Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ನಟಿ ರಂಜಿತಾ ಜೊತೆ ನಿತ್ಯಾನಂದ ಮದುವೆ
ಚಿತ್ರನಟಿ ರಂಜಿತಾರನ್ನು ಮದುವೆಯಾಗುತ್ತಿರುವುದಾಗಿ ಸ್ವಾಮಿ ನಿತ್ಯಾನಂದ ತಮ್ಮ ಅಂತರ್ಜಾಲ ತಾಣದಲ್ಲಿ ಬಹಿರಂಗಪಡಿಸಿದ್ದಾನೆ. ಈ ಮೂಲಕ ಸ್ವಾಮಿ ನಿತ್ಯಾನಂದನ ರಾಸಲೀಲೆ ಪ್ರಕರಣ ಅಚ್ಚರಿ ಬೆಳವಣಿಗೆಗೆ ಕಾರಣವಾಗಿದೆ. ಆದರೆ ಕೆಲವು ಮೂಲಗಳ ಪ್ರಕಾರ ಸ್ವಾಮಿ ನಿತ್ಯಾನಂದ ಈಗಾಗಲೆ ರಂಜಿತಾರನ್ನು ಮದುವೆಯಾಗಿದ್ದಾನೆ ಎಂಬ ಸುದ್ದಿಯೂ ಇದೆ.
ರಾಸಲೀಲೆ ವಿಡಿಯೋ ಬಯಲಾಗುತ್ತಿದ್ದಂತೆ ಸ್ವಾಮಿ ನಿತ್ಯಾನಂದ ತಲೆಮರೆಸಿಕೊಂಡಿದ್ದ. ಬಳಿಕ ಅಂತರ್ಜಾಲದಲ್ಲಿ ಪ್ರತ್ಯಕ್ಷನಾದ ನಿತ್ಯಾನಂದ ಆಶ್ರಮದ ಆಸ್ತಿ ಕಬಳಿಸಲು ನಡೆಸಿದ ಹುನ್ನಾರ ಇದು ಎಂದು ದೂರಿದ. ಬರುಬರುತ್ತಾ ವಿಡಿಯೋದಲ್ಲಿ ತಮ್ಮ ಜೊತೆ ಇದ್ದದ್ದು ನಟಿ ರಂಜಿತಾ ಎಂದು ಸ್ಪಷ್ಟಪಡಿಸಿದರು. ಈ ಮಧ್ಯೆ ಚಿತ್ರನಟಿ ರಂಜಿತಾ ಸಹ ಕಾಣೆಯಾಗಿದ್ದರು. ಕಡೆಗೂ ನಿತ್ಯಾನಂದ ಮಾಧ್ಯಮಗಳ ಮುಂದೆ ಹಾಜರಾಗಲೇ ಇಲ್ಲ. ಅಜ್ಞಾತ ಸ್ಥಳಗಳಿಂದ ಸಂದರ್ಶನಗಳನ್ನು ನೀಡಲು ಮುಂದಾದ.
ಸ್ವಾಮಿ ನಿತ್ಯಾನಂದ ವಿರುದ್ಧ ಬಿಡದಿ ಮತ್ತು ಚೆನ್ನೈ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾದವು. ದಾಖಲಾಗಿರುವ ಎಫ್ಐಆರ್ ಗಳನ್ನು ರದ್ದುಪಡಿಸುವಂತೆ ನಿತ್ಯಾನಂದ ಕರ್ನಾಟಕ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದ. ನನ್ನ ವಿರುದ್ಧ ಯಾರೂ ದೂರು ಕೊಟ್ಟಿಲ್ಲ. ಪೊಲೀಸರು ಸುಳ್ಳು ಕೇಸ್ ಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ನಿತ್ಯಾನಂದ ರಿಟ್ ಅರ್ಜಿಯಲ್ಲಿ ತಿಳಿಸಿದ್ದ. ಕರ್ನಾಟಕ ಹೈಕೋರ್ಟ್ ರಿಟ್ ಅರ್ಜಿಯನ್ನು ರದ್ದು ಮಾಡುವ ಮೂಲಕ ನಿತ್ಯಾನಂದನ ಮುಖಕ್ಕೆ ಮಂಗಳಾರತಿ ಮಾಡಿತ್ತು.
ಈ ಎಲ್ಲಾ ಬೆಳವಣಿಗೆಗಳ ನಂತರ ಸ್ವಾಮಿ ನಿತ್ಯಾನಂದ ಇದೀಗ ಹೊಸ ನಿರ್ಣಯಕ್ಕೆ ಬಂದಿದ್ದು ರಂಜಿತಾರನ್ನು ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾನೆ. ಕೊಂದ ಪಾಪ ತಿಂದು ಪರಿಹಾರ ಎಂಬಂತೆ ರಂಜಿತಾರನ್ನು ಮದುವೆಯಾಗುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಸ್ವಾಮಿ ನಿತ್ಯಾನಂದ ಮುಂದಾಗಿದ್ದಾನೆ ಎಂಬ ಮಾತುಗಳು ಕೇಳಿಬಂದಿವೆ.
ಸದ್ಯಕ್ಕೆ ಆಧ್ಯಾತ್ಮಿಕದ ಕಡೆಗೆ ಹೆಚ್ಚಿನ ಒಲವು ತೋರಲು ನಿರ್ಧರಿಸಿದ್ದು ಹಿರಿಯ ಆಚಾರ್ಯರ ಸಮ್ಮತಿಯಂತೆ ತಮ್ಮ ವಿಶ್ವ ಪ್ರಸಿದ್ಧ ಧ್ಯಾನಪೀಠದ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ನಿತ್ಯಾನಂದ ಘೋಷಿಸಿದ್ದ. ಇದೀಗ ಸಂನ್ಯಾಸತ್ವದಿಂದ ಗೃಹಸ್ಥಾಶ್ರಮಕ್ಕೆ ನಿತ್ಯಾನಂದ ಪದಾರ್ಪಣೆ ಮಾಡುತ್ತಿದ್ದಾನೆ. ಜನರನ್ನು ನಿತ್ಯಾನಂದ ಮತ್ತೊಮ್ಮೆ ಫೂಲ್ ಮಾಡುವ ಹೊಸ ತಂತ್ರವಿರಬಹುದೆ?