ಜಯಮಾಲಾ ಬಂಧನ : ಕೇರಳ ವಿಧಾನಸಭೆ ನಿರ್ಣಯ

By Staff


ವಿಚಾರಣೆಗೆ ಕ್ಷಣಗಣನೆ, ಕರ್ನಾಟಕದಲ್ಲಿ ಪ್ರಗತಿಪರ ಸಂಘಟನೆಗಳಿಂದ ವ್ಯಾಪಕ ವಿರೋಧ.

ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾದಸ್ಪರ್ಶ ಮಾಡಿರುವುದಾಗಿ ಹೇಳಿದ್ದ ಕನ್ನಡ ಚಿತ್ರನಟಿ ಜಯಮಾಲಾರನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕೆಂದು ಕೇರಳ ವಿಧಾನಸಭೆ ನಿರ್ಧರಿಸಿದೆ.

ವಿಧಾನಸಭೆಯಲ್ಲಿ ಈ ಕುರಿತು ವಿಷಯ ಪ್ರಸ್ತಾಪಗೊಂಡಿತು. ಜಯಮಾಲಾ ಬಂಧನಕ್ಕೆ ಸರ್ವಸಮ್ಮತ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ನಿರ್ಣಯವೊಂದನ್ನು ಅಂಗೀಕರಿಸಲಾಯಿತು.

ಕರ್ನಾಟಕದಲ್ಲಿ ತಳಮಳ : ಜಯಮಾಲಾರನ್ನು ಬಂಧಿಸಿ ವಿಚಾರಣೆಗೊಳಪಡಿಸಲು, ಕೇರಳ ಪೊಲೀಸರು ಯಾವುದೇ ಕ್ಷಣ ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ. ಈ ಮೊದಲು ಜಯಮಾಲಾರಿಂದ ಮಾಹಿತಿ ಪಡೆಯಲು ಬಂದಿದ್ದ ಕೇರಳ ಪೊಲೀಸರ ತಂಡ ಬರಿಗೈಯಿಂದ ತೆರಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಜಯಮಾಲಾ ಪಾದಸ್ಪರ್ಶ ಮಾಡಿದ್ದಾರೋ, ಬಿಟ್ಟಿದ್ದಾರೋ ಎನ್ನುವುದನ್ನು ಅವರ ಆತ್ಮಸಾಕ್ಷಿಗೆ ಬಿಡೋಣ. ಆದರೆ ಈ ಪ್ರಕರಣದಿಂದ ಧಾರ್ಮಿಕ ಸಮಾನತೆ, ಲಿಂಗಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಪ್ರಜಾಪ್ರಭುತ್ವಕ್ಕೇ ಸಂಚಕಾರ ಬಂದಂತಾಗಿದೆ ಎಂದು ಪ್ರಗತಿಪರ ಸಂಘಟನೆಗಳು ಹೇಳಿವೆ.

(ಏಜನ್ಸೀಸ್‌)

Post your views

ಪಾದಸ್ಪರ್ಶ ಪ್ರಕರಣದ ಸುತ್ತ :
ಅಯ್ಯಪ್ಪ ಕ್ಷಮಿಸಪ್ಪ.. ಜಯಮಾಲಾರ ಪ್ರಾಯಶ್ಚಿತ್ತ ಪೂಜೆ
ಜಯಮಾಲಾ ಸುಳ್ಳಿಯಾ? : ಕೇರಳ ಪೊಲೀಸರಿಂದ ವಿಚಾರಣೆ
ಬ್ರಹ್ಮಚಾರಿ ದೇವರು ಅಯ್ಯಪ್ಪನಿಗೆ ಜಯಮಾಲಾರಿಂದ ಅಪಚಾರ?

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X