ಪರಭಾಷಾ ಚಿತ್ರಗಳ ಹಾವಳಿ:ನಿರ್ಮಾಪಕರು ಗರಂ

By * ನಿಸ್ಮಿತಾ

ರಾಜ್ಯದ ಕನ್ನಡ ಚಿತ್ರಮಂದಿರಗಳಿಗೆ ಯಾವುದೇ ನಿಯಮಗಳು ಅನ್ವಯವಾಗುವುದಿಲ್ಲ. ಮನಸ್ಸಿಗೆ ಬಂದಂತೆ, ಅಗತ್ಯಕ್ಕಿಂತ ಹೆಚ್ಚು ಚಲನಚಿತ್ರಗಳ ಮಂದಿರಗಳಲ್ಲಿ ಪರಭಾಷೆ ಚಿತ್ರಗಳನ್ನು ಪ್ರದರ್ಶನ ಕಾಣುತ್ತಿದೆ. ಪರಿಸ್ಥಿತಿ ಬಗ್ಗೆ ಅರಿವಿದ್ದರೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೈಕಟ್ಟಿ ಕೂತಿದೆ ಎಂದು ಕನ್ನಡ ನಿರ್ಮಾಪಕ ಸಂಘ ತೀವ್ರ ವಾಗ್ದಾಳಿ ನಡೆಸಿದೆ.

ಕನ್ನ್ನಡ ಭಾಷೆ, ಕನ್ನಡ ನಿರ್ಮಾಪಕರ ದುಃಸ್ಥಿತಿಗೆ ಪರಿಹಾರ ಅಗತ್ಯ. ಅಗತ್ಯಕ್ಕಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ಪರಭಾಷೆ ಚಿತ್ರಗಳನ್ನು ಪ್ರದರ್ಶಿಸುವುದನ್ನು ನಿಲ್ಲಿಸಬೇಕು. ನಿರ್ಮಾಪಕರ ಹಿತ ಕಾಯಬೇಕು ಎಂದು ಒಕ್ಕೊರಲ ನಿರ್ಧಾರವನ್ನು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ ತೆಗೆದುಕೊಂಡಿದೆ. ಇಂದುಸದಾಶಿವನಗರ ಕ್ಲಬ್ ನಲ್ಲಿ ನಡೆದ ತುರ್ತು ಮಹಾಸಭೆಯಲ್ಲಿ ಈ ನಿರ್ಣಯವನ್ನು ತೆಗೆದುಕೊಳ್ಳಲಾಯಿತು.

ನಿರ್ಮಾಪಕರ ಸಭೆಯ ಹಿನ್ನೆಲೆ
ರಾಜ್ಯದಲ್ಲಿ ಇತ್ತೀಚೆಗೆ ತೆಲುಗಿನ ಖ್ಯಾತ ನಟ ಚಿರಂಜೀವಿ ಅವರ ಮಗ ರಾಮ್ ಚರಣ್ ತೇಜ ಅಭಿನಯದ 'ಮಗಧೀರ' ಚಿತ್ರ ತೆರೆಕಂಡಿತ್ತು. ಭರ್ಜರಿ ಯಶಸ್ಸು ಕಾಣುತ್ತಿರುವ ಈ ಚಿತ್ರವನ್ನು ಅಗತ್ಯಕ್ಕಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಅನುಮತಿ ನೀಡಲಾಗಿದೆ.ಇದು ನಿಯಮ ಬಾಹಿರವಾಗಿದೆ ಎಂದು ಸಾರಾ ಗೋವಿಂದು ಸೇರಿದಂತೆ ಹಲವಾರು ನಿರ್ಮಾಪಕರು ದೂರಿದ್ದರು. ಅಲ್ಲದೆ ,ಈ ಚಿತ್ರದ ಹೆಚ್ಚುವರಿ ಪ್ರದರ್ಶನದಿಂದ ಬರುವ ಲಾಭದ ಹಣದ ಪಾಲು ವಾಣಿಜ್ಯ ಮಂಡಳಿಗೆ ಸೇರುವಂತೆ ಮಾಡಬೇಕು. ಮಗಧೀರ ಚಿತ್ರದ ವಿತರಕರು ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಯಾಗಿದ್ದರೂ, ನಿಯಮ ಉಲ್ಲಂಘಿಸಿದ್ದಾರೆ. ಇದನ್ನು ಕೂಡಲೇ ಸರಿಪಡಿಸಬೇಕು ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಕೆಸಿಎನ್ ಚಂದ್ರಶೇಖರ್ ಆಗ್ರಹಪಡಿಸಿದ್ದಾರೆ.

(ದಟ್ಸ್ ಕನ್ನಡ ಸಿನಿಸುದ್ದಿ)

More from Filmibeat

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X