾಗಿಯಾಗಿ ಚಿನ್ನದ ನಾಣ್ಯ ಗೆಲ್ಲುವ ಅವಕಾಶ ಪಡೆಯಿರಿ!
1956 ನವೆಂಬರ್ 1 ರಂದು ಕರ್ನಾಟಕ ಏಕೀಕರಣ ಘೋಷಣೆ ಮಾಡಲಾಯಿತು. ಆದರೆ ರಾಜ್ಯದ ಹೆಸರು ಮೈಸೂರು ಎಂದು ಕರೆಯಲಾಯಿತು. ಈ ರಾಜ್ಯಕ್ಕೆ ಕರ್ನಾಟಕ ಎಂದೇ ನಾಮಕರಣ ಮಾಡಬೇಕೆಂದು ಹೋರಾಟ ಶುರುವಾಯ್ತು. ಆಗಲೂ ದಾವಣಗೆರೆಯಲ್ಲಿ ಬೆಂಬಲ ವ್ಯಕ್ತವಾಗಿತ್ತು. ಇನ್ನು ಗೋಕಾಕ್ ಚಳುವಳಿಗೆ ಅಣ್ಣಾವ್ರ ಧುಮುಕಿದ ಬಳಿಕ ಸಿಕ್ಕ ಬೆಂಬಲ ಹಾಗೂ ಕೆಲವು ಸನ್ನಿವೇಶಗಳನ್ನು ಕನ್ನಡಪರ ಹೋರಾಟಗಾರ ಬಂಕಾಪುರದ ಚನ್ನಬಸಪ್ಪ ವಿವರಿಸುತ್ತಾರೆ.
ಗೋಕಾಕ್ ಚಳುವಳಿಯಲ್ಲಿ ಡಾ.ರಾಜ್ ಕ್ರಾಂತಿ
ಗೋಕಾಕ್ ಚಳುವಳಿಗೆ ವರನಟ ರಾಜಕುಮಾರ್ ಎಂಟ್ರಿ ಕೊಟ್ಟ ಮೇಲೆ ಕನ್ನಡ ಜ್ವಾಲೆ ಎಲ್ಲೆಡೆ ಶುರುವಾಯಿತು. ಕಿಚ್ಚು ಹತ್ತಿತ್ತು. ಕನ್ನಡದ ಜಾಗೃತಿ ಹೆಚ್ಚಾಯಿತು. 1982-83ರ ಸಮಯದಲ್ಲಿ ಇಡೀ ಕರುನಾಡು ಗೋಕಾಕ ಚಳುವಳಿಗೆ ಬೆಂಬಲ ಸೂಚಿಸಿತ್ತು. ಬೆಂಗಳೂರು, ಹುಬ್ಬಳ್ಳಿಯಲ್ಲಿ ಬಿಟ್ಟರೆ ಅತ್ಯಂತ ದೊಡ್ಡ ಸಮಾವೇಶ ನಡೆದಿದ್ದು ದಾವಣಗೆರೆಯಲ್ಲಿ. ಧಾರವಾಡದ ವಿದ್ಯಾವರ್ಧಕ ಸಂಘ ಇಲ್ಲಿನ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ ಹೋರಾಟ ಸಭೆಯಲ್ಲಿ ಡಾ. ರಾಜಕುಮಾರ್, ಅಶೋಕ್, ಪತ್ರಕರ್ತ ಸತ್ಯ, ಚಂದ್ರಶೇಖರ ಪಾಟೀಲ್, ಪಾಟೀಲ ಪುಟ್ಟಪ್ಪ, ಎಂ. ಚಿದಾನಂದಮೂರ್ತಿ, ಎಂ. ಎಂ. ಕಲಬುರ್ಗಿ ಸೇರಿದಂತೆ ಇಡೀ ಕನ್ನಡ ಚಿತ್ರರಂಗವೇ ಹೋರಾಟದಲ್ಲಿ ಪಾಲ್ಗೊಂಡಿತ್ತು. "ರಾಜಕುಮಾರ್ ಬಂದಿದ್ದ ಈ ಹೋರಾಟಕ್ಕೆ ಸೇರಿದ್ದ ಜನಸಾಗರ ಅದ್ವಿತೀಯ. ಆ ಕಾಲದಲ್ಲಿ ಲಕ್ಷಾಂತರ ಜನರು ಬಂದಿದ್ದರು. ಗೋಕಾಕ ಚಳುವಳಿಯ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ್ದೇ ಇಲ್ಲಿ. ಅಷ್ಟು ಸಪೋರ್ಟ್ ಸಿಕ್ಕಿತ್ತು. ಈಗಲೂ ಜನರು ಸೇರಿದ್ದು ಕಣ್ಣ ಮುಂದೆಯೇ ಇದೆ ಎನ್ನುತ್ತಾರೆ." ಕನ್ನಡಪರ ಹೋರಾಟಗಾರ ಬಂಕಾಪುರದ ಚನ್ನಬಸಪ್ಪ.
