Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಮ್ಯಾ 'ಕನಸು' ವಿವಾದಕ್ಕೆ ಕಾರಣಗಳೇ ಬೇರೆ
'ನಾನು ನನ್ನ ಕನಸು' ಚಿತ್ರದಿಂದ ನಟಿ ರಮ್ಯಾ ಹೊರಬಿದ್ದಿದ್ದು ಸಂಭಾವನೆ ವಿಚಾರಕ್ಕೆ ಅಲ್ಲ ಎಂಬ ಸುದ್ದಿ ಗಾಂಧಿನಗರದಲ್ಲಿ ಬರಸಿಡಿಲಿನಂತೆ ಎರಗಿದೆ. ಹಾಗಿದ್ದರೆ ರಮ್ಯಾ ಹೊರಬರಲು ಕಾರಣ ಏನು? ಎಂಬ ಪ್ರಶ್ನೆಗೆ 'ನಾನು ನನ್ನ ಕನಸು' ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಬಿ ಸುರೇಶ್ ಹೇಳುವುದೇ ಬೇರೆ.
ರಮ್ಯಾ ಮೊದಲು ಮಾತನಾಡಿದ ಸಂಭಾವನೆಯೇ ಬೇರೆ ಆಮೇಲೆ ಕೇಳಿದ್ದೆ ಬೇರೆ. ಆಕೆಯ ಮೂಲ ಸಂಭಾವನೆಗಿಂತ ನಾಲ್ಕು ಪಟ್ಟು ಹೆಚ್ಚು ಕೇಳಿದ್ದಾರೆ. ಸಂಭಾವನೆ ವಿಚಾರಕ್ಕಿಂತ ನನಗೆ ಬೇಸರ ತರಿಸಿದ್ದು ರಮ್ಯಾ ಅವರ ಧೋರಣೆ. ಆಕೆ ಈ ಮೊದಲು ಒಪ್ಪಿಕೊಂಡಿದ್ದ ಸಂಭಾವನೆಗೂ ಚಿತ್ರೀಕರಣ ಸಂದರ್ಭದಲ್ಲಿ ಬೇಡಿಕೆ ಇಟ್ಟ ಸಂಭಾವನೆಗೂ ಅಜಗಜಾಂತರ ವ್ಯತ್ಯಾಸವಿತ್ತು ಎನ್ನುತ್ತಾರೆ ಬಿ ಸುರೇಶ್.
ನಾಲ್ಕು ಪಟ್ಟು ಹೆಚ್ಚು ಸಂಭಾವನೆ ಕೇಳಿದರೆ ಒಪ್ಪಲು ಸಾಧ್ಯವೆ? ಮೊದಲೆಲ್ಲಾ ಉತ್ತಮ ಚಿತ್ರ, ಬ್ಯೂಟಿಫುಲ್ ಕಾನ್ಸೆಪ್ಟ್, ಚಿತ್ರವನ್ನು ಮಿಸ್ ಮಾಡಿಕೊಳ್ಳುವಂತೆಯೇ ಇಲ್ಲ ಎಂದು ಓಡಾಡಿಕೊಂಡಿದ್ದ ರಮ್ಯಾ ಬರಬರುತ್ತಾ ಚಿತ್ರವನ್ನು ನೋಡುವ ಧೋರಣೆಯೇ ಬದಲಾಯಿತು. ಆರಂಭದಲ್ಲೇ ಹೀಗಾದರೆ ಮುಂದೇನು ಎಂಬ ಚಿಂತೆ ನಮಗೆ ಶುರುವಾಯಿತು ಎಂದು ವಿವರ ನೀಡಿದ್ದಾರೆ ಸುರೇಶ್.
ಒಳ್ಳೆಯ ಸಿನಿಮಾ ಮಾಡಲು ಹೊರಟಿದ್ದೇವೆ. ಅದಕ್ಕೆ ಬೇಕಾಗಿರುವುದು ಉತ್ತಮ ಕಲಾವಿದರ ತಂಡ. ರಮ್ಯಾ ಇದಕ್ಕೆ ಹೊರತಾಗಿದ್ದರು. ಸಂಭಾವನೆ ವಿಚಾರ ಇಲ್ಲಿ ಗೌಣ. ಆರಂಭದಲ್ಲೇ ಹೀಗಾರೆ ಮುಂದೆ ದೊಡ್ಡ ಸಮಸ್ಯೆಗಳು ಸೃಷ್ಟಿಯಾಗಬಹುದು ಎಂಬ ಕಾರಣಕ್ಕೆ ಆಕೆಯನ್ನು ಕೈಬಿಟ್ಟಿದ್ದೇವೆ ಎನ್ನುತ್ತಾರೆ ಸುರೇಶ್. ಒಟ್ಟಿನಲ್ಲಿ ರಮ್ಯಾ ಕಿರುಕ್ಕುಗಳು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿರುವು ಮೇಲ್ನೊಟಕ್ಕೆ ಗೋಚರಿಸುತ್ತಿವೆ.
(ದಟ್ಸ್ ಕನ್ನಡ ಚಿತ್ರವಾರ್ತೆ)