Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಸ್ಮಾರಕ ನಿರ್ಮಿಸಲು ಸರ್ಕಾರಕ್ಕೆ ಭಾರತಿ ಡೆಡ್ಲೈನ್
ಸೆಪ್ಟೆಂಬರ್ 18ರೊಳಗೆ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸ್ಮಾರಕ ಕಾಮಗಾರಿಯನ್ನು ಸರ್ಕಾರ ಆರಂಭಿಸಬೇಕು. ಇಲ್ಲದಿದ್ದರೆ ಅಭಿಮಾನಿಗಳ ಜೊತೆ ಸೇರಿ ತಾವೇ ಸ್ಮಾರಕ ನಿರ್ಮಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿಲ್ಲ. ಸರ್ಕಾರದ ಈ ನಿರ್ಲಕ್ಷ್ಯಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸೆ.18ರೊಳಗೆ ವಿಷ್ಣು ಸ್ಮಾರಕ ಕಾಮಗಾರಿ ಆರಂಭಿಸಿ. ಇಲ್ಲದಿದ್ದರೆ ಯಾವುದೇ ಕಾರಣಕ್ಕೂ ತಾವು ರಾಜ್ಯ ಸರ್ಕಾರದ ಮೊರೆ ಹೋಗುವುದಿಲ್ಲ ಎಂದರು. ವಿಷ್ಣು ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಕಣ್ಣು ಕಿವಿ ಮುಚ್ಚಿ ಕುಳಿತಿರುವುದಕ್ಕೆ ಅವರು ಅಸಮಾಧಾನದ ಕಟ್ಟೆಹೊಡೆದಿತ್ತು.
ದ್ವಾರಕೀಶ್ಗೆ ಷರತ್ತು: ದ್ವಾರಕೀಶ್ ನಿರ್ಮಿಸಿರುವ ವಿಷ್ಣುವರ್ಧನ ಚಿತ್ರದ ಬಿಡುಗಡೆಗೂ ಭಾರತಿ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಚಿತ್ರದ ಪ್ರಥಮ ಪ್ರತಿ ನೋಡಿದ ಬಳಿಕವಷ್ಟೆ ಚಿತ್ರ ಬಿಡುಗಡೆಗೆ ಅನುಮತಿ ನೀಡಲಾಗುತ್ತದೆ. ಚಿತ್ರರಂಗದ 10 ಮಂದಿ ಚಿತ್ರ ನೋಡುತ್ತೇವೆ. ವಿಷ್ಣು ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಸನ್ನಿವೇಶಗಳು, ಸಂಭಾಷಣೆ ಚಿತ್ರದಲ್ಲಿ ಇದ್ದರೆ ಚಿತ್ರ ಬಿಡುಗಡೆ ಅವಕಾಶ ಮಾಡಿಕೊಡುವುದಿಲ್ಲ ಎಂದಿದ್ದಾರೆ.
ಅನಂತ್ ಕುಮಾರ್ಗೆ ತರಾಟೆ: ಇದೇ ಸಂದರ್ಭದಲ್ಲಿ ಅವರು ಸಂಸದ ಅನಂತಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಸರ್ಜಾಪುರ ಕೆಂಗೇರಿ ವರೆಗಿನ ರಸ್ತೆಗೆ ವಿಷ್ಣು ಹೆಸರಿಡುವುದಾಗಿ ಅನಂತಕುಮಾರ್ ಸೇರಿದಂತೆ ಹಲವು ಸಂಸದರು ಭರವಸೆ ನೀಡಿದರು. ಆದರೆ ಇದುವರೆಗೂ ರಸ್ತೆಗೆ ವಿಷ್ಣು ಹೆಸರಿಟ್ಟಿಲ್ಲ ಎಂದು ಬೇಸರಿಸಿಕೊಂಡರು. (ದಟ್ಸ್ಕನ್ನಡ ಸಿನಿವಾರ್ತೆ)