Don't Miss!
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಬಿಕ್ಕಟ್ಟಿನಲ್ಲಿ ‘ಕುಮಾರ ಸಂಭವ’
ಬೆಂಗಳೂರು: ಕರ್ನಾಟಕದಲ್ಲಿ ಪರಭಾಷಾ ಚಿತ್ರಗಳ ಪ್ರದರ್ಶನದ ಬಗೆಗೆ ಚಿತ್ರಮಂದಿರಗಳ ಮಾಲೀಕರು ಹಾಗೂ ನಿರ್ಮಾಪರ ಸಂಘದ ನಡುವಿನ ಶೀತಲ ಸಮರ ತೀವ್ರ ಸೆಣಸಾಟದ ಹಂತವನ್ನು ತಲುಪಿದೆ. ಕರ್ನಾಟಕ ಸಿನಿಮಾ ಚಿತ್ರಮಂದಿರಗಳ ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಎಚ್.ಡಿ.ಕುಮಾರಸ್ವಾಮಿ ಆಯ್ಕೆಗೊಂಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಚಿತ್ರಮಂದಿರಗಳ ಮುಷ್ಕರ ಕುತೂಹಲ ಕೆರಳಿಸಿದೆ.
ರಾಜ್ಯದಲ್ಲಿ ಏಳುವಾರಗಳ ನಂತರ ಪರಭಾಷಾ ಚಿತ್ರಗಳನ್ನು ಬಿಡುಗಡೆಗೊಳಿಸುವ ಸರಕಾರದ ಧೋರಣೆ ವಿರೋಧಿಸಿ ನಡೆಸಲಾಗುತ್ತಿರುವ ಪ್ರತಿಭಟನೆ ಮುಂದುವರೆಯಲಿದೆ. ಕನ್ನಡ ಭಾಷೆಯ ಮೇಲೆ ಯಾರೊಬ್ಬರ ಏಕಸ್ವಾಮ್ಯ ಸಲ್ಲದು. ಬೇಡಿಕೆಗೆ ಸರಕಾರ ಸ್ಪಂದಿಸುವವರೆಗೆ ಅನಿರ್ದಿಷ್ಟ ಕಾಲ ಮುಷ್ಕರವನ್ನು ಮುಂದುವರೆಸುವುದಾಗಿ ಸಂಘದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮುಷ್ಕರದಿಂದ ಕನ್ನಡ ಚಿತ್ರಗಳಿಗೆ ಲಾಟರಿ
ಚಿತ್ರಮಾಲೀಕರ ಮುಷ್ಕರದಿಂದ ಕನ್ನಡ ಚಿತ್ರಗಳು ಯಶಸ್ವಿಯಾಗಿ ಪ್ರದರ್ಶಿತವಾಗುತ್ತಿವೆ. ಬೆಂಗಳೂರಿನಲ್ಲಿ 115 ಚಿತ್ರಮಂದಿರಗಳಿದ್ದು, 35 ಚಿತ್ರಮಂದಿರಗಳಲ್ಲಿ ಖಾಯಂ ಆಗಿ ಪರಭಾಷಾ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.
ಮುಷ್ಕರದ ಪರಿಣಾಮ ಕಳೆದ ಎರಡು ದಿನಗಳಿಂದ 50ಕ್ಕೂ ಹೆಚ್ಚು ಚಿತ್ರಮಂದಿರಗಳು ಪ್ರದರ್ಶನವನ್ನು ರದ್ದು ಮಾಡಿವೆ.
(ಇನ್ಫೋವಾರ್ತೆ)
ಮುಖಪುಟ / ಸ್ಯಾಂಡಲ್ವುಡ್