Don't Miss!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಕ್ಕಟ್ಟು ಮುಂದುವರಿಕೆ; ಈವಾರವೂ ಬೆಂಗಳೂರಲ್ಲಿ ಹೊಸ ಚಿತ್ರ ಇಲ್ಲ !
ಬೆಂಗಳೂರು : ಹೊಸ ಕನ್ನಡೇತರ ಚಿತ್ರಗಳನ್ನು ಬೆಂಗಳೂರಿನಲ್ಲಿ ಅ.1ರಂದು ತೆರೆ ಕಾಣಿಸಲು ಪಟ್ಟುಹಿಡಿದಿದ್ದ ಪ್ರದರ್ಶಕರು ತಮ್ಮ ಪ್ರಯತ್ನದಲ್ಲಿ ಹೆಚ್ಚೂಕಡಿಮೆ ವಿಫಲರಾಗಿದ್ದಾರೆ.
ಉದ್ದೇಶಿತ ಹಿಂದಿ ಚಿತ್ರಗಳು ಅ.1ರ ಶುಕ್ರವಾರ ತೆರೆ ಕಾಣಲಿಲ್ಲ . ಆದರೆ ಉತ್ತರ ಕರ್ನಾಟಕದ ಕೆಲವೆಡೆ ಹೊಸ ಕನ್ನಡೇತರ ಚಿತ್ರಗಳು ಬಿಡುಗಡೆಯಾಗಿರುವ ವರದಿಗಳು ಬರುತ್ತಿವೆ. ಈ ನಡುವೆ ಶುಕ್ರವಾರ ನಡೆದ ಕನ್ನಡ ಚಿತ್ರೋದ್ಯಮದ ಸಭೆ ಯಾವುದೇ ನಿರ್ಣಯವಿಲ್ಲದೆ ಕೊನೆಗೊಳ್ಳುವುದರೊಂದಿಗೆ ಬಿಕ್ಕಟ್ಟು ಮುಂದಿನ ವಾರಕ್ಕೂ ಮುಂದುವರೆಯಿತು.
ನಟ-ಸಂಸದ ಅಂಬರೀಷ್ ಅಧ್ಯಕ್ಷತೆಯಲ್ಲಿ ನಡೆದ ಚಿತ್ರೋದ್ಯಮದ ಸಭೆಯಲ್ಲಿ ಪಾರ್ವತಮ್ಮ ರಾಜ್ಕುಮಾರ್, ರಾಘವೇಂದ್ರ, ಜಗ್ಗೇಶ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಚ್.ಡಿ.ಗಂಗರಾಜು, ಎಸ್.ವಿ.ರಾಜೇಂದ್ರಸಿಂಗ್ಬಾಬು, ಸಾ.ರಾ.ಗೋವಿಂದು ಮುಂತಾದವರು ಭಾಗವಹಿಸಿದ್ದರು. ಆದರೆ, ಪರಭಾಷಾ ಚಿತ್ರಗಳ ಪರವಾಗಿ ವಕಾಲತ್ತು ವಹಿಸುತ್ತಿರುವ ಓದುಗೌಡರ್ ಸಭೆಗೆ ಗೈರುಹಾಜರಾಗಿದ್ದರು.
ಇನ್ನು ಒಂದೆರಡು ದಿನಗಳಲ್ಲಿ ಚಿತ್ರೋದ್ಯಮದ ಬಿಕ್ಕಟ್ಟು ಬಗೆಹರಿಯುವ ಕುರಿತು ವಾಣಿಜ್ಯ ಮಂಡಳಿ ಅಧ್ಯಕ್ಷ ಗಂಗರಾಜು ಆಶಾವಾದ ವ್ಯಕ್ತಪಡಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್