twitter
    For Quick Alerts
    ALLOW NOTIFICATIONS  
    For Daily Alerts

    ಚರಿತ್ರೆ ಸೃಷ್ಟಿಸಿದ 'ಗೀತಾಂಜಲಿ'ಯ ದೃಶ್ಯಕಾವ್ಯ ತೆರೆದಿಟ್ಟ ಬರಹಗಾರ ಮಾಸ್ತಿ

    By ಮಾಸ್ತಿ
    |

    'ಪಲ್ಲವಿ ಅನುಪಲ್ಲವಿ ' ಸಿನಿಮಾದ ಮೂಲಕ ತಮ್ಮ ವೃತ್ತಿಜೀವನ ಆರಂಭಿಸಿದ ನಿರ್ದೇಶಕ ಮಣಿರತ್ನಂ ತದನಂತರ ತಮಿಳಿನಲ್ಲಿ ನಿರ್ದೇಶಿಸಿದ ಅಗ್ನಿ ನಕ್ಷತ್ರಂ ಬಿಡುಗಡೆಯಾಗಿ ತೆರೆಕಂಡ ಎಲ್ಲೆಡೆ ಯಶಸ್ವೀ ಪ್ರದರ್ಶನ ಕಂಡಿತ್ತು. ಆ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ ಅವರ ಮನೆಯ ಮುಂದೆ ಸೌತ್ ಇಂಡಸ್ಟ್ರೀಯ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳ ನಿರ್ಮಾಪಕರು ಮುಂಗಡ ಹಣದೊಂದಿಗೆ ಸರತಿಯಲ್ಲಿ ನಿಂತಿದ್ದರು.

    ಅಷ್ಟೊತ್ತಿಗಾಗಲೇ ಕನ್ನಡ, ತಮಿಳಿನಲ್ಲಿ ಸಿನಿಮಾಗಳನ್ನು ನಿರ್ದೇಶಿಸಿದ್ದ ಮಣಿರತ್ನಂಗೆ ಒಂದು ತೆಲುಗು ಸಿನಿಮಾ ಮಾಡುವ ಅಭಿಲಾಷೆಯಿತ್ತು. ಅದರಂತೆ ಅವರು ಹೈದರಾಬಾದಿನ ನಿರ್ಮಾಪಕರೊಬ್ಬರಿಗೆ ಸಿನಿಮಾ ಮಾಡುವುದಾಗಿ ಒಪ್ಪಿಗೆ ನೀಡಿದ್ದರು.

    ಮಣಿರತ್ನಂ ನಿರ್ದೇಶನದ ಈ ಚಿತ್ರ ಎಪಿ ಅರ್ಜುನ್‌ಗೆ ಇಷ್ಟ ಆಗ್ಲಿಲ್ಲಮಣಿರತ್ನಂ ನಿರ್ದೇಶನದ ಈ ಚಿತ್ರ ಎಪಿ ಅರ್ಜುನ್‌ಗೆ ಇಷ್ಟ ಆಗ್ಲಿಲ್ಲ

    ಆ ನಿರ್ಮಾಪಕರಿಗೆ ಈಗಾಗಲೇ ಹಿಟ್ ಆಗಿರುವ ಅಗ್ನಿ ನಕ್ಷತ್ರಂ ಸಿನಿಮಾವನ್ನೇ ನಾಗಾರ್ಜುನ ಮತ್ತು ವೆಂಕಟೇಶ್ ರನ್ನು ಹಾಕಿಕೊಂಡು ತೆಲುಗಿನಲ್ಲಿ ಮಾಡುವಾಸೆ, ಆದರೆ ಈ ಇಬ್ಬರು ಸ್ಟಾರ್ ಗಳ ಮಧ್ಯೆ ಒಂದು ಘರ್ಷಣೆಯಿದ್ದ ಕಾರಣ ಆ ಸಿನಿಮಾ ಆಗಲಿಲ್ಲ ಬದಲಾಗಿ ಅದೇ ಸಿನಿಮಾ ಘರ್ಷಣ ಅನ್ನೋ ಹೆಸರಿನಲ್ಲಿ ಡಬ್ಬಿಂಗ್ ಆಗಿ ಸಕ್ಸಸ್ ಆಯಿತು.