ಕನ್ನಡ ರಾಜ್ಯೋತ್ಸವದ ವಿಶೇಷ: ಕೇಳಲೇಬೇಕಾದ ಎವರ್ಗ್ರೀನ್ 6 ಹಾಡುಗಳು
ಹೋರಾಟಗಾರರ ಬಂಧನ
"ದಾವಣಗೆರೆಯಲ್ಲಿ ಗೋಕಾಕ್ ಚಳುವಳಿ ಹೋರಾಟಗಾರರನ್ನು ಬಂಧಿಸಲಾಗಿತ್ತು. ಸುಮಾರು 77 ಜನರು ಜೈಲುವಾಸ ಅನುಭವಿಸಿದ್ದರು. ಚಳವಳಿಯಲ್ಲಿ ಪ್ರಮುಖರಾಗಿದ್ದ ಬಂಕಾಪುರದ ಚನ್ನಬಸಪ್ಪ ಹಾಗೂ ಪಿ. ಹಾಲೇಶ್ ಅವರಿಗೆ ಯಾವುದೇ ಕಾರಣಕ್ಕೂ ನೀವು ಬಂಧನಕ್ಕೆ ಒಳಗಾಗಬಾರದು. ಇಲ್ಲಿನ ಹೋರಾಟ ರೂಪುರೇಷೆ ರೂಪಿಸಿ ಎಂದು ಸೂಚನೆ ಕೊಡಲಾಗಿತ್ತು. ಈ ಕಾರಣಕ್ಕೆ ಸೆರೆಯಾಗಲಿಲ್ಲ. ಉಳಿದವರು ಸೆರೆಯಾದರೂ ಹೋರಾಟ ಮಾತ್ರ ಮುಂದುವರಿದೇ ಇತ್ತು. ಆರಂಭದಲ್ಲಿ ಪ್ರತಿಕ್ರಿಯೆ ಅಷ್ಟೇನೂ ಇರಲಿಲ್ಲ. ದಿನ ಕಳೆದಂತೆ ಜನರೂ ಸಹ ಹೆಚ್ಚಾಗಿ ಬರತೊಡಗಿದರು. ಜಾತಿ, ಧರ್ಮ, ದೊಡ್ಡವರು, ಸಣ್ಣವರು ಎಂಬುದು ಲೆಕ್ಕಕ್ಕಿಲ್ಲ ಎಂಬಂತೆ ಪ್ರತಿಭಟನೆಗೆ ಭಾರೀ ಸ್ಪಂದನೆ ಸಿಕ್ಕಿತು" ಎಂದು ನೆನಪಿಸಿಕೊಳ್ಳುತ್ತಾರೆ.
ಅಜ್ಜಿನೋಡಲು ಹಿಂತಿರುಗಿ ಬಂದ ಅಣ್ಣಾವ್ರು
"ಇನ್ನು ದಾವಣಗೆರೆಗೆ ರಾಜಕುಮಾರ್ ಆಗಮಿಸುತ್ತಾರೆ ಎಂಬ ಕಾರಣಕ್ಕೆ 80 ರ ವೃದ್ಧೆ ಕಾದು ಕುಳಿತಿದ್ದರು. ದಾವಣಗೆರೆ ಸಮಾವೇಶ ಮುಗಿಸಿಕೊಂಡು ಹರಪನಹಳ್ಳಿಗೆ ರಾಜಕುಮಾರ್ ತೆರಳುತ್ತಾರೆ ಎಂದು ಗೊತ್ತಾದ ಹಿನ್ನೆಲೆಯಲ್ಲಿ ಕಾದೇ ಕುಳಿತಿದ್ದರು ಅಜ್ಜಿ. ರಾಜಕುಮಾರ್ ಅವರಿಗೆ ಈ ವಿಷಯ ಗೊತ್ತಿರಲಿಲ್ಲ. ಇಲ್ಲಿನ ಸಮಾವೇಶದಲ್ಲಿ ಪಾಲ್ಗೊಂಡು ಹರಪನಹಳ್ಳಿಗೆ ಹೋದರು. ಆಮೇಲೆ ವಯಸ್ಸಾದ ವೃದ್ಧೆಯೊಬ್ಬರು ನಿಮ್ಮನ್ನು ನೋಡಬೇಕೆಂಬ ಕಾರಣಕ್ಕೆ ದಿನದಿಂದ ಕಾಯುತ್ತಿದ್ದಾರೆ ಎಂದರು. ಆಗ ತಡಮಾಡದೇ ವಾಪಸ್ ಬಂದಿದ್ದ ರಾಜಕುಮಾರ್ ಅವರು, ಅಜ್ಜಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಜೊತೆಗೆ ಕನ್ನಡಪರ ಹೋರಾಟಕ್ಕೆ ಬೆಂಬಲಿಸಿ ಎಂದು ಮನವಿ ಮಾಡಿದ್ದ ರಾಜಕುಮಾರ್ ಅವರ ಸರಳತೆ ಇಂದಿಗೂ ಎಲ್ಲರೂ ನೆನಪು ಮಾಡಿಕೊಳ್ಳುತ್ತಾರೆ" ಎನ್ನುತ್ತಾರೆ ಬಂಕಾಪುರದ ಚನ್ನಬಸಪ್ಪರು.
