Just In
Don't Miss!
- News
‘ನಕಲಿ ವ್ಯಾಕ್ಸಿನೇಷನ್’ ವಿಡಿಯೋ ವೈರಲ್: ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಸುಧಾಕರ್
- Education
Karnataka SSLC Exam 2021: ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾತಿ ಕಡ್ಡಾಯ ಇಲ್ಲ
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Sports
ಭಾರತ vs ಆಸೀಸ್: ಕಾಕತಾಳೀಯ, ಕುತೂಹಲಕಾರಿ ಅಂಕಿ-ಅಂಶಗಳು!
- Automobiles
ಕೋವಿಡ್ ವ್ಯಾಕ್ಸಿನ್ ಸಾಗಾಣಿಕೆಗಾಗಿ ಹೊಸ ಮಾದರಿಯ ಟ್ರಕ್ ಸಿದ್ದಪಡಿಸಿದ ಭಾರತ್ ಬೆಂಝ್
- Lifestyle
ಶೇವಿಂಗ್ ಟಿಪ್ಸ್: ಹೀಗೆ ಮಾಡಿದರೆ ತ್ವಚೆ ಮೃದುವಾಗಿರುತ್ತೆ, ತುರಿಕೆ ಇರಲ್ಲ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಜನಿಕಾಂತ್ ಎಂಧಿರನ್ಗೆ ಮತ್ತೊಂದು ಪೀಕಲಾಟ!
ರಜನಿಕಾಂತ್ 'ಎಂಧಿರನ್' ಚಿತ್ರಕ್ಕೆ ವಿಘ್ನಗಳ ಮೇಲೆ ವಿಘ್ನಗಳು ಎದುರಾಗುತ್ತಿವೆ. ತೀರಾ ಇತ್ತೀಚೆಗಷ್ಟೆ ತಮಿಳಿನ ಸಾಹಿತಿಯೊಬ್ಬರು ನನ್ನ ಕತೆಯೊಂದನ್ನು ಕದ್ದು 'ಎಂಧಿರನ್' ಸಿನಿಮಾ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈಗ ತೆಲುಗು ಸಾಹಿತಿಯೊಬ್ಬರು 'ಎಂಧಿರನ್' ಚಿತ್ರ ತಾವು ಬರೆದ ಕಥೆಯೊಂದರ ಕದ್ದ ಮಾಲು ಎಂದು ಆರೋಪಿಸಿದ್ದಾರೆ.
ತೆಲುಗಿನ ಖ್ಯಾತ ಕಾದಂಬರಿಕಾರ ಮೈನಂಪಾಟಿ ಭಾಸ್ಕರ್ ಎಂಬುವವರು 1984ರಲ್ಲಿ ಪ್ರಕಟವಾದ'ಬುದ್ಧಿ ಜೀವಿ' ಎಂಬ ಕಾದಂಬರಿ ಆಧಾರವಾಗಿ 'ಎಂಧಿರನ್' ಚಿತ್ರವನ್ನು ತೆರೆಗೆ ತರಲಾಗಿದೆ. ಕಾದಂಬರಿಯಲ್ಲಿನ ಜೋಕ್ಸನ್ನು ಹಾಗೆಯೇ ಯಥಾವತ್ತಾಗಿ ಭಟ್ಟಿ ಇಳಿಸಿದ್ದಾರೆ ಎಂದು ಮೈನಂಪಾಟಿ ಆರೋಪಿಸಿದ್ದಾರೆ.
ಈ ಸಂಬಂಧ ಅವರು ಸನ್ ಪಿಕ್ಚರ್ಸ್ ಮಾಲೀಕ ಹಾಗೂ ಚಿತ್ರದ ನಿರ್ಮಾಪಕ ಕಲಾನಿಧಿ ಮಾರನ್,ಚಿತ್ರದ ನಿರ್ದೇಶಕ ಶಂಕರ್ ಹಾಗೂ ನಟ ರಜನಿಕಾಂತ್ ಅವರಿಗೆ ನೋಟೀಸ್ ಜಾರಿ ಮಾಡಿದ್ದಾರೆ. ತಮ್ಮ ಕಾದಂಬರಿಯನ್ನು ಬಳಸಿಕೊಂಡಿದ್ದಕ್ಕ್ಕೆ ರು.50 ಲಕ್ಷ ನಷ್ಟ ತುಂಬಿಕೊಡುವಂತೆ ಮೈನಂಪಾಟಿ ಆಗ್ರಹಿಸಿದ್ದಾರೆ.
ಅತ್ತ ತಮಿಳಿನ ಲೇಖಕ ಆರೂರು ತಮಿಳುನಾಥನ್ ಎಂಬುವವರು ತಮ್ಮ 'ಜುಗಿಬಾ' ಎಂಬ ಕತೆಯನ್ನು ಕದ್ದಿರುವುದಾಗಿ ಆರೋಪಿಸಿದ್ದು 'ಎಂಧಿರನ್' ಚಿತ್ರತಂಡಕ್ಕೆ ನೋಟೀಸ್ ಕಳುಹಿಸಿದ್ದಾರೆ. ಇವರು ರು.1ಕೋಟಿ ನಷ್ಟ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ 'ಎಂಧಿರನ್' ಚಿತ್ರಕ್ಕೆ ವಿಚಿತ್ರ ಪೀಕಲಾಟ ಎದುರಾಗಿದೆ. ಪ್ರಚಾರ ಹಾಗೂ ದುಡ್ಡು ಮಾಡುವ ಉದ್ದೇಶದಿಂದ ಎಂಧಿರನ್ ಚಿತ್ರದ ಮೇಲೆ ಹೀಗೆ ಸುಳ್ಳು ಆರೋಪಗಳನ್ನು ಹೊರಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.