Don't Miss!
- Technology ಇಂದು ಪೊಕೊ C61 ಫೋನಿನ ಫಸ್ಟ್ ಸೇಲ್!..ಬೆಲೆ, ಆಫರ್ ಮಾಹಿತಿ ಇಲ್ಲಿದೆ
- Lifestyle ಕೈಗೆ ಹಿಡಿದ ಬಣ್ಣ ತೆಗಿಯೋದು ತುಂಬಾ ಸಿಂಪಲ್..! ಇಂಥಾ ಪ್ರತಿಭೆ ನೀವೆಲ್ಲೂ ನೋಡಿರಲ್ಲ..!
- Automobiles Bajaj: ಯುವಕರ ಮನಗೆದ್ದಿರುವ ಪಲ್ಸರ್ ಬೈಕ್ಗಳಿವು, ಬೆಲೆ ರೂ.2 ಲಕ್ಷದೊಳಗೆ.. 50 ಕಿ.ಮೀಗಿಂತ ಹೆಚ್ಚಿನ ಮೈಲೇಜ್
- Finance ಬೆಂಗಳೂರಿನ ರಿಯಲ್ ಎಸ್ಟೇಟ್ ಸಂಸ್ಥೆ ಕಾಂಕಾರ್ಡ್ನಿಂದ 100 ಕೋಟಿಗೆ 4.5 ಎಕರೆ ಭೂಮಿ ಸ್ವಾಧೀನ
- News Bengaluru-Mysuru Expressway Toll fee: ಏಪ್ರಿಲ್ 1ರಿಂದ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳ.!-ಯಾವ್ಯಾವ ವಾಹನಗಳಿಗೆ ಎಷ್ಟು?
- Sports Hardik Pandya: ಸ್ವತಃ ಮುಂಬೈ ಇಂಡಿಯನ್ಸ್ ಫ್ಯಾನ್ಸ್ನಿಂದಲೂ ಹಾರ್ದಿಕ್ ಪಾಂಡ್ಯ ಟ್ರೋಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರನಟಿ ರಂಜಿತಾ ಆತ್ಮಹತ್ಯೆಗೆ ಯತ್ನ?
ಸ್ವಾಮಿ ನಿತ್ಯಾನಂದ ರಾಸಲೀಲೆ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ನಟಿ ರಂಜಿತಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಮಾರ್ಚ್ 2ರಂದು ಆಧ್ಯಾತ್ಮಿಕ ಗುರು ಸ್ವಾಮಿ ನಿತ್ಯಾನಂದ ರಾಸಲೀಲೆಯ ವಿಡಿಯೋವನ್ನು ಸನ್ ನ್ಯೂಸ್ ನ ಪ್ರಸಾರ ಮಾಡಿತ್ತು. ನಿತ್ಯಾನಂತ ರಾಸಲೀಲೆ ಪ್ರಕರಣ ಮಾಧ್ಯಮಗಳಲ್ಲಿ ಪ್ರಮುಖ ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ನಟಿ ರಂಜಿತಾ ಆತ್ಮಹತ್ಯೆಗೆ ಯತ್ನಿಸಿದ್ದಾಗಿ ತಿಳಿದುಬಂದಿದೆ.ಈಗಾಗಲೇ ವಿಚ್ಛೇದಿತ ಸೈನಿಕಾಧಿಕಾರಿಯೊಬ್ಬರನ್ನು ನಟಿ ರಂಜಿತಾ ಮದುವೆಯಾಗಿದ್ದಾರೆ.
ದಿನೇ ದಿನೇ ಸ್ವಾಮಿ ನಿತ್ಯಾನಂದ ರಾಸಲೀಲೆ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸ್ವಾಮಿ ನಿತ್ಯಾನಂದನನ್ನು ಬೆದರಿಸಲು ಸ್ವತಃ ರಂಜಿತಾಳೇ ಈ ರಾಸಲೀಲೆ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.ಆದರೆ ದುರದೃಷ್ಟ ಸಂಗತಿಯೆಂದರೆ ರಾಸಲೀಲೆ ವಿಡಿಯೋ ಮಾಧ್ಯಮಗಳ ಕೈಗೆ ಸಿಕ್ಕಿ ರಂಜಿತಾ ಪ್ಲಾನ್ ಎಲ್ಲಾ ಉಲ್ಟಾ ಆಗಿದೆ ಎನ್ನಲಾಗಿದೆ.
ಏತನ್ಮಧ್ಯೆ ಸ್ವಾಮಿ ನಿತ್ಯಾನಂದರ ವಕೀಲ ಎಂ ಶ್ರೀಧರ್ ಅವರು ಮಾತನಾಡುತ್ತಾ, ಸ್ವಾಮಿ ನಿತ್ಯಾನಂದರು ಎಲ್ಲೂ ತಲೆಮರೆಸಿಕೊಂಡು ಓಡಿಹೋಗಿಲ್ಲ. ಅವರು ಕುಂಭಮೇಳದಲ್ಲಿ ಭಾಗವಹಿಸುವ ಸಲುವಾಗಿ 4000 ಭಕ್ತಾದಿಗಳೊಂದಿಗೆ ವಾರಣಾಸಿಯಲ್ಲಿದ್ದಾರೆ. ಮಾರ್ಚ್ 18ರಂದು ಅವರು ಹಿಂತಿರುಗಲಿದ್ದಾರೆ ಎಂದು ತಿಳಿಸಿದ್ದಾರೆ.
ಸ್ವಾಮಿ ನಿತ್ಯಾನಂದ ರಾಸಲೀಲೆ ಪ್ರರಣದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಧರ್, ರಂಜಿತಾ ವೈವಾಹಿಕ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದ್ದ ಕಾರಣ ಆಕೆ ಮಾನಸಿಕವಾಗಿ ಖಿನ್ನರಾಗಿ ಆಶ್ರಮಕ್ಕೆ ಬಂದಿದ್ದರು. ಬಳಿಕ ಅವರು ನಿತ್ಯಾನಂದ ಅವರ ಪರಭಕ್ತೆಯಾಗಿ ಬದಲಾದರು. ರಾಸಲೀಲೆ ವಿಡಿಯೋ ನಕಲಿಯಾಗಿದ್ದು, ವಿಡಿಯೋದಲ್ಲಿ ಕಾಣಿಸುವ ಮಹಿಳೆ ಕುತ್ತಿಗೆ ಭಾಗವನ್ನು ಸಂಪೂರ್ಣವಾಗಿ ಮುಚ್ಚಿಕೊಂಡೇ ಕಾಣಿಸುವುದರ ಹಿಂದಿನ ರಹಸ್ಯವೇನು ಎಂದು ಅವರು ಪ್ರಶ್ನಿಸಿದ್ದಾರೆ.