Don't Miss!
- News karnataka Rain: ಇಂದಿನಿಂದ ರಾಜ್ಯದಲ್ಲಿ ಜೋರು ಮಳೆ: ಬೆಂಗಳೂರಿನಲ್ಲಿ ಕೆಲವೆಡೆ ಮಾತ್ರ ವರಣ ಕೃಪೆ ತೋರುವ ಸಾಧ್ಯತೆ- ಐಎಂಡಿ ಅಲರ್ಟ್
- Finance ಮೊಮೊಸ್ ಮಾರುವ ಶಾಪ್ನಿಂದ ಜಾಬ್ ಆಫರ್ ಸಖತ್ ವೈರಲ್! ವೇತನವೆಷ್ಟು ಗೊತ್ತಾ?
- Lifestyle ಬೆಂಗಳೂರಲ್ಲಿ ಮರ ತಬ್ಬಿಕೊಳ್ಳಲು ₹1,500 ಶುಲ್ಕ..! ಇದೇನಿದು ಕಬ್ಬನ್ ಪಾರ್ಕ್ ನಡಿಗೆ..?
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
‘ಮೌನಿ’ : ಅನಂತಮೂರ್ತಿ ಪ್ರಶಸ್ತಿ ನಿರಾಕರಣೆ
‘ಮೌನಿ’ ಚಿತ್ರದ ಕತೆಗಾಗಿ ರಾಜ್ಯ ಸರಕಾರ ಪ್ರಕಟಸಿರುವ ಅತ್ಯುತ್ತಮ ಕಥಾ ಲೇಖಕ ಪ್ರಶಸ್ತಿಯನ್ನು ಸ್ವೀಕರಿಸಲು ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ನಿರಾಕರಿಸಿದ್ದಾರೆ.
ಪ್ರಸಕ್ತ ಸಾಲಿನ ರಾಜ್ಯ ಪ್ರಶಸ್ತಿಗಳ ಬಗೆಗೆ ಅಸಮಾಧಾನದ ಗುಸುಗುಸು ವ್ಯಾಪಕವಾಗುತ್ತಿದ್ದು , ಅನಂತಮೂರ್ತಿಯವರ ಪ್ರಶಸ್ತಿ ನಿರಾಕರಣೆಯಿಂದಾಗಿ ಈ ಅಸಮಾಧಾನ ಬಹಿರಂಗಗೊಂಡಂತಾಗಿದೆ.
ರಾಜ್ಯ ಸರ್ಕಾರ ಪ್ರಕಟಿಸಿರುವ ಪ್ರಶಸ್ತಿ ನನ್ನ ಕತೆ ಓದಿ ಕೊಡುವ ಪ್ರಶಸ್ತಿ ಅಲ್ಲ. ಬದಲಿಗೆ ನೋಡಿ ಕೊಡುವ ಪ್ರಶಸ್ತಿ. ಈ ಪ್ರಶಸ್ತಿಯನ್ನು ಸ್ವೀಕರಿಸಲು ಸಂಕೋಚವಾಗುತ್ತದೆ. ‘ಮೌನಿ’ ಕಥೆಯನ್ನು 60ರ ದಶಕದಲ್ಲೇ ಬರೆದೆ. ಈಗ ಆ ಕಥೆಯನ್ನು ಸಿನಿಮಾ ರೂಪದಲ್ಲಿ ಗ್ರಹಿಸಿ ನೀಡುವ ಪ್ರಶಸ್ತಿ ತಮಗೆ ಬೇಡ ಎಂದು ಸೋಮವಾರ ಕೇರಳದಿಂದ ಬೆಂಗಳೂರಿಗೆ ಆಗಮಿಸಿದ ಅನಂತಮೂರ್ತಿ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದರು.
‘ಮೌನಿ’ ಚಿತ್ರಕ್ಕೆ ಇತರ ಯಾವುದೇ ಪ್ರಶಸ್ತಿ ಬರದಿರುವ ಕುರಿತು ಅನಂತಮೂರ್ತಿ ಬೇಸರ ವ್ಯಕ್ತಪಡಿಸಿದರು. ಪ್ರತಿಯಾಂದೂ ಕಮರ್ಷಿಯಲ್ ಆಗುತ್ತಿರುವ ಸಂದರ್ಭದಲ್ಲಿ ಯುವಪ್ರತಿಭೆಗಳು ಸೇರಿ ನಿರ್ಮಿಸಿರುವ ಕಲಾತ್ಮಕ ಚಿತ್ರವನ್ನು ಸರ್ಕಾರ ಪ್ರೋತ್ಸಾಹಿಸಬೇಕಾಗಿತ್ತು ಎಂದು ಅನಂತಮೂರ್ತಿ ಅಭಿಪ್ರಾಯಪಟ್ಟರು.
(ಇನ್ಫೋ ವಾರ್ತೆ)
ಪ್ರಶಸ್ತಿಗಳ ವಿವರ
ಸುದೀಪ್-ಭಾವನಾ ಉತ್ತಮ ನಟ-ನಟಿ
ಮುಖಪುಟ / ಸ್ಯಾಂಡಲ್ವುಡ್