Don't Miss!
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- News Asianet Digital Network Survey: ಮತ್ತೊಮ್ಮೆ ಮೋದಿಗೆ ಜೈ ಎಂದ ಮತದಾರರು!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕರಿಗೆ ಮುನ್ನಡೆ : ಕಾರ್ಮಿಕರ ಬಳಗಕ್ಕೆ ಹಿನ್ನಡೆ
ಬೆಂಗಳೂರು : ಹತ್ತು ನಿರ್ಮಾಪಕರ ಸಿನಿಮಾಗಳಿಗೆ ಬಹಿಷ್ಕಾರ ಹಾಕಿದ್ದ, ಚಲನಚಿತ್ರ ಕಾರ್ಮಿಕ ಒಕ್ಕೂಟದ ಮಾನ್ಯತೆ ರದ್ದಾಗಿದೆ. ಸಿನಿಮಾ ಬಿಕ್ಕಟ್ಟು ಆ ಮೂಲಕ ಮತ್ತಷ್ಟು ಕಗ್ಗಂಟಾಗಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಹೊರಬಿದ್ದಿದೆ. ಕಾರ್ಮಿಕ ಒಕ್ಕೂಟದ ಅಧ್ಯಕ್ಷ ಅಶೋಕ್, ಮನಬಂದಂತೆ ವರ್ತಿಸುತ್ತಿದ್ದಾರೆ. ಅವರಿಂದಾಗಿ ತಮ್ಮ ಚಿತ್ರಗಳಿಗೆ ಸಾಕಷ್ಟು ನಷ್ಟವಾಗಿದೆ. ಸರ್ವಾಧಿಕಾರಿಯಂತೆ, ಒಕ್ಕೂಟವನ್ನು ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ನಿರ್ಮಾಪಕರು ಸಭೆಯಲ್ಲಿ ತಮ್ಮ ಅಸಮಾಧಾನ ಮಂಡಿಸಿದರು.
ಇನ್ನು ಮುಂದೆ ಕಾರ್ಮಿಕ ಒಕ್ಕೂಟಕ್ಕೂ, ನಿರ್ಮಾಪಕರಿಗೂ ಯಾವುದೇ ಸಂಬಂಧವಿಲ್ಲ. ತಮಗೆ ಬೇಕಾದ ಕಾರ್ಮಿಕರನ್ನು ನಿರ್ಮಾಪಕರು ಬಳಸಿಕೊಳ್ಳಬಹುದು ಎಂದು ಮಂಡಳಿ ಸೂಚನೆ ನೀಡಿದೆ. ಮಂಡಳಿ ತೀರ್ಮಾನದಿಂದ ನಿರ್ಮಾಪಕರ ಸಂಘಕ್ಕೆ ಗೆಲುವಿನ ಹರ್ಷ.
ಮಂಡಳಿ ನಿರ್ಧಾರವನ್ನು ನಿರ್ಮಾಪಕರ ಸಂಘದ ಅಧ್ಯಕ್ಷ ಸಂದೇಶ್ ನಾಗರಾಜ್ ಸ್ವಾಗತಿಸಿದ್ದಾರೆ. ಮತ್ತೊಂದು ಕಡೆ ಅಶೋಕ್, ಮಂಡಳಿ ಧೋರಣೆಯಿಂದ ಕಾರ್ಮಿಕರಿಗೆ ಅಸಮಾಧಾನವಾಗಿದೆ. ನಿರ್ಮಾಪಕರ ದೌರ್ಜನ್ಯ ಮತ್ತು ಕನ್ನಡ ವಿರೋಧಿ ನೀತಿಗೆ ಅದು ಕುಮ್ಮಕ್ಕು ನೀಡಿದೆ ಎಂದು ದೂರಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)