Don't Miss!
- News Toilet Photo Viral: ಕಡಿಮೆ ಖರ್ಚಿನಲ್ಲಿ 'ಲೀಕೆಜ್ ಟ್ಯಾಂಕರ್'ನಿಂದ ಟಾಯ್ಲೆಟ್ ನಿರ್ಮಾಣ: ನೀವೂ ಟ್ರೈ ಮಾಡಿ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೂಲ್ ವಿವಾದ; ಗಣೇಶನಿಗೆ ಬೆಣ್ಣೆ, ಮಹೇಶನಿಗೆ ಸುಣ್ಣ
'ಕೂಲ್' ಚಿತ್ರದ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಬುಧವಾರ ವಿಚಾರಣೆ ನಡೆಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಗೋಲ್ಡನ್ ಸ್ಟಾರ್ ಗಣೇಶ್ ಅವರೆ 'ಕೂಲ್' ಚಿತ್ರವನ್ನು ನಿರ್ದೇಶಿಸುವಂತೆ ಸೂಚಿಸಿದೆ. ಹಾಗೆಯೇ ಚಿತ್ರದ ನಿರ್ದೇಶಕ ಮುಸ್ಸಂಜೆ ಮಹೇಶ್ ಗೆ ರು.1 ಲಕ್ಷ ಪರಿಹಾರ ನೀಡುವಂತೆ ಆಜ್ಞಾಪಿಸಿದೆ.
ಚಲನಚಿತ್ರ ವಾಣಿಜ್ಯ ಮಂಡಳಿಯ ನಿಲುವಿಗೆ ತಾವು ಬದ್ಧರಾಗಿರುವುದಾಗಿ ನಟ ಗಣೇಶ್ ಹಾಗೂ 'ಕೂಲ್' ಚಿತ್ರದ ನಿರ್ಮಾಪಕಿ ಶಿಲ್ಪಾ ಗಣೇಶ್ ತಿಳಿಸಿದ್ದಾರೆ. ಆದರೆ ಮುಸ್ಸಂಜೆ ಮಹೇಶ್ ಮಾತ್ರ ಅಪಸ್ವರ ಮಿಡಿದಿದ್ದು, ವಾಣಿಜ್ಯ ಮಂಡಳಿ ಗಣೇಶ್ ಪರ ನಿಲುವು ತಳೆದಿದೆ ಹಾಗೂ ಏಕಪಕ್ಷೀಯವಾಗಿ ವರ್ತಿಸಿದೆ ಎಂದು ದೂರಿದ್ದಾರೆ.
'ಕೂಲ್' ಚಿತ್ರದ ಚಿತ್ರೀಕರಣ ಕೇರಳದಲ್ಲಿ ನಡೆಯುತ್ತಿದ್ದ ವೇಳೆ ಛಾಯಾಗ್ರಾಹಕ ರತ್ನವೇಲು ಹಾಗೂ ಮುಸ್ಸಂಜೆ ಮಹೇಶ್ ನಡುವೆ ಭಿನ್ನಾಭಿಪ್ರಾಯ ತಲೆದೋರಿತ್ತು. ಈ ಘಟನೆ ಚಿತ್ರದ ನಿರ್ಮಾಪಕಿ ಶಿಲ್ಪಾ ಗಣೇಶ್ ರೊಂದಿಗೆ ವೈಮನಸ್ಯಕ್ಕೂ ಕಾರಣವಾಗಿತ್ತು. ಹಾಗಾಗಿ ಚಿತ್ರದ ನಿರ್ದೇಶಕ ಮಹೇಶ್ ಹೊರಬಿದ್ದಿದ್ದರು.
ಬಳಿಕ ಗಣೇಶ್ ಹಾಗೂ ಮಹೇಶ್ ಚಲನಚಿತ್ರ ವಾಣಿಜ್ಯ ಮಂಡಳಿ ಮೆಟ್ಟಿಲು ಹತ್ತಿದ್ದರು. ಇಬ್ಬರ ವಾದವನ್ನೂ ಆಲಿಸಿದ ಮಂಡಳಿ ಚಿತ್ರವನ್ನು ಗಣೇಶ್ ಅವರೇ ನಿರ್ದೇಶಿಸಬಹುದು ಎಂದು ಗ್ರೀನ್ ಸಿಗ್ನಲ್ ಕೊಟ್ಟಿದೆ. ಮಂಡಳಿಯ ಈ ನಿರ್ಧಾರಕ್ಕೆ ಮಹೇಶ್ ಚಕಾರವೆತ್ತಿದ್ದಾರೆ. ಶಿಲ್ಪಾ ಗಣೇಶ್ ತಮ್ಮನ್ನು ಅವಮಾನಿಸಿದ್ದಾರೆ ಎಂದೂ ಮಹೇಶ್ ನಿರ್ದೇಶಕರ ಸಂಘಕ್ಕೆ ದೂರು ನೀಡಿದ್ದಾರೆ.