Don't Miss!
- Automobiles ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಸಂತ್ ರಾಜೀನಾಮೆಗೆ ಕೆಎಫ್ ಸಿಸಿ ಸದಸ್ಯರ ಪಟ್ಟು
ಚಿತ್ರೋದ್ಯಮ ಅನಿರ್ದಿಷ್ಟಾವಧಿಯವರೆಗೆ ಬಂದ್ ಆದರೆ ಕಾರ್ಮಿಕರ ಪಾಡೇನು? ಸಾಲ ಮಾಡಿ ಚಿತ್ರ ನಿರ್ಮಾಣ ಮಾಡುವ ನಿರ್ಮಾಪಕರ ಪಾಡೇನು? ಏಕಾಎಕಿ ಅಧ್ಯಕ್ಷರು ಬಂದ್ ನಿರ್ಧಾರ ಪ್ರಕಟಿಸುವುದು ಸರಿಯಲ್ಲ. ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಬಸಂತ್ ಕುಮಾರ್ ಪಾಟೀಲ್ ಗೆ ನಿರ್ಮಾಪಕರ ಕಷ್ಟ ಸುಖದ ಬಗ್ಗೆ ಅರಿವಿಲ್ಲ. ಪಾಟೀಲರು ಅತ್ತ ಪೂರ್ಣ ಪ್ರಮಾಣದ ನಿರ್ಮಾಪಕರೂ ಅಲ್ಲ, ವಿತರಕರೂ ಅಲ್ಲ, ಹಂಚಿಕೆದಾರರೂ ಅಲ್ಲ. ಅವರಿಗೆ ನಿರ್ಮಾಪಕರ ತೊಂದರೆ ಅರ್ಥವಾಗುವುದಿಲ್ಲ ಅವರು ಈ ಕೂಡಲೇ ರಾಜೀನಾಮೆ ನೀಡಲಿ ಎಂದು ರಾಕ್ ಲೈನ್ ವೆಂಕಟೇಶ್ ಆಗ್ರಹಿಸಿದ್ದಾರೆ. ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಸ್ಥಾನಕ್ಕೆ ಪ್ರದರ್ಶಕರು, ವಿತರಕರು ಈಗಾಗಲೇ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ಪಾಟೀಲ್ ರಾಜೀನಾಮೆಗೆ ಒತ್ತಾಯಿಸಿ ದ್ವಾರಕೀಶ್, ಸಂದೇಶ್ ನಾಗರಾಜ್ ಕೂಡಾ ರಾಕ್ ಲೈನ್ ನಿಲುವನ್ನು ಬೆಂಬಲಿಸಿದ್ದಾರೆ. ಬೇರೆಯವರು ಏನಾದರೂ ಮಾಡಿಕೊಳ್ಳಲಿ ಕಲಾವಿದರ ಸಂಘ ಬಂದ್ ಗೆ ಬೆಂಬಲ ನೀಡುವುದಿಲ್ಲ ಎಂದು ಅಂಬರೀಷ್ ಕೂಡ ಹೇಳಿಕೆ ನೀಡಿದ್ದಾರೆ. ಎಸ್. ನಾರಾಯಣ್ ಕೂಡ ಡಬ್ಬಿಂಗ್ ವಿರೋಧಿಸಿ ಡಿಸೆಂಬರ್ 1ರಿಂದ ನಡೆಸಬೇಕೆಂದಿರುವ ಬಂದ್ ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7