Don't Miss!
- Sports ಟಿ20 ವಿಶ್ವಕಪ್ಗೆ ಭಾರತ ತಂಡದಲ್ಲಿ ಕೆಎಲ್ ರಾಹುಲ್ಗೆ ಸ್ಥಾನ?; ರಾಬಿನ್ ಉತ್ತಪ್ಪ ಹೇಳಿದ್ದೇನು?
- News karnataka Rain: ಬೆಂಗಳೂರಿನಲ್ಲಿ ಏ.23ರವರೆಗೆ ಮಳೆ- ಬೆಳಗಾವಿ ಮಂದಿಗೆ ಕುಂದಾ ಕೊಟ್ಟ ವರುಣ ಧಾರವಾಡ ಮಂದಿಗಿಂದು ಪೇಡಾ ಕೊಡ್ತಾನಾ?
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Automobiles Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- Finance ಸಂಸ್ಥೆಯ ಎಲ್ಲ 30,000 ಉದ್ಯೋಗಿಗಳಿಗೆ ವರ್ಕ್ ಫಮ್ ಹೋಂ ನೀಡಿದ ಟೆಕ್ ಕಂಪೆನಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರ ನಟಿ ರಂಜಿತಾ ಜೊತೆ ನಿತ್ಯಾನಂದ ಮದುವೆ
ಚಿತ್ರನಟಿ ರಂಜಿತಾರನ್ನು ಮದುವೆಯಾಗುತ್ತಿರುವುದಾಗಿ ಸ್ವಾಮಿ ನಿತ್ಯಾನಂದ ತಮ್ಮ ಅಂತರ್ಜಾಲ ತಾಣದಲ್ಲಿ ಬಹಿರಂಗಪಡಿಸಿದ್ದಾನೆ. ಈ ಮೂಲಕ ಸ್ವಾಮಿ ನಿತ್ಯಾನಂದನ ರಾಸಲೀಲೆ ಪ್ರಕರಣ ಅಚ್ಚರಿ ಬೆಳವಣಿಗೆಗೆ ಕಾರಣವಾಗಿದೆ. ಆದರೆ ಕೆಲವು ಮೂಲಗಳ ಪ್ರಕಾರ ಸ್ವಾಮಿ ನಿತ್ಯಾನಂದ ಈಗಾಗಲೆ ರಂಜಿತಾರನ್ನು ಮದುವೆಯಾಗಿದ್ದಾನೆ ಎಂಬ ಸುದ್ದಿಯೂ ಇದೆ.
ರಾಸಲೀಲೆ ವಿಡಿಯೋ ಬಯಲಾಗುತ್ತಿದ್ದಂತೆ ಸ್ವಾಮಿ ನಿತ್ಯಾನಂದ ತಲೆಮರೆಸಿಕೊಂಡಿದ್ದ. ಬಳಿಕ ಅಂತರ್ಜಾಲದಲ್ಲಿ ಪ್ರತ್ಯಕ್ಷನಾದ ನಿತ್ಯಾನಂದ ಆಶ್ರಮದ ಆಸ್ತಿ ಕಬಳಿಸಲು ನಡೆಸಿದ ಹುನ್ನಾರ ಇದು ಎಂದು ದೂರಿದ. ಬರುಬರುತ್ತಾ ವಿಡಿಯೋದಲ್ಲಿ ತಮ್ಮ ಜೊತೆ ಇದ್ದದ್ದು ನಟಿ ರಂಜಿತಾ ಎಂದು ಸ್ಪಷ್ಟಪಡಿಸಿದರು. ಈ ಮಧ್ಯೆ ಚಿತ್ರನಟಿ ರಂಜಿತಾ ಸಹ ಕಾಣೆಯಾಗಿದ್ದರು. ಕಡೆಗೂ ನಿತ್ಯಾನಂದ ಮಾಧ್ಯಮಗಳ ಮುಂದೆ ಹಾಜರಾಗಲೇ ಇಲ್ಲ. ಅಜ್ಞಾತ ಸ್ಥಳಗಳಿಂದ ಸಂದರ್ಶನಗಳನ್ನು ನೀಡಲು ಮುಂದಾದ.
ಸ್ವಾಮಿ ನಿತ್ಯಾನಂದ ವಿರುದ್ಧ ಬಿಡದಿ ಮತ್ತು ಚೆನ್ನೈ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ದಾಖಲಾದವು. ದಾಖಲಾಗಿರುವ ಎಫ್ಐಆರ್ ಗಳನ್ನು ರದ್ದುಪಡಿಸುವಂತೆ ನಿತ್ಯಾನಂದ ಕರ್ನಾಟಕ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದ. ನನ್ನ ವಿರುದ್ಧ ಯಾರೂ ದೂರು ಕೊಟ್ಟಿಲ್ಲ. ಪೊಲೀಸರು ಸುಳ್ಳು ಕೇಸ್ ಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ನಿತ್ಯಾನಂದ ರಿಟ್ ಅರ್ಜಿಯಲ್ಲಿ ತಿಳಿಸಿದ್ದ. ಕರ್ನಾಟಕ ಹೈಕೋರ್ಟ್ ರಿಟ್ ಅರ್ಜಿಯನ್ನು ರದ್ದು ಮಾಡುವ ಮೂಲಕ ನಿತ್ಯಾನಂದನ ಮುಖಕ್ಕೆ ಮಂಗಳಾರತಿ ಮಾಡಿತ್ತು.
ಈ ಎಲ್ಲಾ ಬೆಳವಣಿಗೆಗಳ ನಂತರ ಸ್ವಾಮಿ ನಿತ್ಯಾನಂದ ಇದೀಗ ಹೊಸ ನಿರ್ಣಯಕ್ಕೆ ಬಂದಿದ್ದು ರಂಜಿತಾರನ್ನು ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾನೆ. ಕೊಂದ ಪಾಪ ತಿಂದು ಪರಿಹಾರ ಎಂಬಂತೆ ರಂಜಿತಾರನ್ನು ಮದುವೆಯಾಗುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಸ್ವಾಮಿ ನಿತ್ಯಾನಂದ ಮುಂದಾಗಿದ್ದಾನೆ ಎಂಬ ಮಾತುಗಳು ಕೇಳಿಬಂದಿವೆ.
ಸದ್ಯಕ್ಕೆ ಆಧ್ಯಾತ್ಮಿಕದ ಕಡೆಗೆ ಹೆಚ್ಚಿನ ಒಲವು ತೋರಲು ನಿರ್ಧರಿಸಿದ್ದು ಹಿರಿಯ ಆಚಾರ್ಯರ ಸಮ್ಮತಿಯಂತೆ ತಮ್ಮ ವಿಶ್ವ ಪ್ರಸಿದ್ಧ ಧ್ಯಾನಪೀಠದ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ನಿತ್ಯಾನಂದ ಘೋಷಿಸಿದ್ದ. ಇದೀಗ ಸಂನ್ಯಾಸತ್ವದಿಂದ ಗೃಹಸ್ಥಾಶ್ರಮಕ್ಕೆ ನಿತ್ಯಾನಂದ ಪದಾರ್ಪಣೆ ಮಾಡುತ್ತಿದ್ದಾನೆ. ಜನರನ್ನು ನಿತ್ಯಾನಂದ ಮತ್ತೊಮ್ಮೆ ಫೂಲ್ ಮಾಡುವ ಹೊಸ ತಂತ್ರವಿರಬಹುದೆ?