Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀನಿವಾಸಮೂರ್ತಿವಿರುದ್ಧದ ಆರೋಪ ಸಾಬೀತು
ತೀರ್ಪು ಹೊರಬಿದ್ದ ಬಳಿಕ ಮಾತನಾಡಿರುವ ಶ್ರೀನಿವಾಸಮೂರ್ತಿ, "ನಾನು ನಿರಪರಾಧಿ. ನನ್ನ ವಿರುದ್ಧ ಆಗದವರು ನಡೆಸಿದ ಒಳಸಂಚು ಇದು. ನ್ಯಾಯಕ್ಕಾಗಿ ಹೈಕೋರ್ಟ್ ಮೆಟ್ಟಿಲೇರುವುದಾಗಿ" ಹೇಳಿದ್ದಾರೆ. ಶ್ರೀನಿವಾಸಮೂರ್ತಿ ಅವರ ವಿರುದ್ಧದ ಕೇಸನ್ನು ತ್ವರಿತ ನ್ಯಾಯಾಲಯ ಶುಕ್ರವಾರ ಎತ್ತಿಹಿಡಿದಿತ್ತು. ಈ ಸಂಬಂಧ ಅವರು ಸೂಕ್ತ ನ್ಯಾಯಕ್ಕಾಗಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ.
ಸದ್ಯಕ್ಕೆ ಶ್ರೀನಿವಾಸಮೂರ್ತಿ ಅವರು ಮೈಸೂರಿನಲ್ಲಿ ಚಿತ್ರವೊಂದರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಘಟನೆಯ ವಿವರಗಳು...1987ರಲ್ಲಿ ಕೆಎನ್ ಆರ್ ಟಿ ಎಂಟರ್ ಪ್ರೈಸಸ್ ಲಾಂಛನದಲ್ಲಿ "ಬಾಲ ನೌಕೆ" ಚಿತ್ರ ನಿರ್ಮಿಸಿತ್ತು. ಈ ಚಿತ್ರದ ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಮುರಳಿಕೃಷ್ಣ ಅವರ ಸಹಿಯನ್ನು ಶ್ರೀನಿವಾಸಮೂರ್ತಿ ನಕಲು ಮಾಡಿದ್ದರು ಎಂದು ಆರೋಪಿಸಲಾಗಿತ್ತು.
ಶ್ರೀನಿವಾಸಮೂರ್ತಿ ಹಾಗೂ ಆತನ ಸ್ನೇಹಿತ, ಪಾಲುದಾರನಾದ ಜಾಫರುಲ್ಲಾ ಒಂದು ಪ್ರದೇಶದ ವಿತರಣೆ ಹಕ್ಕುಗಳನ್ನು ರು.5.25 ಲಕ್ಷಕ್ಕೆ ಪಡೆದಿದ್ದರು. ಮುಂಗಡ ಹಣ ಕೊಟ್ಟು ಉಳಿದ ಬಾಕಿ ಹಣ ರು.3.45 ಲಕ್ಷಗಳನ್ನು ವಿತರಕರಿಂದ ಸಂಗ್ರಹಿಸಿದ ಬಳಿಕ ಕೊಡುವುದಾಗಿ ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಆದರೆ ಬಾಕಿ ಹಣವನ್ನು ಶ್ರೀನಿವಾಸಮೂರ್ತಿ ಕೊಡಲಿಲ್ಲ ಎಂದು ಫಿಲ್ಮ್ ಚೇಂಬರ್ ಗೆ ಮುರಳಿಕೃಷ್ಣ ಮೊರೆಹೋದರು. ಮೂರ್ತಿ ಅವರು ಲಾಭಕ್ಕೆ ವಿತರಣೆ ಹಕ್ಕುಗಳನ್ನು ಮಾರಿಕೊಂಡಿದ್ದಾರೆ ಎಂದು ಆರೋಪಿದ್ದರು. ಆದರೆ ಮೂರ್ತಿ ಅವರನ್ನು ಚೇಂಬರ್ ಗೆ ಕರೆಸಿ ಕೇಳಿದಾಗ ತಾವು ಬಾಕಿ ಹಣ ಹಿಂತಿರುಗಿಸಿದ್ದಾಗಿ ದಾಖಲೆಗಳನ್ನು ತೋರಿಸಿದ್ದರು. ತಮ್ಮ ಸಹಿಯನ್ನು ನಕಲು ಮಾಡಿ ಸುಳ್ಳು ದಾಖಲೆಯನ್ನು ಸೃಷ್ಟಿಸಲಾಗಿದೆ ಎಂದು ಮೂರ್ತಿ ವಿರುದ್ಧ ಮುರಳಿಕೃಷ್ಣ ನ್ಯಾಯಾಲಯದಲ್ಲಿ ದಾವಾ ಹೂಡಿದ್ದರು.
ಜುಲೈ 6, 2007ರಲ್ಲಿ 6ನೇ ಎಸಿಎಂಎಂ ನ್ಯಾಯಾಲಯ ನಟ ಶ್ರೀನಿವಾಸಮೂರ್ತಿ ಅವರಿಗೆ ಮೂರು ವರ್ಷಗಳ ಶಿಕ್ಷೆ ಜಾರಿಮಾಡಿತ್ತು. ಬಳಿಕ ಅದನ್ನು ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಅರ್ಜಿಯನ್ನು ವಜಾಗೊಳಿಸಿರುವ ಸೆಷನ್ಸ್ ನ್ಯಾಯಾಲಯ ಶ್ರೀನಿವಾಸಮೂರ್ತಿ ವಿರುದ್ಧದ ತೀರ್ಪನ್ನು ಎತ್ತಿಹಿಡಿದಿದೆ.