Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವರದನಾಯಕನಿಗೆ ಎರಡೂ ಕೈ ಎತ್ತಿದ ನಟಿ ಭೂಮಿಕಾ
ಕಡೆಗೂ 'ವರದನಾಯಕ' ಚಿತ್ರಕ್ಕೆ ನಟಿ ಭೂಮಿಕಾ ಚಾವ್ಲಾ ಸರಿಯಾಗಿ ಕೈಕೊಟ್ಟಿದ್ದಾಳೆ. ಇನ್ನೇನು ಈಕೆ ಚಿತ್ರಕ್ಕೆ ಸಹಿಹಾಕಿಯೇ ಬಿಟ್ಟಳು ಎಂಬಂತೆ ಪೆನ್ನು ಕೈಗೆತ್ತಿಕೊಂಡಿದ್ದಳು. ಆದರೆ ಇದ್ದಕ್ಕಿದ್ದಂತೆ ಏನಾಯಿತೋ ಏನೋ ಪೆನ್ನು ಪೇಪರ್ ಸಮೇತ ಮಾಯವಾಗಿದ್ದಾಳೆ. ಈ ಮೂಲಕ ಭೂಮಿಕಾ ಕನ್ನಡಕ್ಕೆ ಬರುವ ಸುದ್ದಿಗೆ ತೆರೆಬಿದ್ದಿದೆ.
ಶಂಕರೇಗೌಡ ನಿರ್ಮಿಸುತ್ತಿರುವ 'ವರದನಾಯಕ' ಚಿತ್ರದಲ್ಲಿ ಸುದೀಪ್ ಜೊತೆ ಭೂಮಿಕಾ ಅಭಿನಯಿಸಬೇಕಾಗಿತ್ತು. ಡೇಟ್ಸ್ ಹೊಂದಾಣಿಕೆ ಆಗದಿರುವುದೇ ಭೂಮಿಕಾ ಕೈ ಎತ್ತರಲು ಕಾರಣ ಎನ್ನಲಾಗಿದೆ. ಅತ್ತ ಸುದೀಪ್ ಕೂಡ 'ವಿಷ್ಣುವರ್ಧನ' ಹಾಗೂ ತೆಲುಗಿನ 'ಈಗ' ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ.
'ವರದನಾಯಕ' ಚಿತ್ರಕ್ಕೆ ಸುದೀಪ್ ಡಿಸೆಂಬರ್ನಲ್ಲಿ ಡೇಟ್ಸ್ ಕೊಟ್ಟಿದ್ದಾರೆ. ಅದೇ ಡೇಟ್ಸ್ಗೆ ಭೂಮಿಕಾ ಮತ್ತೊಂದು ಚಿತ್ರದಲ್ಲಿ ಎಂಗೇಜ್ ಆಗಿದ್ದಾರೆ. ಈಗ ಮತ್ತೊಬ್ಬ ನಾಯಕಿಯನ್ನು ಕರೆತರುವ ಬಗ್ಗೆ ಶಂಕರೇಗೌಡ ಸಿದ್ಧತೆಗಳನ್ನು ನಡೆಸಿದ್ದಾರೆ.
ತೆಲುಗಿನ ಯಶಸ್ವಿ ಚಿತ್ರ 'ಲಕ್ಷ್ಯಂ' ರೀಮೇಕ್ ಇದಾಗಿದ್ದು ಚಿರಂಜೀವಿ ಸರ್ಜಾ, ನಿಕೇಶಾ ಪಟೇಲ್ ಪ್ರಮುಖ ಪಾತ್ರಧಾರಿಗಳು. ಚಿತ್ರದಲ್ಲಿ ಸುದೀಪ್ ಅವರದು ಗಮನಾರ್ಹ ಪಾತ್ರ. ಯಥಾವತ್ತಾಗಿ ಚಿತ್ರಕತೆಯನ್ನು ಕನ್ನಡಕ್ಕೆ ತರದೆ ಸೂಕ್ತ ಬದಲಾವಣೆಗಳನ್ನು ಮಾಡುತ್ತೇವೆ ಎಂದಿದ್ದಾರೆ ನಿರ್ಮಾಪಕರು. (ಒನ್ಇಂಡಿಯಾ ಕನ್ನಡ)