Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಸಂತಕುಮಾರ್ ಪಾಟೀಲ್ ವಿರುದ್ಧ ಪ್ರತಿಭಟನೆ
ಮೇ.8ರಂದು ಪ್ರತಿಷ್ಠಿತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸದಸ್ಯರ ಓಲೈಕೆ, ಮನವೊಲಿಸುವ ಪ್ರಯತ್ನಗಳು ಜೋರಾಗಿ ನಡೆಯುತ್ತಿವೆ. ಬಸಂತಕುಮಾರ್ ಪಾಟೀಲ್ ಗೆ ಮತ ಹಾಕುವಂತೆ ಒಂದು ಗುಂಪು ಮಂಡಳಿಸದಸ್ಯರನ್ನು ಒತ್ತಾಯಿಸಿದ್ದನ್ನು ವಿರೋಧಿಸಿ ಮತ್ತೊಂದು ಸಸದ್ಯರ ಗುಂಪು ಶುಕ್ರವಾರ (ಮೇ.7) ಫಿಲ್ಮಂ ಚೇಂಬರ್ ಮುಂದೆ ಪ್ರತಿಭಟನೆ ನಡೆಸಿತು.
ಪ್ರತಿಭಟನಾಕಾರರು ಫಿಲ್ಮಂ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಬಸಂತಕುಮಾರ್ ಪಾಟೀಲ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಎಸ್ ಎಂ ಎಸ್ ಮೂಲಕ ಮತಹಾಕುವಂತೆ ಬೆದರಿಕೆಯೊಡ್ಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಸಂಬಂಧ ಬೆಂಗಳೂರಿನ ಕುಮಾರಪಾರ್ಕ್ ಬಳಿಯ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ಸಿನಿಮಾ ವಿತರಕ ಬಸಂತಕುಮಾರ್ ಪಾಟೀಲ್ ಬೆಂಬಲಿತ ಗುಂಪು ಮಂಡಳಿ ಸದಸ್ಯರನ್ನು ಬಸಂತ ಅವರಿಗೇ ಮತ ನೀಡುವಂತೆ ಒತ್ತಾಯಿಸಿದ್ದರು. ಬಸಂತಕುಮಾರ್ ಗೆ ಮತನೀಡುವಂತೆ ಎಸ್ ಎಂ ಎಸ್ ಮೂಲಕವೂ ಬೆದರಿಕೆಯೊಡ್ಡಲಾಗಿತ್ತು ಎಂದು ಮಂಡಳಿಯ ಸದಸ್ಯರು ಆರೋಪಿಸಿದ್ದಾರೆ.