Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಗಾಭರಣರಿಗೆ ನಿರ್ದೇಶಕರ ತಿರುಗುಬಾಣ
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಟಿ ಎಸ್ ನಾಗಾಭರಣ ಕೊಟ್ಟಂತಹ ವ್ಯತಿರಿಕ್ತ ಹೇಳಿಕೆ ಅವರನ್ನು ತಿರುಗುಬಾಣದಂತೆ ಬೆನ್ನಟ್ಟಿದ ಘಟನೆ ಸೋಮವಾರ ನಡೆದಿದೆ. ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಚಲನಚಿತ್ರ ನಿರ್ದೇಶಕರ ಸಂಘದ ಸದಸ್ಯರು ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಪ್ರತಿಭಟಿಸಿದ್ದಾರೆ.
ಶಿವಮೊಗ್ಗದಲ್ಲಿ ಏಪ್ರಿಲ್ ನಲ್ಲಿ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ವಿತರಣಾ ಸಮಾರಂಭಕ್ಕೆ ''ಆಹ್ವಾನ ಪತ್ರಿಕೆಗಳನ್ನು ನಿರ್ದೇಶಕರಿಗೆ ಕಳುಹಿಸುವುದು ಬೇಡ; ಕಲಾವಿದರಿಗೆ ಮಾತ್ರ ಕಳುಹಿಸಿದರೆ ಸಾಕು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹೇಳಿದ್ದಾರೆ'' ಎಂದು ನಾಗಾಭರಣ ಹೇಳಿದ್ದರು. ಈ ಹೇಳಿಕೆ ಚಲನಚಿತ್ರ ನಿರ್ದೇಶಕರ ಪಿತ್ತ ಕೆರಳಿಸಿತ್ತು.
ಜಯಮಾಲಾ ಅವರ ಹೇಳಿಕೆಯನ್ನು ಖಚಿತಪಡಿಸಿಕೊಳ್ಳಲು ನಾಗಾಭರಣ ಅವರನ್ನು ಚಲನಚಿತ್ರ ವಾಣಿಜ್ಯ ಮಂಡಳಿಗೆ ಕರೆಸಿದಾಗ, ಜಯಮಾಲಾ ಆ ಧಾಟಿಯಲ್ಲಿ ಹೇಳಿಲ್ಲ ಎಂದು ವ್ಯತಿರಿಕ್ತವಾಗಿ ಹೇಳಿಕೆ ನೀಡಿದ್ದರು. ನಾಗಾಭರಣ ಅವರ ವ್ಯತಿರಿಕ್ತ ಹೇಳಿಕೆಗಳಿಂದ ಬೇಸತ್ತ ನಿರ್ದೇಶಕರು ಪ್ರತಿಭಟನೆ ಮುಂದಾದರು.
ಪ್ರತಿಭಟನೆಯಲ್ಲಿ ನಿರ್ದೇಶಕರ ಸಂಘದ ಅಧ್ಯಕ್ಷ ಎಸ್ ವಿ ರಾಜೇಂದ್ರ ಸಿಂಗ್ ಬಾಬು, ನಿರ್ದೇಶಕರಾದ ಪ್ರೇಮ್, ಎಂ ಎಸ್ ರಮೇಶ್, ಎ ಎಂ ಆರ್ ರಮೇಶ್, ನಾಗೇಂದ್ರ ಪ್ರಸಾದ್, ನಾಗೇಂದ್ರ ಅರಸ್, ಮಹೇಶ್ ಮೊದಲಾದವರು ಪಾಲ್ಗೊಂಡಿದ್ದರು. ಅಕಾಡೆಮಿ ನಡೆಸುವ ಎಲ್ಲಾ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ನಿರ್ದೇಶಕರ ಸಂಘ ತಿಳಿಸಿದೆ.