Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರ್ ಐಪಿಎಸ್ ನಿರ್ಮಾಪಕನಿಗೆ ರು.40 ಲಕ್ಷ ಲಾಸು
'ಶಂಕರ್ ಐಪಿಎಸ್' ಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದ ಕಾರಣ ನಿರ್ಮಾಪಕರ ಕೆ ಮಂಜು ಅವರಿಗೆ ರು.40 ಲಕ್ಷ ನಷ್ಟವಾಗಿದೆ. ಕೋರ್ಟ್ ತಡೆಯಾಜ್ಞೆಯ ಕಾರಣ ಆಕ್ಷನ್ ಹೀರೋ ವಿಜಯ್ ಅಭಿನಯದ ಶಂಕರ್ ಐಪಿಎಸ್ ಮೂರು ದಿನ 60 ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿಲ್ಲ. ಈ ಮೂರು ದಿನದಲ್ಲಿ ರು.40 ಲಕ್ಷ ಲುಕ್ಸಾನಾಗಿದೆ ಎನ್ನಲಾಗಿದೆ.
ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಮೊದಲ ವಾರದ ಬಾಕ್ಸಾಫೀಸ್ ರಿಪೋರ್ಟ್ ಸಹ ಚೆನ್ನಾಗಿತ್ತು ಎಂಬ ಮಾತುಗಲು ಕೇಳಿಬಂದಿವೆ. ಈ ಹಿಂದಿನ ಚಿತ್ರಗಳಲ್ಲಿ ಕಳೆದುಕೊಂಡಿದ್ದ ದುಡ್ಡಿನಲ್ಲಿ ಅಷ್ಟೋ ಇಷ್ಟೋ 'ಶಂಕರ್ ಐಪಿಎಸ್' ಮಂಜುಗೆ ತಂದುಕೊಡುವುದರಲ್ಲಿತ್ತು, ಅಷ್ಟರಲ್ಲಿ ಕೋರ್ಟ್ ನಿರ್ಬಂಧ ಹೇರಿತ್ತು.
ಶಂಕರ್ ಐಪಿಎಸ್ ಚಿತ್ರದಲ್ಲಿ ವಕೀಲರು ಹಾಗೂ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅವಹೇಳನಕಾರಿ ಸಂಭಾಷಣೆಗಳಿವೆ. ವಕೀಲರನ್ನು ದಲ್ಲಾಳಿಗಳು, ಬ್ರೋಕರ್ ಗಳು ಹಾಗೂ ನ್ಯಾಯಾಲಗಳನ್ನು ಮಾರುಕಟ್ಟೆಗಳು ಎಂದು ಅಗೌರವಯುತವಾಗಿ ಮಾತನಾಡಲಾಗಿದೆ ಎಂದು ಆರೋಪಿಸಿ ವಕೀಲರ ಸಂಘ ನ್ಯಾಯಾಲಯದಲ್ಲಿ ದಾವಾ ಹೂಡಲಾಗಿತ್ತು.
ಬಳಿಕ ಚಿತ್ರದ ನಿರ್ದೇಶಕ ಎಂ ಎಸ್ ರಮೇಶ್ ಮತ್ತು ನಿರ್ಮಾಪಕ ಕೆ ಮಂಜು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಕ್ಷಮೆಯಾಚಿಸುವ ಮೂಲಕ ವಿವಾದಕ್ಕೆ ತೆರೆಬಿದ್ದಿದೆ. ಚಿತ್ರದಲ್ಲಿನ ಆಕ್ಷೇಪಾರ್ಹ ಸಂಭಾಷಣೆಯನ್ನು ಕೈಬಿಡುವುದಾಗಿ ನಿರ್ಮಾಪಕರು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದರಿಂದ ಚಿತ್ರ ಪ್ರದರ್ಶನಕ್ಕೆ ಅನುಮತಿ ಕೊಡಲಾಗಿದೆ.