    ಪತ್ರಿಕೆಯಲ್ಲಿ ಬರುತ್ತಿದ್ದ ವಿಷಯವೇ ಸಿನಿಮಾ ಆಯ್ತು

    ಪತ್ರಿಕೆಯಲ್ಲಿ ಬರುತ್ತಿದ್ದ ವಿಷಯವೇ ಸಿನಿಮಾ ಆಯ್ತು

    ಈ ಮಧ್ಯೆ ದೆಹಲಿಯ ಆಸ್ಪತ್ರೆಯೊಂದರಲ್ಲಿ ಹದಿಮೂರು ವರುಷದ ಕ್ಯಾನ್ಸರ್ ಪೀಡಿತ ಹೆಣ್ಣು ಮಗುವೊಂದು ಬದುಕಿನ ತನ್ನ ಅಂತಿಮ ದಿನಗಳ ಅನುಭವಗಳನ್ನು ಒಂದು ಆಂಗ್ಲ ಪತ್ರಿಕೆಗೆ ಬರೆಯುತ್ತಿದ್ದಳು. ಪ್ರತೀವಾರ ತಪ್ಪದೇ ಅದನ್ನು ಓದುತ್ತಿದ್ದ ಮಣಿರತ್ನಂ ಆಕೆಯ ಅನುಭವಗಳನ್ನು ಸಿನಿಮಾ ಮಾಡುವ ಆಲೋಚನೆಯಲ್ಲಿದ್ದರು ಮತ್ತು ಈ ವಿಷಯವನ್ನು ಅದೇ ನಿರ್ಮಾಪಕರೊಂದಿಗೆ ಚರ್ಚಿಸಿ ಸಿನಿಮಾ ಮಾಡಲು ಮುಂದಾದರು. ಆ ಸಿನಿಮಾಗೆ ಶೀರ್ಷಿಕೆಯಾಗಿ ಅಸುನೀಗಿದ ಆ ಹೆಣ್ಣುಮಗಳ ಹೆಸರನ್ನೇ ಇಡುತ್ತಾರೆ ಅದೇ "ಗೀತಾಂಜಲಿ".

    ಯುವ ಪ್ರೇಮಿಗಳ ಕಥೆಯಲ್ಲಿ ಕರಗಿದ ಮಣಿಯುವ ಪ್ರೇಮಿಗಳ ಕಥೆಯಲ್ಲಿ ಕರಗಿದ ಮಣಿ

    ಮದುವೆ ಸಮಾರಂಭದಲ್ಲಿ ನಾಯಕಿ ಹುಡುಕಿದ್ರು

    ಮದುವೆ ಸಮಾರಂಭದಲ್ಲಿ ನಾಯಕಿ ಹುಡುಕಿದ್ರು

    ನಾಯಕ ನಾಗಾರ್ಜುನನಿಗೆ ಹೊಸ ನಾಯಕಿಯನ್ನು ತರೋಣವೆಂದು ತಲಾಷಿಯಲ್ಲಿದ್ದಾಗಲೇ ಮಣಿಗೂ ಸುಹಾಸಿನಿಗೂ ಮದುವೆ ಏರ್ಪಾಟಾಗುತ್ತದೆ ಆ ಮದುವೆಗೆ ಅಂತರಾಷ್ಟ್ರೀಯ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್ ಆಗಮಿಸಿರುತ್ತಾರೆ. ಅವರ ಜೊತೆಗೊಬ್ಬಳು ಹುಡುಗಿ ಬಂದಿರುತ್ತಾಳೆ, ಆಕೆ ಹುಟ್ಟಿ ಬೆಳೆದಿದ್ದು ಇಂಗ್ಲೆಂಡಿನಲ್ಲಿ, ತಾಯಿ ತಮಿಳು ಭಾಷಿಕಳು ತಂದೆ ಕನ್ನಡಿಗ ವೃತ್ತಿಯಲ್ಲಿ ವೈದ್ಯರಾಗಿರುತ್ತಾರೆ. ಮದುವೆ ಮಂಟಪದಲ್ಲಿದ್ದ ಮಣಿರತ್ನಂ ನಾಯಕಿಯನ್ನಾಗಿ ಆಕೆಯನ್ನು ಅವರ ಮನೆಯವರನ್ನು ಮನವೊಲಿಸುತ್ತಾರೆ, ಆಕೆಯ ಹೆಸರೇ 'ಗಿರಿಜ' ಗೀತಾಂಜಲಿ ಚಿತ್ರದ ನಾಯಕಿ.