ಚಳುವಳಿಗೆ ದಾವಣಗೆರೆ ಜನರ ಶಕ್ತಿ
ಗೋಕಾಕ್ ಚಳುವಳಿಗೆ ಶಕ್ತಿ ತುಂಬಿದ ನೆಲ ಅಂದರೆ ದಾವಣಗೆರೆ. ಕನ್ನಡಕ್ಕಾಗಿ ಈಗಿನ ಮಹಾನಗರ ಪಾಲಿಕೆ ಎದುರು ಸುಮಾರು ಮೂರು ತಿಂಗಳ ಕಾಲ ಹೋರಾಟ ನಡೆದಿತ್ತು. ವಕೀಲರು, ರಾಜಕಾರಣಿಗಳು, ಆಟೋಚಾಲಕರು, ವೈದ್ಯರು, ಕಾರ್ಮಿಕರು, ರೈತರು ಹೀಗೆ ಸುತ್ತಮುತ್ತಲಿನ ಜನರು ಭಾರೀ ಸಂಖ್ಯೆಯಲ್ಲಿ ಅಪಾರ ಸ್ಪಂದನೆ ತೋರಿದರು. ದಾವಣಗೆರೆ ನಿವಾಸಿ ಆಗಿದ್ದ ನೇತಾಜಿ ಪತ್ರಿಕೆ ಸಂಪಾದಕ ಇಟಗಿ ವೇದಮೂರ್ತಿ ಅವರು, ಕರ್ನಾಟಕದ ಏಕೀಕರಣ ಆಗುವವರೆಗೆ ನಿರಂತರವಾಗಿ ಸಕ್ರಿಯವಾಗಿ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ಕರ್ನಾಟಕ ಏಕೀಕರಣ ಇಲ್ಲವೇ ನನ್ನ ಮರಣ ಎಂಬ ಘೋಷವಾಕ್ಯ ಸಾಕಷ್ಟು ಪ್ರಸಿದ್ಧಿ ಹೊಂದಿತ್ತು. ಅನೇಕ ಲಾವಣಿಕಾರರು ಏಕೀಕರಣದ ಸಂದರ್ಭಕ್ಕೆ ಅನುಗುಣವಾಗಿ ಹಾಡು ರಚಿಸಿ ಹಾಡುವ ಮೂಲಕ, ನಾಟಕ ಪ್ರದರ್ಶಿಸಿ ಜನರಲ್ಲಿ ಕನ್ನಡದ ಅಸ್ಮಿತೆ ಕಾಪಾಡುವ ಪ್ರಯತ್ನ ಮಾಡಿದರು. ದಾವಣಗೆರೆಯಲ್ಲಿ ಪ್ರತಿಭಟನೆ, ಲಾಠಿ ಚಾರ್ಜ್, ಗೋಲಿಬಾರ್ ಸೇರಿದಂತೆ ಹಲವು ರೀತಿಯ ಹೋರಾಟಗಳು ಕನ್ನಡಕ್ಕಾಗಿ ನಡೆದಿವೆ. ಕನ್ನಡಕ್ಕೆ ಧಕ್ಕೆ ಬಂದಾಕ್ಷಣ ಹೋರಾಟ, ಚಳವಳಿ ಶುರುವಾಗುತ್ತದೆ. ಕರ್ನಾಟಕ ಏಕೀಕರಣ ಚಳವಳಿ, ಗೋಕಾಕ ಹೋರಾಟದಲ್ಲಿ ದಾವಣಗೆರೆ ಹೆಸರು ಚಿರಸ್ಥಾಯಿಯಾಗಿ ಉಳಿದಿದೆ.