Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿನಯ್- ಕಾವೇರಿ ಚಿತ್ರಮಂದಿರಗಳ ಮೇಲೆ ‘ಧೂಂ’ ಧಾಂ ದಾಳಿ !
ಬೆಂಗಳೂರು : ಪರಭಾಷಾ ಚಿತ್ರಗಳನ್ನು ಪ್ರದರ್ಶಿಸುತ್ತಿದ್ದ ನಗರದ ಕಾವೇರಿ, ಅಭಿನಯ್ ಚಿತ್ರಮಂದಿರಗಳ ಮೇಲೆ ಕರ್ನಾಟಕ ರಕ್ಷಣಾ ವೇದಿಕೆ ಸೋಮವಾರ ದಾಳಿ ಮಾಡಿದೆ. ಚಿತ್ರಮಂದಿರದ ಕಿಟಕಿ, ಬಾಗಿಲುಗಳಿಗೆ ಕಲ್ಲು ಹೊಡೆದು, ಪರದೆಯನ್ನು ಹರಿದು ಪ್ರತಿಭಟಿಸಿದ್ದಾರೆ.
ಚಿತ್ರಮಂದಿರಕ್ಕೆ ಪೋಲೀಸರು ಬಿಗಿ ಬಂದೋಬಸ್ತು ಏರ್ಪಡಿಸಿದ್ದರೂ ಸಹಾ, ಪ್ರೇಕ್ಷಕರಂತೆ ಒಳ ಸೇರಿದ್ದ ವೇದಿಕೆಯ ಸದಸ್ಯರು ಚಿತ್ರ ಆರಂಭವಾಗುತ್ತಿದ್ದಂತೆ ಕನ್ನಡಪರ ಘೋಷಣೆಗಳ ಕೂಗುತ್ತಾ ಗದ್ದಲ ಆರಂಭಿಸಿದರು. ಪ್ರೇಕ್ಷಕರು ಚಿತ್ರಮಂದಿರದಿಂದ ಹೊರಗೆ ಓಡಿದರು. ಪ್ರತಿಭಟನೆ ಹಿಂಸಾರೂಪ ತಾಳಿತು. ಗಲಭೆಯ ಹಿನ್ನೆಲೆ ಪೋಲೀಸರು 40 ಜನರನ್ನು ಬಂಧಿಸಿದ್ದಾರೆ
ಚಿತ್ರಮಂದಿರದ ಸಿಬ್ಬಂದಿಯ ಹಲ್ಲೆಗೆ ತುತ್ತಾಗಿ ವೇದಿಕೆಯ ಸದಸ್ಯರಿಗೆ ತೀವ್ರ ಗಾಯಗಳಾಗಿದ್ದು, ಅಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.
ಪರಭಾಷಾ ಚಿತ್ರಗಳ ವಿವಾದ ದಿನೇ ದಿನೇ ಹಿಂಸಾರೂಪಕ್ಕೆ ತಿರುಗುತ್ತಿದೆ. ಏಳು ವಾರಗಳ ನಿರ್ಬಂಧವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿರುವ ಕಾರಣ ಸರಕಾರ ಕೈಕಟ್ಟಿ ಕುಳಿತಿದೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್