    ಪ್ರೀತಿಗಾಗಿ ಬದುಕಬೇಕು

    ಪ್ರೀತಿಗಾಗಿ ಬದುಕಬೇಕು

    ತನ್ನ ಕೈಹಿಡಿದ ನವವಧು ಸುಹಾಸಿನಿ ಕೈಯಿಂದಲೇ ಆರಂಭ ಫಲಕ ತೋರಿಸುವುದರ ಮೂಲಕ ಆರಂಭವಾದ ಗೀತಾಂಜಲಿ ಚಿತ್ರೀಕರಣ ನಿರ್ವಿಘ್ನವಾಗಿ ನೆರವೇರುತ್ತದೆ. ಈ ಚಿತ್ರದ ಕತೆಯಲ್ಲಿ ನಾಯಕನಿಗೆ ವಾಸಿಯಾಗದ ಮಾರಣಾಂತಿಕ ಖಾಯಿಲೆಯಿರುತ್ತದೆ. ಸಾವೆಂಬ ಸುಡುಬೆಂಕಿಯನ್ನು ತಣ್ಣಗೆ ಆಲಂಗಿಸಿಕೊಳ್ಳಲು ಮತ್ತು ತನ್ನ ಕೊನೆಯ ದಿನಗಳನ್ನು ಕಳೆಯಲು ನಾಯಕ ಊಟಿಗೆ ತೆರಳುತ್ತಾನೆ. ಅಲ್ಲಿ ಸಾವಿನ ದಾರಿ ಕಾಯುತ್ತಿದ್ದ ಅವನಿಗೆ ಸುಂದರವಾದ ಹುಡುಗಿಯೊಬ್ಬಳ ಪರಿಚಯವಾಗುತ್ತದೆ. ಪಕ್ಷಿಯಂತೆ ಅವಳು ಸ್ವಚ್ಛಂದವಾಗಿ ಹಾರಾಡುತ್ತಾ ತನ್ನ ಬದುಕಿನ ಪ್ರತಿ ಕ್ಷಣವನ್ನೂ ಆಹ್ಲಾದಕರವಾಗಿ ಅನುಭವಿಸುತ್ತಿರುತ್ತಾಳೆ, ಅಂದದ ಜೊತೆಗೆ ಚೆಂದದ ಅವಳ ಉತ್ಸಾಹವನ್ನು ಕಂಡ ನಾಯಕನಿಗೆ ಅವಳ ಮೇಲೆ ಪ್ರೇಮಾಂಕುರವಾಗುತ್ತದೆ, ಅವಳಿಗೋಸ್ಕರ ಅವಳ ಪ್ರೀತಿಗೋಸ್ಕರ ಬದುಕಲು ಹಪಾಹಪಿಸುತ್ತಾನೆ. ಸಾವಿನಂಚಿನಲ್ಲಿದ್ದುಕೊಂಡೇ ಪ್ರೇಮದಂಚಿಗೆ ಹಾತೊರೆಯುತ್ತಾನೆ.

    ಆಘಾತಕಾರಿ ಸುದ್ದಿಯೊಂದು ತಿಳಿಯುತ್ತದೆ

    ಆಘಾತಕಾರಿ ಸುದ್ದಿಯೊಂದು ತಿಳಿಯುತ್ತದೆ

    ಸಾವಂತ ಸಾವನ್ನೇ ದೂರ ಸರಿಸುವ ಪ್ರಕ್ರಿಯೆಯಲ್ಲಿದ್ದ ಅವನಿಗೆ ಆಘಾತಕಾರಿ ಸುದ್ಧಿಯೊಂದು ತಿಳಿಯುತ್ತದೆ ಅದೇನೆಂದರೆ 'ಅವಳಿಗೂ ತನಗಿರುವ ಖಾಯಿಲೆಯೇ ಇದೆಯೆಂದು'. ಆ ಸುದ್ದಿ ಕೇಳಿದೊಡನೆ ಅವನಿಗೆ ತಾನು ನಿಂತಿದ್ದ ನೆಲ ಕುಸಿದ ಅನುಭವವಾಗುತ್ತದೆ, ಊಟಿಯ ತಂಪುಪರ್ವತ ಇವನ ಪಾಲಿಗೆ ಅಗ್ನಿಪರ್ವತವಾಗುತ್ತದೆ, ಪ್ರಕೃತಿಯ ಮಡಿಲು ಏಕಾಏಕಿ ಇವನಿಗೆ ವಿಕೃತಿಯ ಒಡಲೆನಿಸುತ್ತದೆ, ತನ್ನೊಳಗೇ ತಾನೇ ಬಿಕ್ಕಳಿಸುತ್ತಾನೆ. ಇವನೊಂದು ಕಡೆ ಅವಳನ್ನು ನೆನೆದು ಮರುಗುತ್ತಿದ್ದಾಗಲೇ, ಮತ್ತೊಂದು ಕಡೆ ಅವಳು ಯಾವುದಕ್ಕೂ ಹೆದರದೇ ಉತ್ಸಾಹದ ಚಿಲುಮೆಯಂತೆ ಪುಟಿಯುತ್ತಿರುತ್ತಾಳೆ, ಸಾವೇ ಸಮೀಪ ಬಂದ್ರೂ ಅವಳ ಜೀವನೋತ್ಸಾಹ ಕಂಡು ಹೊಟ್ಟೆ ಉರ್ಕೋಬೇಕು ಹಂಗ್ ಬದುಕನ್ನ ಸವೀತಿರ್ತಾಳೆ. ಸಾವಿಗೆದರದ ಅವಳು ನಾಯಕನಿಗೆ ಜೀವನ್ಮುಖಿಯಂತೆ ಕಾಣಿಸುತ್ತಾಳೆ.

    ಚಿತ್ರದ ನಿರ್ದೇಶಕರು ಅಂತ್ಯದಲ್ಲಿ .........

    ಚಿತ್ರದ ನಿರ್ದೇಶಕರು ಅಂತ್ಯದಲ್ಲಿ .........

    "ಇಬ್ಬರಿಗೂ ಜೀವ ಹೋಗೋ ಅಂತ ಖಾಯಿಲೆಯಿದೆ..... ಇಬ್ಬರಲ್ಲೂ ಜೀವಕ್ಕಿಂತಾ ಹೆಚ್ಚಾಗಿರೋ ಪ್ರೀತಿಯಿದೆ .........ಎಷ್ಟು ದಿನ ಬದುಕಿರ್ತಾರೋ ಗೊತ್ತಿಲ್ಲ ಆದರೆ ಬದುಕಿದ್ದಷ್ಟು ಕಾಲ ಪ್ರೀತಿಯಿಂದಿರ್ತಾರೆ " ಅಂತ ಒಂದು ಸಾಲು ಹಾಕಿ ಸಿನಿಮಾನ ಊಟಿಯ ತಂಗಾಳಿಯಂತೆ ಮುಗಿಸಿಬಿಡುತ್ತಾರೆ. ಮಣಿರತ್ನಂರ ಚಿತ್ರಕತೆ, ಪಿಸಿ ಶ್ರೀರಾಮ್ ರ ತಾಂತ್ರಿಕತೆ, ಇಳಯರಾಜಾರ ಮಾಂತ್ರಿಕತೆ "ಗೀತಾಂಜಲಿ" ಅನ್ನೊ ದೃಶ್ಯಕಾವ್ಯ ಅಷ್ಟು ಅತ್ಯದ್ಭುತವಾಗಿ ಮೂಡಿಬರೋದಕ್ಕೆ ಕಾರಣವಾಗಿತ್ತು .

    English summary
    Kannada Writter Maasthi Upparahalli shared about interesting story about manirathnam geethanjali film.
    Tuesday, June 8, 2021, 13:43
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X